Ad Widget

ಅರೆಭಾಷೆ, ಕಥೆ, ಕವನ, ಲೇಖನಗಳ ಆಹ್ವಾನ

ಮಡಿಕೇರಿ ಜೂ.21(ಕರ್ನಾಟಕ ವಾರ್ತೆ):-ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗುವ ತ್ರೈಮಾಸಿಕ ‘ಹಿಂಗಾರ’ ಪುಸ್ತಕ 6 ಸಂಚಿಕೆಗಳ ಒಟ್ಟು ‘ಸಂಯುಕ್ತ ಸಂಚಿಕೆ’ಯನ್ನು ಹೊರತರಲು ಉದ್ದೇಶಿಸಲಾಗಿದೆ.ಈ ಸಂಬಂಧ ಅರೆಭಾಷೆಯಲ್ಲಿ ಕಥೆ, ಕವನ, ಲೇಖನ, ಹನಿಗವನ, ಜನಪದ, ಸಂಸ್ಕೃತಿ, ಕಲೆ, ಸಾಹಿತ್ಯ, ವ್ಯಕ್ತಿಚಿತ್ರ ಮತ್ತಿತರ ವಿಚಾರಗಳ ಕುರಿತು ಬರಹಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು “ಅರೆಭಾಷೆ ಬರಹ’ ಗಳನ್ನು...

ಪಂಜ: ಮರಳಿ ಮಾತೃ ಧರ್ಮಕ್ಕೆ – ಏಳು ಕುಟುಂಬದ 25 ಜನ ಮರಳಿ ಹಿಂದೂ ಧರ್ಮಕ್ಕೆ

ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರ್ಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂದಿದ್ದ ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ...
Ad Widget

ಅಡ್ತಲೆ : ನಿವೃತ್ತ ಮುಖ್ಯಶಿಕ್ಷಕ ಮಾಧವ ಪಿ. ಪೂಜಾರಿಮನೆ ಅವರಿಗೆ ಬೀಳ್ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಅಡ್ತಲೆ ಇವುಗಳ ಸಹಭಾಗಿತ್ವದಲ್ಲಿ ಜೂ.22 ರಂದು ಅಡ್ತಲೆ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಮಾಧವ.ಪಿ ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು.ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಲೋಹಿತ್.ಎಂ.ಎ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕರಾದ ಹೊನ್ನಪ್ಪ ಮಾಸ್ತರ್ ಅಡ್ತಲೆ ಅವರು ...

ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ತರಬೇತಿ ಉದ್ಘಾಟನೆ

ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ಕರಾಟೆ ತರಬೇತಿ ಉದ್ಘಾಟನೆಗೊಂಡಿತು. ವಿದ್ಯಾಸಂಸ್ಥೆಯ ಅದ್ಯಕ್ಷರಾದ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕರಾದ ಪಿ ಜಿ ಎಸ್ ಎನ್ ಪ್ರಸಾದ್ ದೀಪ ಬೆಳಗಿಸಿ ತರಬೇತಿಯನ್ನು ಉದ್ಘಾಟಿಸಿದರು. ಪ್ರೌಢ ಶಾಲಾ ಮುಖ್ಯಗುರು ಯಶೋಧರ ಎನ್ ಪ್ರಾಸ್ತಾವಿಕ ಮಾತನ್ನಾಡಿದರು. ಶಾಲಾ ಮುಖ್ಯಗುರು ಉದಯ ಕುಮಾರ್ ರೈ ಎಸ್...

ಕುಕ್ಕೆ ಸುಬ್ರಹ್ಮಣ್ಯ :  ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಾಲೋಚನಾ ಸಭೆ

ಕುಕ್ಕೆ ಸುಬ್ರಹ್ಮಣ್ಯ ಜೂ. 13 : ರಸ್ತೆ ಮಾರ್ಗಸೂಚಿ ಹಾಗೂ ಪಾರ್ಕಿಂಗ್ ಸಮಸ್ಯೆ ಬಗ್ಗೆ ಸಮಾಲೋಚನಾ ಸಭೆಯು ಕುಮಾರಧಾರ ಸಭಾಂಗಣದಲ್ಲಿ ಸುಬ್ರಹ್ಮಣ್ಯ ಗ್ರಾಮಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಠಾಣೆ, ಸುಬ್ರಹ್ಮಣ್ಯ ದಲ್ಲಿರುವ ಎಲ್ಲಾ ಇಲಾಖೆ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಟೂರಿಸ್ಟ್ ವಾಹನ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಸುಬ್ರಹ್ಮಣ್ಯ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕುಕ್ಕೆ...

ಸುಬ್ರಹ್ಮಣ್ಯ ರೋಟರಿ ಕ್ಲಬ್ ಗೆ ಪ್ಲಾಟಿನಮ್ ಅವಾರ್ಡ್

ಸುಬ್ರಹ್ಮಣ್ಯ ಜೂನ್ 22 : ಅಂತರಾಷ್ಟ್ರೀಯ ಸಂಸ್ಥೆಯಾದ ಸುಬ್ರಹ್ಮಣ್ಯ ರೋಟರಿ ಕ್ಲಬ್ 2023-24ನೇ ಸಾಲಿನಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಸಮಾಜ ಸೇವೆಗೆ ರೋಟರಿ ಜಿಲ್ಲೆ  31 81 ಇದರ ಅತ್ಯುನ್ನತ  ಪ್ರಶಸ್ತಿ ಪ್ಲಾಟಿನಮ್ ಅವಾರ್ಡ್ ಲಭಿಸಿದೆ. ಜೂನ್ 8 ಹಾಗೂ 9ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸುಬ್ರಹ್ಮಣ್ಯ...

ಸುಬ್ರಹ್ಮಣ್ಯ : ಸೀನಿಯರ್ ಚೇಂಬರ್ ವತಿಯಿಂದ ಕುಲ್ಕುಂದ  ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ      

      ಸುಬ್ರಹ್ಮಣ್ಯ ಜೂನ್ 22 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇದರ ವತಿಯಿಂದ ಶನಿವಾರ ಕುಲ್ಕುಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಿಸಲಾಯಿತು.                         ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಸುಬ್ರಹ್ಮಣ್ಯ ಇದರ ಅಧ್ಯಕ್ಷ ಡಾ| ರವಿ ಕಕ್ಕೆಪದವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುಸ್ತಕಗಳ ಪ್ರಾಯೋಜಕರಾದ...

ಕಾಂತಮಂಗಲ ಶಾಲೆಯಲ್ಲಿ ಯೋಗ ದಿನಾಚರಣೆ

ಕಾಂತಮಂಗಲ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಹಾಯಕಿ ಮಾಲಿನಿ ಅವರು ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಸ್ವರ್ಣಲತಾ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು.

ಅಜ್ಜಾವರ : ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮಕ್ಕೆ ಮುಹೂರ್ತ

ಮೂರನೇ ವರ್ಷದ ಕಂಡದ ಗೌಜಿ ಕೆಸರ್ದ ಪರ್ಬ ಕಾರ್ಯಕ್ರಮವೂ ಜುಲೈ 14 ರಂದು ಅಜ್ಜಾವರದ ಕೊರಂಗುಬೈಲು ಗದ್ದೆಯಲ್ಲಿ ನಡೆಯಲಿರುವುದು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಹಾಗೂ  ಗದ್ದೆಯ ಮಾಲಕರಾದ ಬಾಲಕೃಷ್ಣ ನಾಯ್ಕ್, ಅಜ್ಜಾವರ ದಂಪತಿಗಳು  ಗದ್ದೆಯ ಮುಹೂರ್ತ ಕಾರ್ಯವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪ್ರತಾಪ ಯುವಕ ಮಂಡಲ ಅಜ್ಜಾವರ ಅಧ್ಯಕ್ಷರಾದ ಗುರುರಾಜ್ ಅಜ್ಜಾವರ, ಚೈತ್ರ ಯುವತಿ...

ಗೋಳ್ಯಾಡಿ ಗುರುಪ್ರಸಾದ್ ನಿಧನ

ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿ। ಕುಶಾಲಪ್ಪ ಎಂಬವರ ಪುತ್ರ ಗುರುಪ್ರಸಾದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ಪ್ರಾಯವಾಗಿತ್ತು. ಮೃತರು ತಾಯಿ, ಪತ್ನಿ, ಒಂದು ಗಂಡು, ಒಂದು ಹೆಣ್ಣು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!