Ad Widget

ವಸಂತ ಬಂಗೇರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಂತಾಪ


ದ.ಕ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ನಿಧನಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನಗಳನ್ನು ಸಲ್ಲಿಸಲಾಯಿತು. ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಮ್ ಶಹೀದ್ ತೆಕ್ಕಿಲ್ ನುಡಿ ನಮನ ಸಲ್ಲಿಸಿ ಮಾತನಾಡಿ ರಾಜ್ಯ ಕಂಡ ಅಭೂತಪೂರ್ವ ರಾಜಕಾರಿಣಿ ನೇರ ನಡೆ ನುಡಿಯ ನಿಷ್ಠಾವಂತ ರಾಜಕಾರಣಿ, ಬಡವರ ಕೆಲಸ ಕಾರ್ಯಗಳಿಗೆ ಅಧಿಕಾರಿಗಳು ಸ್ಪಂದಿಸದೆ ಇದ್ದಾಗ ಛಲದಿಂದ ಮಾಡಿಸುತ್ತಿದ್ದರು. ಜನಪಯೋಗಿ ಕೆಲಸಗಳಲ್ಲಿ ಬಂಗೇರರು ಸದಾ ಮುಂದು ಜಾತ್ಯತೀತ ನಾಯಕ ಲಂಚ ಭ್ರಷ್ಟಾಚಾರಿಗಳಿಗೆ ಸಿಂಹ ಸ್ವಪ್ನರಾಗಿದ್ದರು ಅವರ ಅಗಲುವಿಕೆ ಜಾತ್ಯತೀತ ತತ್ವಕ್ಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಕೆಪಿಸಿಸಿ ಕಾರ್ಯದರ್ಶಿ ಎಂಬ ನೆಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ಉಸ್ತುವಾರಿಯಾಗಿದ್ದ ಸಂದರ್ಭದಲ್ಲಿ ಅವರ ಒಡನಾಟ ಪೊಲೀಸ್ ಠಾಣೆ ಯೊಳಗೆ ನಡೆಸಿದ ಧರಣಿ ಕಾರ್ಯಕರ್ತರಿಗೆ ಅನ್ಯಾಯ ಆದಾಗ ಪ್ರತಿಭತಟಿಸುವ ರೀತಿ ಅಧಿಕಾರಿಗಳನ್ನು ಹತೋಟಿಯಲ್ಲಿಟ್ಟ ರೀತಿ ಅವಿಸ್ಮರಣೀಯ ಅವರ ನಿಧನದಿಂದ ಆದ ನೋವು ಸಹಿಸುವ ಶಕ್ತಿ ಕುಟುಂಬಕ್ಕೆ, ಅಭಿಮಾನಿಗಳಿಗೆ ಪಕ್ಷಕ್ಕೆ ದೇವರು ದಯಪಾಲಿಸಲಿ ಎಂದು ನುಡಿ ನಮನದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್ ಹೇಳಿದರು ದರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ ಮಾತನಾಡಿ, ಸಮಾಜದ ನೊಂದವರ ಪಾಲಿಗೆ ದ್ವನಿಯಾಗಿದ್ದರು. ನಾವು ಓರ್ವ ಉತ್ತಮ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದರು . ಸಭೆಯಲ್ಲಿ ಬ್ಲಾಕ್ ಕಾರ್ಯದರ್ಶಿ ಪಿ.ಎಸ್ ಗಂಗಾಧರ್ ಮಾತನಾಡಿ ಅವರ ನಿಧನ ಪಕ್ಷಕ್ಕೆ ರಾಜ್ಯಕ್ಕೆ ದೊಡ್ಡ ನಷ್ಟ ಎಂದರ ,ಗೋಕುಲದಾಸ್ ಅವರು 46 ವರ್ಷಗಳ ಹಿಂದೆ ವಸಂತ್ ಬಂಗೇರ ಮಾಡಿದ ಸಹಾಯವನ್ನು ಸ್ಮರಿಸಿದರು ದಿನೇಶ್ಅಂಬೇಕಲ್ಲು , ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ್, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ಭಟ್, ದೀರಾ ಕ್ರಾಸ್ತಾ, ನಗರ ಪಂಚಾಯತ್ ನಾಮ ನಿರ್ದೇಶನ ಸದಸ್ಯ ಸಿದ್ಧೀಕ್ ಕೊಕ್ಕೊ, ರಾಜು ಪಂಡಿತ್ ಎನ್ ಎಸ್ ಯು ಐ ಅಧ್ಯಕ್ಷರಾದ ಧನುಷ್ ಕುಕ್ಕೆಟ್ಟಿ ಮೊದಲಾದವರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!