Ad Widget

ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯಲ್ಲಿ ಯೋಗ ದಿನಾಚರಣೆಯ ಅಂಗವಾಗಿ “ಯೋಗ ಉತ್ಸವ “

ಪುತ್ತೂರಿನ ನರಿಮೊಗರಿನಲ್ಲಿರುವ ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಯೋಗ ಹಾಲ್ ನಲ್ಲಿ  ಜೂನ್ 21 ಶುಕ್ರವಾರದಂದು ಸಂಜೆ 6 ಗಂಟೆಗೆ ಯೋಗ ದಿನಾಚರಣೆಯ ಅಂಗವಾಗಿ  “ಯೋಗ ಉತ್ಸವ ” ಕಾರ್ಯಕ್ರಮ ನಡೆಯಲಿದೆ . ಅಂತಾರಾಷ್ಟ್ರೀಯ ಯೋಗಪಟು ತೃಪ್ತಿ . ಎನ್ . ಇವರಿಂದ ಯೋಗಾಸನ ಪ್ರದರ್ಶನ ಪ್ರಾತ್ಯಕ್ಷಿಕೆ ನಡೆಯಲಿದೆ . ಆಸ್ಪತ್ರೆಯ ಆಡಳಿತ ನಿರ್ದೇಶಕ ಹಾಗೂ ಆಯುರ್ವೇದ ತಜ್ಞ ವೈದ್ಯ ಡಾ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರಿಂದ “. ಮನಸ್ಸು ಮತ್ತು ಯೋಗ ಮಾರ್ಗ , ಲಾಭೋಪಾಯ ” ಎಂಬ ವಿಷಯದ ಕುರಿತು ಸತ್ಸಂಗ ನಡೆಯಲಿದೆ . ಉದ್ಘಾಟನೆ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜಯಾ ಬ್ಯಾಂಕ್ ನಿವೃತ್ತ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ ರೋಟರಿಯನ್ ಎ . ಜಗಜೀವನ್ ದಾಸ್ ರೈ ಇವರು ವಹಿಸಿಕೊಳ್ಳಲಿದ್ದಾರೆ . ಧನ್ವಂತರಿ ಸುಳಾದಿ , ಭಜನೆಯನ್ನು ಕು . ಸುಧೀಕ್ಷಾ ಹಾಗೂ ಕು . ಸುನಿಧಿ ನಡೆಸಿಕೊಡಲಿದ್ದಾರೆ ಎಂದು ಆಸ್ಪತ್ರೆಯ ವ್ಯವಸ್ಥಾಪನಾ ನಿರ್ದೇಶಕಿ ಡಾ . ಶ್ರುತಿ .ಎಂ . ಎಸ್ . ತಿಳಿಸಿದ್ದಾರೆ . ಹೆಚ್ಚಿನ ಮಾಹಿತಿಗೆ 9740545979 ದೂರವಾಣಿಗೆ ಕರೆ ಮಾಡಬಹುದು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!