Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಂಭ್ರಮ ಹಾಗೂ ಸಾಧಕರಿಗೆ ಸನ್ಮಾನ – ಪೆಟ್ರೋಲ್ ಪಂಪ್ ಗೆ ಶಿಲಾನ್ಯಾಸ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ “ಶತ ಸಂಭ್ರಮ” ಕಾರ್ಯಕ್ರಮವು ಮೇ.31 ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಶತಮಾನೋತ್ಸವದ ಅಂಗವಾಗಿ ಸಹಕಾರ ಧ್ವಜಾರೋಹಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ನೆರವೇರಿಸಿದರು. ಶತಮಾನೋತ್ಸವದ ನಾಮಫಲಕವನ್ನು ಪ್ರಸಾದ್ ಕೌಶಲ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡ...

ಗುತ್ತಿಗಾರು : ಸೇವಾ ನಿವೃತ್ತಿ ಪಡೆದ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ

ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದಲ್ಲಿ ಉಪ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿ ಮೇ.31 ರಂದು ನಿವೃತ್ತರಾದ ಕುಮಾರ್ ಸಿ.ಎಚ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷರಾದ ಕಿಶೋರ್ ಅಂಬೆಕಲ್ಲು , ಸಿಇಓ ಶರತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
Ad Widget

ಸಂಪಾಜೆ : ಅನಾಥೆಯಾಗಿದ್ದ ಒಂಟಿ ಜೀವಕ್ಕೆ ಪುನರ್ವಸತಿ ಕೇಂದ್ರದ ಆಸರೆ 

ಸಂಪಾಜೆಯ ಗಡಿಕಲ್ಲು ದಿ. ಸೋಮಪ್ಪ ಗೌಡ ಇವರ ಪತ್ನಿ ವಿಮಲ ಕೆ ಎಮ್ (74) ವಯೋ ಸಹಜ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಕ್ಕಳು ಇಲ್ಲದೆ ಅನಾಥೆಯಾಗಿ ಜೀವನ ನಡೆಸುತ್ತಿದ್ದರು. ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಹೃದಯಿಗಳ ಸಹಕಾರದಿಂದ ಇವರನ್ನು ಹೆಚ್ಚಿನ ಆರೈಕೆಗಾಗಿ ಮತ್ತು ಪುನರ್ವಸತಿಗಾಗಿ ಕೇಂದ್ರಕ್ಕೆ ಕಳುಹಿಸುವ ಬಗ್ಗೆ ಪ್ರಯತ್ನಿಸಲಾಗಿತ್ತು. ಇದೀಗ ಜಿಲ್ಲಾ ವಿಕಲಚೇತನ ಕಲ್ಯಾಣ...
error: Content is protected !!