Ad Widget

ಕ. ರಾ.ಸ. ನೌಕರರ  ಸಂಘದ  ಸುಳ್ಯ ಶಾಖೆ ವತಿಯಿಂದ ಪ್ರಮುಖ ಬೇಡಿಕೆಗಾಗಿ ತಹಶೀಲ್ದಾರಗೆ  ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸುಳ್ಯ ಶಾಖೆಯ ವತಿಯಿಂದ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಜು.11 ರಂದು ಮನವಿ ಸಲ್ಲಿಸಿದರು.

ಜು.07ರಂದು ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯದಂತೆ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು,
NPS ರದ್ದುಪಡಿಸಿ OPS ಯೋಜನೆಯನ್ನು ಮರುಸ್ಥಾಪಿಸುವುದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS)  ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವಂತೆ ನೌಕರರ ಸಂಘ ಮನವಿ ಮಾಡಿದೆ.

  ಈ ಸಂದರ್ಭದಲ್ಲಿ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ನಿರ್ದೇಶಕರು, ತಾಲೂಕ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸುಳ್ಯ ತಾಲ್ಲೂಕಿನ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!