Ad Widget

ಬೆಳ್ಳಾರೆಯಲ್ಲಿ ಸಾರ್ವಜನಿಕ ರುದ್ರಭೂಮಿ ನಿರ್ಮಿಸಲು ಜನರ ಆಗ್ರಹ – ಸರಕಾರದಿಂದ ಮಂಜೂರಾದ 30 ಲಕ್ಷ ಅನುದಾನಕ್ಕೆ ಅಡ್ಡಗಾಲು – ಲಕ್ಷಾಂತರ ಹಣ ದುರುಪಯೋಗ ಆಗಿದೆಯೇ?

ಸುಳ್ಯ ತಾಲೂಕಿನಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಪೇಟೆಗಳಲ್ಲಿ ಬೆಳ್ಳಾರೆಯೂ ಒಂದು. ಇಲ್ಲಿ ವ್ಯವಸ್ಥಿತ ರುದ್ರಭೂಮಿ ಮರೀಚಿಕೆಯಾಗಿಯೇ ಉಳಿದಿದ್ದು, ಆಡಳಿತ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆ ಕಂದಾಯ ಇಲಾಖೆಯು ಸುಮಾರು 84 ಸೆಂಟ್ಸ್ ಜಾಗ ಮಂಜೂರು ಗೊಳಿಸಿದ್ದು ಇದರ ಅಭಿವೃದ್ಧಿಗಾಗಿ ಈಗಾಗಲೇ ಲಕ್ಷಾಂತರ ಹಣ ವ್ಯಯಿಸಲಾಗಿದೆ. ಲಕ್ಷಾಂತರ ಖರ್ಚು ಮಾಡಿ ಅವೈಜ್ಞಾನಿಕ ರೀತಿಯಲ್ಲಿ...

ಅಮರ ಸುಳ್ಯ ಸುದ್ದಿ ಯುಗಾದಿ ವಿಶೇಷಾಂಕ ಬಿಡುಗಡೆ , ಮಾಧ್ಯಮ ಕ್ಷೇತ್ರದಲ್ಲಿ ಜನಪರವಾಗಿ ಇನ್ನಷ್ಟು ಕಾಳಜಿ ಮತ್ತು ಎಚ್ಚರಿಸಬೇಕಾದ ನೈಜವರದಿಗಳು ಪ್ರಕಟವಾಗಲಿ – ಜಿ ಮಂಜುನಾಥ್.

ಸುಳ್ಯದ ಜನಪರ ಪತ್ರಿಕೆಯಾಗಿ ಕಳೆದ 13 ವರ್ಷಗಳಿಂದಕಾರ್ಯನಿರ್ವಹಿಸುತ್ತಿರುವ ಅಮರ ಸುಳ್ಯ ಸುದ್ದಿ ಪತ್ರಿಕೆಯ ಮೂರನೇ ಆವೃತ್ತಿಯ ಯುಗಾದಿ ವಿಶೇಷಾಂಕವನ್ನು ಸುಳ್ಯ ತಾಲೂಕು ದಂಢಾಧಿಕಾರಿಗಳಾದ ಜಿ ಮಂಜುನಾಥ್ ಲೋಕಾರ್ಪಣೆ ಗೊಳಿಸಿದರು . ಅಮರ ಸುದ್ದಿಯು ಪಕ್ಷ , ಜಾತಿ ಮತ ಭೇದವಿಲ್ಲದೆ ಸಮಾಜದ ಕೈ ಗನ್ನಡಿಯಾಗಿ ನಿರಂತರವಾಗಿ ಮೂಡಿ ಬರುತ್ತಿದ್ದು ಸುಳ್ಯ ತಾಲೂಕು ಕಛೇರಿಯಲ್ಲಿ ಲೋಕಾರ್ಪಣೆ ಕಾರ್ಯಕ್ರಮವನ್ನು...
Ad Widget

ಸುಳ್ಯ ಸಿಎ ಬ್ಯಾಂಕ್ ಮುಂಭಾಗ ಮಲಗಿದ್ದ ಅಪರಿಚಿತ ವ್ಯಕ್ತಿ ಸಾವು , ಮೃತದೇಹ ಆಸ್ಪತ್ರೆಗೆ ರವಾನೆ.

ಸುಳ್ಯ ಸಿ ಎ ಬ್ಯಾಂಕ್ ಮುಂಭಾಗ ಮಲಗಿದ್ದ ಅಪರಿಚಿತ ವ್ಯಕ್ತಿ ಒಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಮೃತ ದೇಹವನ್ನು ಪ್ರಗತಿ ಅಂಬ್ಯುಲೆನ್ಸ್‌ನಲ್ಲಿ ಅಚ್ಚು ಪ್ರಗತಿಯವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಮೃತಪಟ್ಟ ವ್ಯಕ್ತಿಯ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದ್ದು ಇದೀಗ ಪೋಲೀಸ್ ಇಲಾಖೆಯು ವ್ಯಕ್ತಿಯ ಮಾಹಿತಿ ಕಲೆಹಾಕಲು ಪ್ರಾರಂಭಿಸಿರುವುದಾಗಿ ತಿಳಿದುಬಂದಿದೆ.

ಮರ್ಕಂಜ: ಗಣಿಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಗ್ರಾಮಸ್ಥರು, ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ!

ತಾಲೂಕು ಕಛೇರಿ ಮುಂಭಾಗ ಸೇರಿದ ಗ್ರಾಮಸ್ಥರು, ತಹಶೀಲ್ದಾರರಿಗೆ ಮನವಿ ಸಲ್ಲಿಕೆ ಮರ್ಕಂಜ : ಅಳವುಪಾರೆಯ ಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆಯದಿದ್ದಲ್ಲಿ ಚುನಾವಣಾ ಬಹಿಷ್ಕಾರ ಮಾಡುವುದಾಗಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇದೀಗ ತಾಲೂಕು ಕಛೇರಿ ಮುಂಭಾಗ  ಗ್ರಾಮಸ್ಥರು ಸೇರಿದ್ದಾರೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಅಳವುಪಾರೆ ಎಂಬಲ್ಲಿ ಸ. ನಂಬ್ರ ೧೭೩/೧ಬಿ೨ಎಪಿಂ ರ ಸರಕಾರಿ...

ಮಂಗಳೂರಿನಲ್ಲಿ ರೈಲಿನಡಿಗೆ ಬಿದ್ದು ಆಚಳ್ಳಿ ಯುವಕ ಮೃತ್ಯು!

ಮಂಗಳೂರಿನಲ್ಲಿ ರೈಲಿನಡಿಗೆ ಬಿದ್ದು ಗುತ್ತಿಗಾರು ಗ್ರಾಮದ ಆಚಳ್ಳಿ  ಯುವಕನೋರ್ವ ಮೃತಪಟ್ಟ ಘಟನೆ  ಎ. 07 ರಂದು ನಡೆದಿದೆ.ಗುತ್ತಿಗಾರು ಗ್ರಾಮದ ಆಚಳ್ಳಿ ಹಂದಿಪಾರೆ ನಿವಾಸಿ ಸುಪ್ರೀತ್ ನಾಯ್ಕ ರವರು ಮೃತಪಟ್ಟ ದುರ್ದೈವಿ. ತನ್ನ ತಾಯಿ ಹಾಗೂ ಅಕ್ಕನೊಂದಿಗೆ ಮಂಗಳೂರಿನಲ್ಲಿ ನೆಲೆಸಿರುವ ಈತ ಎ.6 ರಂದು ರಾತ್ರಿ ವೇಳೆ ಮನೆಯಿಂದ ಹೋಟೆಲ್ ಗೆಂದು ಬಂದಿದ್ದ, ಸ್ವಲ್ಪ ಹೊತ್ತಿನ ಬಳಿಕ...

ಐವರ್ನಾಡು :  ಕಾಂಗ್ರೆಸ್ ಗ್ರಾಮ ಸಮಿತಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಮಂಗಳೂರು ಲೋಕಸಭಾ ಚುನಾವಣೆ, ಬ್ಲಾಕ್ ಕಾಂಗ್ರೆಸ್ ಸುಳ್ಯ ಇದರ  ಐವರ್ನಾಡು  ಗ್ರಾಮ ಸಮಿತಿಯ ಪೂರ್ವಭಾವಿ ಸಭೆ ಇಂದು ಐವರ್ನಾಡಿನ ಎನ್.ಎಂ.ಬಾಲಕೃಷ್ಣ ಗೌಡ ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಂ , ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಗಳಾದ ಶ್ರೀ ಎಂ. ವೆಂಕಪ್ಪ ಗೌಡ, ದ.ಕ ಜಿಲ್ಲಾ...

ಜೋಡುಪಾಲ : ಖಾಸಗಿ ಬಸ್ಸು ಪಲ್ಟಿ

ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಗೌರಿಶಂಕರ್ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಘಟನೆ ಇಂದು ಬೆಳಿಗ್ಗೆ ಜೋಡುಪಾಲ ಬಳಿ ನಡೆದಿದೆ. ಹಲವು ಸಣ್ಣ ಪುಟ್ಟ ಜನರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ
error: Content is protected !!