Ad Widget

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ನಿತ್ಯಾನಂದ ಮುಂಡೋಡಿ;ಉಪಾಧ್ಯಕ್ಷರಾಗಿ ಪಿ.ಎಸ್.ಗಂಗಾಧರ ಪುನರಾಯ್ಕೆ


ಸುಳ್ಯ:ಸುಳ್ಯ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್.ಗಂಗಾಧರ ಪುನರಾಯ್ಕೆಯಾಗಿದ್ದಾರೆ. ಜು. 26ರಂದು ಸೊಸೈಟಿಯಲ್ಲಿ ನಡೆದ ನಿರ್ದೇಶಕರ ಸಭೆಯಲ್ಲಿ

ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಿತು.ಚುನಾವಣಾಧಿಕಾರಿ ಸಹಕಾರಿ ಸಂಘಗಳ ಅಧಿಕಾರಿ ಶಿವಲಿಂಗಯ್ಯರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನಿರ್ದೇಶಕರುಗಳಾದ ಪಿ.ಸಿ.ಜಯರಾಮ, ಎಸ್.ಸಂಶುದ್ದೀನ್, ಸೋಮಶೇಖರ ಕೊಯಿಂಗಾಜೆ, ಸುರೇಶ್ ಎಂ.ಎಚ್., ವಿನೂಪ್ ಮಲ್ಲಾರ, ಲಿಜೋ ಜೋಸ್ ಗುತ್ತಿಗಾರು, ಭುವನೇಂದ್ರ ದಾಸ್ ಉಬರಡ್ಕ, ಚಂಚಲಾಕ್ಷಿ ಮುಳುಗಾಡು, ಪುಷ್ಪಾ ಪೂಂಬಾಡಿ ಟಿಎಪಿಸಿಎಂಎಸ್ ಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜ್ಜನಮನೆ ಉಪಸ್ಥಿತರಿದ್ದರು.
ಟಿಎಪಿಸಿಎಂಎಸ್ ಆಡಳಿತ ಮಂಡಳಿಗೆ ಎಲ್ಲಾ 13 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ನಿತ್ಯಾನಂದ ಮುಂಡೋಡಿ ಅವರು ನಾಲ್ಕನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.‌ಸತತ ಮೂರು ಬಾರಿ ಸೇರಿ ಒಟ್ಟು ನಾಲ್ಕು ಬಾರಿ ಅವರು ಅಧ್ಯಕ್ಷರಾಗಿದ್ದಾರೆ. ಪಿ.ಎಸ್.ಗಂಗಾಧರ ಅವರು ಎರಡನೇ ಬಾರಿ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!