- Wednesday
- April 2nd, 2025

ಅರೋಗ್ಯ ಪ್ರಸಾದಿನೀ ಆರೋಗ್ಯ ಮಾಹಿತಿ ಕಾರ್ಯಾಗಾರವು , ಜೂನ್ 9 ರಂದು ನರಿಮೊಗರಿನ ಪಾದೆ ಎಂಬಲ್ಲಿರುವ ಪ್ರಸಾದಿನೀ ಅಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಿತು. ದೀಪಪ್ರಜ್ವಲನದ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಎನ್. ದುಗ್ಗಪ್ಪ ಇವರು "ಆರೋಗ್ಯದ ಕುರಿತ ಇಂತಹ ಕಾರ್ಯಕ್ರಮಗಳನ್ನು ಮಾಡುವ , ಬರಹಗಳ ಮೂಲಕ ಜನಜಾಗೃತಿ ಮೂಡಿಸುವ ,...

ಬೆಳ್ಳಾರೆಯ ಎ.ಪಿ.ಎಂ.ಸಿ ಸಂತೆ ಮಾರುಕಟ್ಟೆಯ ಬಳಿ ಮಹಿಳೆಯ ಶವ ಪತ್ತೆಯಾದ ಘಟನೆ ಜೂ.10 ರಂದು ನಡೆದಿದೆ. ಮಹಿಳೆ ಬೆಳ್ಳಾರೆಯ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದ್ದು ಬೆಳ್ಳಾರೆ ಪೊಲೀಸರು ಸ್ಥಳಕ್ಕಾಮಿಸಿರುವುದಾಗಿ ತಿಳಿದು ಬಂದಿದೆ. ತಲೆಗೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಕನಕಮಜಲು ಗ್ರಾಮ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಲೈನ್ ಗೆ ತಾಗುವ ಮರದ ರೆಂಬೆ ಕೊಂಬೆ ಗಳನ್ನು ತೆರವುಗೊಳಿಸಲಾಯಿತು. ಮೆಸ್ಕಾಂ ಸಿಬ್ಬಂದಿಗಳ ಜತೆ ಕನಕಮಜಲು ಯುವಕ ಮಂಡಲದ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸಿದರು.

ಅಮರ ಸಂಘಟನಾ ಸಮಿತಿ ಸುಳ್ಯ ಮತ್ತು ಅರಕ್ಷಕ ಠಾಣೆ ಬೆಳ್ಳಾರೆ ಇದರ ಸಹಯೋಗದಲ್ಲಿ ಕಾಡು ಬೆಳಿಸಿ ನಾಡು ಉಳಿಸಿ ಎಂಬ ಧೈಯ ವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವನ್ನು ಜೂ.09 ರಂದು ಆರಕ್ಷಕ ಠಾಣೆ ಬೆಳ್ಳಾರೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪ್ರಗತಿಪರ ಕೃಷಿಕ...

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಸ್ವರ ಮಾಂತ್ರಿಕ, ಗಾನಗಂಧರ್ವ, ಪದ್ಮಭೂಷಣ ಡಾ. ಎಸ್ ಪಿ ಬಾಲಸುಬ್ರಮಣ್ಯಂ ಅವರ 78ನೇ ಜನ್ಮದಿನಾಚರಣೆಯ ಪ್ರಯುಕ್ತ ಎಸ್ ಪಿ ಬಿ ಸಂಗೀತ ಸಂಭ್ರಮ ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದ ವೇದಿಕೆಯಲ್ಲಿ ಜೂನ್ 9ರಂದು ಜರುಗಿತು.ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು, ಗಾಯಕರು...

ಸತತವಾಗಿ ಮೂರನೇ ಭಾರಿಗೆ ದೇಶದ ಪ್ರಧಾನ ಮಂತ್ರಿಗಳಾಗಿ ನರೇಂದ್ರ ದಾಮೋಧರ್ ದಾಸ್ ಮೋದಿ ಪದಗ್ರಹಣ ಹಿನ್ನಲೆಯಲ್ಲಿ ಚೆಂಬು ಗ್ರಾಮದ ಬಾಲಂಬಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೂ.9ರಂದು ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್.ಸಿ. ಅನಂತ ಊರುಬೈಲು, ಬಿಜೆಪಿ ವಕ್ತಾರ ಸುಬ್ರಹ್ಮಣ್ಯ ಉಪಾಧ್ಯಾಯ, ಶ್ರೀನಿವಾಸ ನಿಡಿಂಜಿ ಸೇರಿದಂತೆ ಹಲವಾರು ಮಂದಿ...

ಪ್ರಕೃತಿ ಮತ್ತು ಮಾನವ ಸಂಬಂಧ ಚೆನ್ನಾಗಿರಬೇಕು. ಕಾಡಿನ ನಾಶದಿಂದ ಪ್ರಾಣಿ ಪಕ್ಷಿಗಳು ನಾಡಿಗೆ ಬರುತ್ತಿವೆ.ಅವುಗಳ ರಕ್ಷಣೆ ಮಾಡಬೇಕು.ಹಾವುಗಳನ್ನು ಅವುಗಳ ಮೊಟ್ಟೆಗಳನ್ನು ರಕ್ಷಿಸಬೇಕು.ಅವುಗಳ ಸಂತತಿ ಕ್ಷೀಣವಾಗಬಾರದು ಎಂದು ಉರಗ ತಜ್ಞ ತೇಜಸ್ ಪುತ್ತೂರು ಹೇಳಿದರು.ವಿಷಕಾರಿ,ವಿಷಕಾರಿಯಲ್ಲದ ಹಾವುಗಳ ಮಾಹಿತಿ,ಮುಂಜಾಗ್ರತೆ,ಹಾವು ಕಡಿದಾಗ ತತ್ ಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.ಅವರು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ...

ಜೂ . 09 ರಂದು ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೇವಮ್ಮ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ಮುಂಗಾರು ಕವಿಗೋಷ್ಠಿ ಮತ್ತು ಧಾರ್ಮಿಕ ಕೃತಿ ಬಿಡುಗಡೆ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ಜ್ಯೋತಿಷ್ಯರು, ಗಾಯಕರು, ಚಿತ್ರ ನಿರ್ದೇಶಕರಾದ ಎಚ್ ಭೀಮರಾವ್ ವಾಷ್ಠರ್ ರವರು ವಹಿಸಿದ್ದರು. ಉದ್ಘಾಟನೆಯನ್ನು ಚೈತನ್ಯ ಸೇವಾಶ್ರಮ ಇದರ...