Ad Widget

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ.ಸಿ. ಜಯರಾಮರನ್ನು ಭೇಟಿ ಮಾಡಿದ ನೂತನ ತಂಡ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಸ್ವಗೃಹದಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪಿ.ಸಿ. ಜಯರಾಮ ಇವರು ಹೊಸ ತಂಡಕ್ಕೆ ಶುಭ ಹಾರೈಸಿದರು. ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಕ್ಕಾಗಿ ಉತ್ತಮ ಕೆಲಸ ಕಾರ್ಯಗಳು ಮೂಡಿ ಬರಲಿ ಎಂದರು.
ತಂಡದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾದ ಸದಾನಂದ ಮಾವಜಿ ಹಾಗೂ ಸದಸ್ಯರುಗಳಾದ  ಚಂದ್ರಶೇಖರ್ ಪೇರಾಲು,  ತೇಜಕುಮಾರ್ ಕುಡೇಕಲ್ಲು, ಶ್ರೀಮತಿ ಚಂದ್ರಾವತಿ ಬಡ್ಡಡ್ಕ, ಶ್ರೀಮತಿ ಲತಾ ಕುದ್ಪಾಜೆ, ಡಾ| ಎನ್.ಎ ಜ್ಞಾನೇಶ್ ಉಪಸ್ಥಿತರಿದ್ದರು.
ಪಿ.ಸಿ. ಜಯರಾಮ್ ಹಾಗೂ ಅವರ ಪತ್ನಿ‌ ಮಡಪ್ಪಾಡಿ‌ ಗ್ರಾಮಪಂಚಾಯತ್‌ ಅಧ್ಯಕ್ಷೆ‌ ಶ್ರೀಮತಿ‌ ಉಷಾಜಯರಾಮ್, ಪುತ್ರಿ‌ ಸ್ಪಂದನಾ ಅವರು ನೂತನ ತಂಡಕ್ಕೆ ಆತಿಥ್ಯ ನೀಡಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!