Ad Widget

ಕಡಬದಲ್ಲಿ ಚೌಟ ಪರ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೃಹತ್ ರೋಡ್ ಶೋ

ದ.ಕ. ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಡಬದಲ್ಲಿ ರೊಡ್‌ ಶೋ ನಡೆಸಿದರು.

ಹೆಲಿಕಾಪ್ಟ‌ರ್ ಮೂಲಕ ಆಗಮಿಸಿದ ಅಣ್ಣಾಮಲೈ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದರು. ಕಡಬದ ಎಪಿಎಂಸಿ ಪ್ರಾಂಗಣ ಸಮೀಪದ ಗಣೇಶ್ ಬಿಲ್ಡ್‌ಂಗ್ ಬಳಿಯಿಂದ ಆರಂಭಗೊಂಡ ರೋಡ್ ಶೋ ಪೇಟೆಯಲ್ಲಿ ಸಾಗಿ ಮುಖ್ಯ ಪೇಟೆಯಲ್ಲಿ ಸಮಾಪನಗೊಂಡಿತು.
ಶಾಸಕಿ ಭಾಗೀರಥಿ ಮುರುಳ್ಯ ,ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ,ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ , ಮಾಜಿ ಸಚಿವ ಎಸ್ ಅಂಗಾರ , ವೆಂಕಟ್ ವಳಲಂಬೆ , ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಸಾಥ್ ನೀಡಿದರು.

Related Posts

error: Content is protected !!