Ad Widget

ಜು.28 : ಅರಂತೋಡಿನಲ್ಲಿ ಆಟಿ ಗೌಜಿ ಕಾರ್ಯಕ್ರಮ – ಪಿಂಡಿಮನೆ ಪವನ್ ಗೆ ಸನ್ಮಾನ

ಗೌಡರ ಯುವ ಸೇವಾ ಸಂಘ ಸುಳ್ಯ ತಾಲೂಕು,ಗ್ರಾಮ ಗೌಡ ಸಮಿತಿ, ಮಹಿಳಾ ಘಟಕ ಮತ್ತು ತರುಣ ಘಟಕ ಅರಂತೋಡು ಇವುಗಳ ಆಶ್ರಯದಲ್ಲಿ ಜು.28ರಂದು ಅರಂತೋಡಿನ ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ಆಟಿ ಗೌಜಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ.ಅಧ್ಯಕ್ಷ ಕೇಶವ ಆಡ್ತಲೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಸಮಿತಿ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ ವಹಿಸಲಿದ್ದಾರೆ. ಅತಿಥಿಗಳಾಗಿ ತಾಲೂಕು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ನೆಹರೂ ಸ್ಮಾರಕ ಪ್ರೌಢಶಾಲೆಯ ಶಿಕ್ಷಕ ಸೀತಾರಾಮ ಎಂ. ಕೆ ಆಗಮಿಸಲಿದ್ದಾರೆ. ಸಿ.ಎ. ಪರೀಕ್ಷೆಯಲ್ಲಿ ತೇರ್ಗಡೆಯಾದ ಪವನ್ ಪಿಂಡಿಮನೆ ಯವರನ್ನು ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲರಾದ ಕೆ. ಆರ್. ಗಂಗಾಧರ ಅವರು ಸನ್ಮಾನಿಸಲಿದ್ದಾರೆ. ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಾರಿಜ ಕುರುಂಜಿ,ತರುಣ ಘಟಕದ ಅಧ್ಯಕ್ಷ ವಿನೋದ್ ಉಳುವಾರು ಉಪಸ್ಥಿತರಿರಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!