Ad Widget

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯ ಬಗ್ಗೆ ಪರಿಹರಿಸಲು ಶಾಸಕರಿಗೆ ಮನವಿ

ಕುಂಬರ್ಚೋಡು ಪರಿಸರದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಸ್ಥಳೀಯ ನಿವಾಸಿಗಳಿಂದ ಸುಳ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ರವರನ್ನು ಕಚೇರಿಯಲ್ಲಿ ಭೇಟಿಯಾಗಿ ಮನವಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಾದ ಕೆ ಅಬ್ದುಲ್ ಗಫೂರ್,ಅಬ್ದುಲ್ ಕರೀಂ ಬಿ ಎಂ, ಕುಂಞಾಮು ಕೆ ಎಂ,ಮಹಮ್ಮದ್ ಮುಖದ್ದಸ್,ಮತ್ತಿತರರು ಉಪಸ್ಥಿತರಿದ್ದರು.

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಪಿ.ಸಿ. ಜಯರಾಮರನ್ನು ಭೇಟಿ ಮಾಡಿದ ನೂತನ ತಂಡ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ. ಜಯರಾಮ ಅವರನ್ನು ಅರೆಭಾಷೆ ಅಕಾಡೆಮಿಯ ನೂತನ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಇಂದು ಅವರ ಸ್ವಗೃಹದಲ್ಲಿ ಭೇಟಿ ನೀಡಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಪಿ.ಸಿ. ಜಯರಾಮ ಇವರು ಹೊಸ ತಂಡಕ್ಕೆ ಶುಭ ಹಾರೈಸಿದರು. ಅರೆಭಾಷೆ ಸಂಸ್ಕೃತಿ...
Ad Widget

ಎಲಿಮಲೆ : ಮಾದಕ ವಸ್ತು ವಿರೋಧಿ ದಿನಾಚರಣೆ

ಜೂ 26 ರಂದು ಎಲಿಮಲೆ ಪ್ರೌಢಶಾಲೆ ಯಲ್ಲಿ 'ಮಾದಕ ವಸ್ತು ವಿರೋಧಿ ದಿನ'ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾದಕ ವ್ಯಸನೆ ಎಂದರೇನು, ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು. ಹಾಗೂ ವ್ಯಸನ ಮುಕ್ತ ದೇಶವನ್ನಾಗಿಸಲು ವಿದ್ಯಾರ್ಥಿಗಳ ಪಾತ್ರವನ್ನು ಮನವರಿಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಿಕ್ಷೇತರ- ಸಿಬ್ಬಂದಿ ವರ್ಗದವರು...

ಸುಳ್ಯ: ರೋಟರಿ ಕ್ಲಬ್  ನೂತನ ಪದಾಧಿಕಾರಿಗಳ ಆಯ್ಕೆ

ರೋಟರಿ ಕ್ಲಬ್ ಸುಳ್ಯದ ಮುಂದಿನ 2024-25 ರ ಸಾಲಿನ ನೂತನ ಅಧ್ಯಕ್ಷೆಯಾಗಿ ರೋ. ಯೋಗಿತ ಗೋಪಿನಾಥ್ ,  ಕಾರ್ಯದರ್ಶಿಯಾಗಿ ರೋ. ಡಾ. ಹರ್ಷಿತಾ ಪುರುಷೋತ್ತಮ್ , ಖಜಾಂಚಿಯಾಗಿ  ರೋ. ಹರಿರಾಯ ಕಾಮತ್ , ಉಪಾಧ್ಯಕ್ಷರಾಗಿ ರೊ. ಡಾ. ರಾಮ್ ಮೋಹನ್ , ಜೊತೆ ಕಾರ್ಯದರ್ಶಿಯಾಗಿ ರೋ. ಆಶಿತಾ ಕೇಶವ್ ,  ಸಾರ್ಜೆಂಟ್ ಅಟ್ ಆರ್ಮ್ ಆಗಿ...

ಜೂ.30: ಸುಳ್ಯದ ಅಮರ ಸಂಘಟನಾ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ವನಮಹೋತ್ಸವ ಪ್ರಯುಕ್ತ ಸುಳ್ಯದಲ್ಲಿ ಸಾರ್ವಜನಿಕ ಉಚಿತ 1000 ಸಸಿ ವಿತರಣೆ ಕಾರ್ಯಕ್ರಮ ಜೂ. 30 ಆದಿತ್ಯವಾರದಂದು ಸುಳ್ಯದ ಪ್ರಭು ಬುಕ್ಸ್ ಸ್ಟಾಲ್ ಹತ್ತಿರ ನಡೆಯಲಿದೆ. ಎಲ್ಲಾ ಸಾರ್ವಜನಿಕ ಪರಿಸರ ಪ್ರೇಮಿಗಳಿಗೆ ಗಿಡ ವಿತರಣೆಯು ಉಚಿತವಾಗಿರುತ್ತದೆ. ಒಬ್ಬರಿಗೆ ಎರಡು ಸಸಿಗಳನ್ನು ಮಾತ್ರ ನೀಡಲಾಗುವುದು. ಸಸಿ ವಿತರಣೆ ಕಾರ್ಯಕ್ರಮವು ಬೆಳಿಗ್ಗೆ...

ಕರೆ ಬಂದ ಕ್ಷಣಮಾತ್ರದಲ್ಲಿ ಹಾಜರಾಗಿ , ಕ್ಷಿಪ್ರವಾಗಿ ಕಾರ್ಯನಿರ್ವಹಿಸಿ ನೆಚ್ಚಿನ ಜೀವರಕ್ಷಕ ವಾಹನ ಚಾಲಕ

ಬೆಳ್ಳಂಬೆಳಗ್ಗೆ ಆಗಮಿಸಿ ತುಂಬಿ ಹರಿಯುವ ಹೊಳೆಯಿಂದ ಕಾಣೆಯಾದ ಯುವಕನ ಶೋಧನೆ ನಡೆಸಿ ಯಶಸ್ವಿಯಾದ ಹೀರೋ  ವಿಪತ್ತು ನಿರ್ವಹಣಾ ತಂಡದ ಸದಸ್ಯ , ಅಂಬ್ಯುಲೆಂನ್ಸ್ ಚಾಲಕ ಯಾರು ಗೊತ್ತಾ , ಇವರು ನಡೆಸಿದ ಕಾರ್ಯಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ. ಸುಳ್ಯ: ಸುಳ್ಯದಲ್ಲಿ ಹಲವಾರು ಜೀವ ರಕ್ಷಕ ವಾಹನಗಳು ಇದ್ದು ಅವುಗಳಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ಕೂಡ ಆಪತ್ಬಾಂಧವರೆ ಆಗಿದ್ದು...

ಮಾಣಿ ಮೈಸೂರು ಹೆದ್ದಾರಿಗೆ ಮರ ಬಿದ್ದು ಸಂಚಾರಕ್ಕೆ ತಡೆ – ದೀಪಕ್ ಇಲೆಕ್ಟ್ರಿಕಲ್ ಕ್ರೇನ್ ಬಳಸಿ ತೆರವು

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರಂತೋಡು ಎಲ್ಪುಕಜೆ ಎಂಬಲ್ಲಿ ರಾತ್ರಿ ಸುಮಾರು 3 ಗಂಟೆ ವೇಳೆಗೆ ರಸ್ತೆಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತ್ತು.‌ 5 ಗಂಟೆವರೆಗೆ ಒಂದು ಕಿಲೋಮೀಟರ್ ತನಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಷಯ ತಿಳಿದು ಸ್ಥಳಕ್ಕೆ ಬಂದ  ದೀಪಕ್ ಎಲೆಕ್ಟ್ರಿಕಲ್ ನವರು ಕ್ರೇನ್ ಬಳಸಿ ಮರ ತೆರವು ಮಾಡಿ ಸಂಚಾರ ಸುಗಮಗೊಳಿಸಿದರು.‌...

ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿ ರಚನೆ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿಯನ್ನು ಜೂ.22ರಂದು ವಿದ್ಯಾಸಂಸ್ಥೆಯ ಸ್ಥಾಪಕರ ದಿನಾಚರಣೆಯಂದು ರಚಿಸಲಾಯಿತು.ವಿದ್ಯಾಸಂಸ್ಥೆಯ ಸ್ಥಾಪಕರಾದ ದಿ. ಉಪೇಂದ್ರ ಕಾಮತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ನಡೆದ ಸ್ಥಾಪಕರ ದಿನಾಚರಣೆಯಂದು ಶಾಲಾ ಸಂಚಾಲಕರಾದ ಕೆ. ಸುಧಾಕರ ಕಾಮತ್ ಅವರು ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಹೆಸರನ್ನು ಘೋಷಿಸಿದರು.ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನ....

ನಡುಗಲ್ಲು ಶಾಲಾ ಮಂತ್ರಿಮಂಡಲ ರಚನೆ; ಮುಖ್ಯಮಂತ್ರಿಯಾಗಿ ಅಮೃತ, ಉಪ ಮುಖ್ಯಮಂತ್ರಿಯಾಗಿ ರಕ್ಷ ಪಿ ಎಸ್

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿಯ 2024-25ನೇ ಸಾಲಿನ ಶಾಲಾ ಸಂಸತ್ತು ಚುನಾವಣೆ ಇತ್ತೀಚೆಗೆ ನಡೆಯಿತು. ಸ್ಪರ್ಧಾ ಕಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು, ಉಪಮುಖ್ಯಮಂತ್ರಿ ಸ್ಥಾನಕ್ಕೆ ಆರು ಮಂದಿ ವಿದ್ಯಾರ್ಥಿಗಳು ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿಗಳಾಗಿ ಶಿಕ್ಷಕರುಗಳಾದ ಶ್ರೀ ಮಹೇಶ್ ಕೆ ಕೆ, ಶ್ರೀಮತಿ ಸುಮನ, ಶ್ರೀಮತಿ ಮೋಕ್ಷ ಸಹಕರಿಸಿದರು. ಅಂತಿಮವಾಗಿ ಮುಖ್ಯಮಂತ್ರಿಯಾಗಿ...

ಎನ್ನೆಂಸಿಯ ಕಾಲೇಜು ವಾರ್ತಾಪತ್ರ “ವಿದ್ಯಾಚೇತನ” ದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾರ್ತಾಪತ್ರ “ವಿದ್ಯಾಚೇತನ”ದ ಅನಾವರಣ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ವಾರ್ತಾಪತ್ರವನ್ನು ಅನಾವರಣಗೊಳಿಸಿ ಮಾತನಾಡಿ, ಕಾಲೇಜಿನಲ್ಲಿ ಹಮ್ಮಿಕೊಳ್ಳುವ ಕಾರ್ಯಚಟುವಟಿಕೆಗಳ ದಾಖಲೆಯ ದೃಷ್ಟಿಯಲ್ಲಿ ವಾರ್ತಾಪತ್ರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿ ಇದು ಹೊರಬರಲು ಶ್ರಮಿಸಿದ ಸಂಪಾದಕ ಮಂಡಳಿಯನ್ನು ಶ್ಲಾಘಿಸಿದರು. ವಾರ್ತಾಪತ್ರದ ಕಾರ್ಯನಿರ್ವಾಹಕ ಸಂಪಾದಕಿ ಡಾ....
Loading posts...

All posts loaded

No more posts

error: Content is protected !!