Ad Widget

ಜೆಡಿಎಸ್ ಯುವ ಮುಖಂಡ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ

ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆ.ಡಿ .ಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನ ತಳಮಟ್ಟದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಭಿನ್ನಮತ ಭುಗಿಲೆದ್ದಿದ್ದು ಹಲವಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿಯುತ್ತಿದ್ದಾರೆ.

ಸುಳ್ಯದ ಜೆಡಿಎಸ್ ಯುವ ಮುಖಂಡ ಪ್ರವೀಣ್ ಮುಂಡೋಡಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಮಿಥುನ್ ರೈ ಅವರಿಗೆ ಮತ ಕೇಳಿದ್ದೆವು. ಈಗ ಮತ್ತೆ ಬಿಜೆಪಿ ಅಭ್ಯರ್ಥಿ ಜೊತೆಗೂಡಿ ಮತಯಾಚನೆ ಮಾಡುವುದು ಸಾಧ್ಯವಿಲ್ಲ. ಹಾಗೂ ಕಾಂಗ್ರೆಸ್ ನ ಅಭಿವೃದ್ಧಿ ಪರ ಆಡಳಿತ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಮುಂದೆ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ.

ಇಂದು ಅವರನ್ನು ಪಂಜದಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಪಕ್ಷದ ಶಾಲು ಹೊದಿಸಿ ಕಾಂಗ್ರೆಸ್‌ಗೆ ಬರಮಾಡಿಕೊಂಡರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!