
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹತ್ತು ಅಡಿ ಆಳದ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ಪೆರಾಜೆ ಗ್ರಾಮದ ದಾಸರಹಿತ್ಲುವಿನಲ್ಲಿ ಜು.18ರಂದು ಬೆಳಿಗ್ಗೆ ಸಂಭವಿಸಿದೆ.
ಕಾಸರಗೋಡಿನಿಂದ ಮಡಿಕೇರಿಗೆ ಮದುವೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಕಾಸರಗೋಡು ಮೂಲದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.