Ad Widget

ಕುಕ್ಕೆ ಸುಬ್ರಹ್ಮಣ್ಯ: ಡಾ. ರವಿ ಕಕ್ಕೆ ಪದವು ಅವರಿಗೆ ರೋಟರಿಯಿಂದ ತೆರೆಮರೆಯ ನಾಯಕ ಪ್ರಶಸ್ತಿ

        ಸುಬ್ರಹ್ಮಣ್ಯ ಜೂನ್ 16. ಕುಕ್ಕೆ ಸುಬ್ರಹ್ಮಣ್ಯದ ರೋಟರಿ ಕ್ಲಬ್ಬಿನ ಕಾರ್ಯ ನಿಕಟ ಪೂರ್ವ ಕಾರ್ಯದರ್ಶಿ, ಕ್ರಿಯಾಶೀಲ ಕೆಲಸಗಾರ ,ಸಮಾಜ ಸೇವಕ, ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 31 81ರ ಈ ವರ್ಷದ ತೆರೆಮರೆಯ ನಾಯಕ ಪ್ರಶಸ್ತಿ ಲಭಿಸುತ್ತದೆ.  ಈ ತಿಂಗಳ 8 – 9ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲೆ 31 81 ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ

. . . . . . . . .

ಪ್ರಶಸ್ತಿಯನ್ನು ರೋಟರಿ ಜಿಲ್ಲಾ ಗವರ್ನರ್ ಕೇಶವ ರವರು ನೀಡಿರುತ್ತಾರೆ. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ, ನಿಯೋಜಿತ ಜಿಲ್ಲಾ ಗವರ್ನರ್ ವಿಕ್ರಮ ದತ್ತ, ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ಹಾಗೂ ಜಿಲ್ಲಾ ಪದಾಧಿಕಾರಿಗಳು, ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಮೋಹನ್ದಾಸ್ ಎಣ್ಣೆ ಮಜಲ್, ನಿಯೋಜಿತ ಅಧ್ಯಕ್ಷ ಚಂದ್ರಶೇಖರ ನಾಯರ್, ಪೂರ್ವ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಜರಿದ್ದರು.           

. . . . . . .

ಡಾಕ್ಟರ್ ರವಿ ಕಕ್ಕೆ ಪದವ ಅವರು ಅದೆಷ್ಟೋ ಶಾಲೆಗಳಿಗೆ ಪುಸ್ತಕ ವಿತರಣೆ ,ಯುನಿಫಾರಂ, ಪ್ರತಿ ವರ್ಷ ನೀಡುತ್ತಾ ಬಂದಿರುತ್ತಾರೆ . ಬಡತನದಲ್ಲಿರುವವರಿಗೆ ಅಕ್ಕಿ ಹಾಗೂ ದಿನಸಿ ಸಾಮಗ್ರಿಗಳನ್ನು ನೀಡುತ್ತಾ ಬಂದಿರುವರು. ಬಡವರಿಗೆ ,ಸೂರಿಲ್ಲದವರಿಗೆ ತನ್ನ ಜಾಗವನ್ನೇ ಸ್ವಲ್ಪ ಕೊಟ್ಟು ಮನೆ ಕಟ್ಟಲು ಅನುವು ಮಾಡಿ ಕೊಟ್ಟಿರುತ್ತಾರೆ. ತೀರಾ ಬಡತನದಲ್ಲಿರುವವರಿಗೆ ಮನೆಯನ್ನೇ ನಿರ್ಮಿಸಿ ಕೊಟ್ಟಿರುತ್ತಾರೆ . ಸ್ವಚ್ಛತೆಗೆ ಆದ್ಯತೆ ಕೊಟ್ಟ ಅವರು ಪ್ರತಿವಾರ ಕುಕ್ಕೆ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯವನ್ನ ತನ್ನ ಸಮಾಜ ಸೇವಾ ಟ್ರಸ್ಟ್ ಮೂಲಕ ನಡೆಸಿಕೊಂಡು ಬಂದಿರುತ್ತಾರೆ. ಇದ್ಯಾವುದನ್ನು ಪ್ರಚಾರ ಬಯಸದ ಅವರು ತೆರೆ ಮರೆಯಲ್ಲಿ ,ಸುದ್ದಿ ಇಲ್ಲದೆ, ಕೆಲಸವನ್ನು ಮಾಡುತ್ತಾ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವರು. ಇದನ್ನು ಗಮನಿಸಿದ ರೋಟರಿ ಇಂಟರ್ನ್ಯಾಷನಲ್ ಜಿಲ್ಲೆ 31 81 ರವರು ತೆರೆ ಮರೆಯ ನಾಯಕ ಎಂಬ ಬಿರುದನ್ನು ನೀಡಿ ಗೌರವಿಸಿರುತ್ತಾರೆ .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading