Ad Widget

ರಾಘವ ಗೌಡ ದಂಬೆಕೋಡಿ ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ದಂಬೆಕೋಡಿ ನಿವಾಸಿ ರಾಘವ ಗೌಡರು ಅಲ್ಪಕಾಲದ ಅಸೌಖ್ಯದಿಂದ  ಎ.22ರಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಯಶೋಧಾ, ಪುತ್ರ ಜೀವನ್, ಪುತ್ರಿಯರಾದ ಪ್ರೀತಿಕಾ, ಜಶ್ಮಿ ಹಾಗೂ‌ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ಆಲೆಟ್ಟಿ: ತಲೆಪಳದಲ್ಲಿ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ನಿನ್ನೆ ಬೀಸಿದ ಗಾಳಿಮಳೆಗೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾದ ಘಟನೆ ನಡೆದಿದೆ. ಆನಂದ ನಾಯ್ಕರವರ  ಮನೆಯಲ್ಲಿ ಮರ ಬೀಳುವ ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿದ ಆಲೆಟ್ಟಿ ಪಂಚಾಯತ್ ಸದಸ್ಯಸತ್ಯಕುಮಾರ್ ಆಡಿಂಜ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸುವಲ್ಲಿ ಪ್ರಯತ್ನಿಸಿದರು.
Ad Widget

ಮಂಡೆಕೋಲು ಗ್ರಾ. ಪಂ. ಗ್ರಂಥಾಲಯದಲ್ಲಿ ನಿರಂತರ ೧೦ ದಿನಗಳ ಮಕ್ಕಳ ಬೇಸಿಗೆ ಶಿಬಿರ ಸಂಪನ್ನ

ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಎ.12ರಂದು ಮಕ್ಕಳ ಬೇಸಿಗೆ ಶಿಬಿರವನ್ನು  ಅಮರಮಡ್ನೂರು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೂಪವಾಣಿ  ಉದ್ಘಾಟಿಸಿದರು. ಎ. 22ವರೆಗೆ ಲತಾಮಧುಸೂದನ್ ರವರ ‌ಮುಖೇನ  ಶಿಬಿರವು  ಸಂಪನ್ನಗೊಂಡಿತು.ಶಿಬಿರದಲ್ಲಿ ವಿವಿಧ ಚಟುವಟಿಕೆಗಳಾದ ಯೋಗ ,ಧ್ಯಾನ, ಕ್ರಾಪ್ಟ್ , ಕಸದಿಂದ ರಸ, ಹಸಿರು ಎಲೆಗಳಿಂದ ಚಿತ್ರಗಳ ರಚನೆ ವ್ಯಕ್ತಿತ್ವ ವಿಕಸನ ಇಂಗ್ಲಿಷ್ ಸ್ಪೋಕನ್ ಕ್ಲಾಸ್ ಸ್ಕಿಲ್ ಡೆವಲವ್...

ಕಾಂಗ್ರೆಸ್ ಕಾರ್ಯಕರ್ತರಿಂದ ಸುಳ್ಯ ನಗರದಲ್ಲಿ ಮತಯಾಚನೆ

ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡ ಹಾಗೂ ನಗರ ಪಂಚಾಯತ್ ಸದಸ್ಯರು, ನಗರ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ನಗರದ ಪ್ರಮುಖರು ಸೇರಿ ಸುಳ್ಯ ನಗರದಲ್ಲಿ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚನೆ ಮಾಡಿದರು.

’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ – ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ

ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ...
error: Content is protected !!