Ad Widget

ಜುಲೈ 13 ರಂದು ಸುಬ್ರಹ್ಮಣ್ಯ ರೋಟರಿ ಕ್ಲಬ್ ಪದ ಪ್ರಧಾನ ಸಮಾರಂಭ



  ಸುಬ್ರಹ್ಮಣ್ಯ ರೋಟರಿ ಕ್ಲಬ್ ನ 2024 -25 ನೇ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭವು ಜುಲೈ 13ರಂದು ಕುಮಾರಸ್ವಾಮಿ ವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವುದಾಗಿ ನೂತನ ಅಧ್ಯಕ್ಷ ಚಂದ್ರಶೇಖರ್ ನಾಯರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.                             

ನೂತನ ಅಧ್ಯಕ್ಷ ಪದಾಧಿಕಾರಿಗಳ ಪದಪ್ರಧಾನ ಅಧಿಕಾರಿಯಾಗಿ ರೋಟರಿ ಜಿಲ್ಲೆ 31 81ರ ಪೂರ್ವ ಗವರ್ನರ್ ರಂಗನಾಥ್ ಭಟ್ ಉಪಸ್ಥಿತರಿರುವರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಕೆ ಸೀತಾರಾಮ ರೈ ಭಾಗವಹಿಸಲಿರುವರು. ಗೌರವ ಉಪಸ್ಥಿತಿಯಲ್ಲಿ ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ವಿನಯ್ ಕುಮಾರ್, ಜೋನಲ್  ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಸುಳ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಯೋಗಿತಾ ಗೋಪಿನಾಥ್, ವೇದಿಕೆಯಲ್ಲಿ ಉಪಸ್ಥಿತರಿರುವರು.                      ಸಮಾರಂಭದ ಆರಂಭದಲ್ಲಿ ಅಧ್ಯಕ್ಷತೆಯನ್ನು ಪ್ರಸಕ್ತ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಶಾಂತ ಕೋಡಿಬೈಲು ವಹಿಸಲಿರುವರು. ಪದಪ್ರಧಾನ ನಂತರದ ಅಧ್ಯಕ್ಷತೆಯನ್ನು ನೂತನ ಅಧ್ಯಕ್ಷ ಚಂದ್ರಶೇಖರ್ ನಾಯರ್ ನಿರ್ವಹಿಸದಿರುವರು. ಸಮಾರಂಭದಲ್ಲಿ ಆಯ್ದ ಫಲಾನುಭವಿಗಳಿಗೆ ಹೊಲಿಗೆ ಯಂತ್ರದ ವಿತರಣೆ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೊಡುಗೆ, ಅಂಗನವಾಡಿ ಮೂಲಸೌಕರ್ಯಕ್ಕಾಗಿ ಧನಸಹಾಯ, ಸ್ಥಳೀಯ ಎಸ್ ಎಸ್ ಪಿ ಯು ಕಾಲೇಜು, ಕೆ ಎಸ್ ಎಸ್ ಕಾಲೇಜು ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ  ಇರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವರು. ಸುದ್ದಿಗೋಷ್ಠಿಯಲ್ಲಿ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಕಟಪೂರ್ವ ಅಧ್ಯಕ್ಷ ಗೋಪಾಲ್ಎಣ್ಣೆಮಜಲು, ಕಾರ್ಯದರ್ಶಿ ಮೋಹನ್ ದಾಸ್ ಎಣ್ಣೆಮಜಲು, ನೂತನ ಕಾರ್ಯದರ್ಶಿ ಚಿದಾನಂದ ಕುಳ, ನೂತನ ಖಜಾಂಜಿ ಜಯಪ್ರಕಾಶ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!