Ad Widget

ಗುತ್ತಿಗಾರು; ಸತ್ಯದೇವತೆ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಗುತ್ತಿಗಾರಿನ ಮುತ್ತಪ್ಪ ನಗರ ಶ್ರೀ ಗುರು ಕಾಂಪ್ಲೆಕ್ಸ್ ನಲ್ಲಿ ಮುಕುಂದ ಹಿರಿಯಡ್ಕ ರವರ ಮಾಲಕತ್ವದ ಸತ್ಯದೇವತೆ ಮೋಟಾರ್ ಡ್ರೈವಿಂಗ್ ಸ್ಕೂಲ್ ಮೇ 1 ರಂದು ಶುಭಾರಂಭಗೊಂಡಿತು.ಈ ಸಂದರ್ಭದಲ್ಲಿ ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಾಜೆ, ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯ ಜಗದೀಶ ಬಾಕಿಲ, ಶ್ರೀ ಗುರು ಕಾಂಪ್ಲೆಕ್ಸ್ ಮಾಲಕ ಪುನೀತ್, ಶ್ರೀಧರ ಪಂಜಿಗಾರು ಮೊದಲಾದವರು...

ಹರಿಹರ ಪಲ್ಲತ್ತಡ್ಕ : ಅಶಕ್ತ ಕುಟುಂಬದ ಸಹೋದರ-ಸಹೋದರಿಗೆ ಮನೆ ನಿರ್ಮಿಸಿ ಹಸ್ತಾಂತರಿಸಿದ “ಸಚಿನ್ ಕ್ರೀಡಾ ಸಂಘ”

https://youtu.be/aImq7e_Klr4?si=hFemg4IPKH2gXek8 ಹರಿಹರ ಪಲ್ಲತ್ತಡ್ಕ ಗ್ರಾಮದ ಮಿತ್ತಮಜಲು ಎಂಬಲ್ಲಿ ವಾಸಿಸುತ್ತಿರುವ ಶಿವರಾಮ ಆಚಾರ್ಯ ಹಾಗೂ ಅವರ ಸಹೋದರಿ ರತ್ನಾವತಿ ಅವರಿಗೆ ಹರಿಹರ ಪಲ್ಲತ್ತಡ್ಕದ ಸಚಿನ್ ಕ್ರೀಡಾ ಸಂಘದ ಸದಸ್ಯರು ಮನೆ ನಿರ್ಮಿಸಿದ್ದು, ಇಂದು(ಮೇ.01) ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ದಾನಿಗಳ ಸಹಕಾರದಿಂದ ಸಚಿನ್ ಕ್ರೀಡಾ ಸಂಘದ ಸದಸ್ಯರೇ ಹಗಲು-ರಾತ್ರಿ ಶ್ರಮಸೇವೆಯ ಮೂಲಕ ಮನೆಯನ್ನು ನಿರ್ಮಾಣ ಮಾಡಿದ್ದು, ಇಂದು...
Ad Widget

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್. ಜೆ. ಯೇಸುರಾಜ್ ನೇಮಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ನೇಮಕಗೊಂಡಿದ್ದಾರೆ.ನೂತನ ಎಇಒ ಅವರಿಗೆ ಪ್ರಭಾರ ಎಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಅಧಿಕಾರ ಹಸ್ತಾಂತರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರಕಾರ ನೇಮಿಸಿತ್ತು. ಎ.30...

ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳಲ್ಲಿ ಮಿಂದೆದ್ದ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

ಭಕ್ತಿ ಭಾವದಿಂದ ಪಾಲ್ಗೊಂಡು ಅಪೂರ್ವ ಕ್ಷಣಗಳನ್ನು ಕಣ್ತುಂಬಿಕೊಂಡ ಭಕ್ತಾದಿಗಳುಸುಳ್ಯ: ತಾಲೂಕಿನ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ಶೀ ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನೆರವೇರಿತು. ಹಲವು ದಿನಗಳಿಂದ ಕಾತರ, ಕುತೂಹಲ ಹಾಗೂ ಭಕ್ತ ಭಾವದಿಂದ ಕಾಯುತ್ತಿದ್ದ ಕ್ಷಣಗಳಿಗೆ ಕೊನೆಗೂ ಮುಹೂರ್ಯ ಕೂಡಿ ಬಂದಿತು. ಬೆಳಿಗ್ಗೆ 10.18 ರ ಮಿಥುನ ಲಗ್ನ...

ಹೃದಯಾಘಾತವಾಗಿ ಕೇಶವ ಗೌಡ ಹುದೇರಿ  ನಿಧನ

ಮುರುಳ್ಯ ಗ್ರಾಮದ ಹುದೇರಿ ದಿ.ಸಂಕಪ್ಪ ಗೌಡರ ಪುತ್ರ ಕೇಶವರವರು ಹೃದಯಾಘಾತದಿಂದ ಎ.29 ರಂದು ಮುಂಬೈಯಲ್ಲಿ ನಿಧನರಾದರು. ಇವರು ಮುಂಬೈಯ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಮೃತರು ಪತ್ನಿ ತಾರಾ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ಸಹೋದರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತದೇಹವು ಮುಂಬೈಯಿಂದ ಊರಿಗೆ ತಲುಪಿದ್ದು,  ಅಂತ್ಯಸಂಸ್ಕಾರ ಮಾಡಲಾಯಿತು.
error: Content is protected !!