Ad Widget

ಇಂಧನ ಸಚಿವರನ್ನು ಭೇಟಿ ಮಾಡಿದ ವಿದ್ಯುತ್ ಗುತ್ತಿಗೆದಾರರ ಸಂಘ – ಸಮಸ್ಯೆ ಪರಿಹಾರಕ್ಕಾಗಿ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್

ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ಇಂದು ಇಂಧನ ಸಚಿವರನ್ನು ಭೇಟಿ ಮಾಡಿದರು. ಸುಳ್ಯ,ಪುತ್ತೂರು, ಬೆಳ್ತಂಗಡಿ ಹಾಗೂ ಕಡಬದ ಗುತ್ತಿಗೆದಾರರ ಸಂಘದ ಪರವಾಗಿ ಪುತ್ತೂರು ಶಾಸಕ ಅಶೋಕ್ ರೈ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ನೇತೃತ್ವದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ಅವರನ್ನು ಭೇಟಿ ಮಾಡಿ ಬ್ರೇಕ್ ಡೌನ್ ಕಾಮಗಾರಿಗಳ ಸಮಸ್ಯೆಗಳ ಕುರಿತು ಮನವರಿಕೆ ಮಾಡಲಾಯಿತು. ಈ ವಿಷಯವನ್ನು ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿ ಮುಂದಿನ ಕ್ರಮ ಕೈ ಗೊಳ್ಳಲು ಅದೇಶಿಸುದಾಗಿ ಇಂಧನ ಸಚಿವರು ಭರವಸೆ ನೀಡಿದ್ದಾರೆಂದು ಗುತ್ತಿಗೆದಾರರ ಸಂಘದ ಸುಳ್ಯದ ಅಧ್ಯಕ್ಷ ಸೋಮಶೇಖರ ಪೈಕ್ ಅಮರ ಸುದ್ದಿಗೆ ತಿಳಿಸಿದ್ದಾರೆ.

ಬೆಂಗಳೂರಿಗೆ ತೆರಳಿದ ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಜಿಲ್ಲಾ ಕಾರ್ಯಕಾರಿ ಸಮಿತಿಯ ಮಾಯಿಲಪ್ಪ ಸಂಕೇಶ, ತಾಲೂಕು ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್ , ಸತ್ಯ ನಾರಾಯಣ ಶ್ರೀಧರ ಕೆ.ಎಸ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!