Ad Widget

ಸುಳ್ಯ : ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರಿಗೆ ಬೀಳ್ಕೊಡುಗೆ –  ಸನ್ಮಾನ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ ಈ ರವರ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವು ಸುಳ್ಯದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ  ಜು 30 ರಂದು ನಡೆಯಿತು.

ಕಾರ್ಯಕ್ರಮವನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ದೀಪ ಬೆಳಗಿ ಉದ್ಘಾಟಿಸಿ, ನಿವೃತ್ತರಾದ ಬಿಇಓ ರಮೇಶ್ ಅವರಿಗೆ ಶುಭಹಾರೈಸಿದರು. ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಮಂಜುನಾಥ್ ಜಿ ವಹಿಸಿದ್ದರು.  ನಿವೃತ್ತ ಜೀವನಕ್ಕೆ ಕಾಲಿಡುತ್ತಿರುವ ರಮೇಶ್ ರವರನ್ನು ಶಿಕ್ಷರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸಿದರು.  ವೇದಿಕೆಯಲ್ಲಿ ತಾ.ಪಂ‌.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ , ವೀಣಾ ಎಂ ಟಿ , ಶ್ರೀಧರ ಗೌಡ , ಚಂದ್ರಶೇಖರ ಕೆ ಎಸ್ , ಸೂಫಿ ಪೆರಾಜೆ , ದೇವರಾಜ್ ಎಸ್ ಕೆ , ಸುನಿಲ್ ಶಾಂತಿಮಜಲು , ಪ್ರಕಾಶ್ ಮೂಡಿತ್ತಾಯ , ವೈ ಶಿವರಾಮಯ್ಯ , ಶೀತಲ್ ಯು .ಕೆ ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂರಾರು ಶಿಕ್ಷಣ ಪ್ರೇಮಿಗಳು ಶಿಕ್ಷಕರು ಹಾಗೂ ಹಿತೈಷಿಗಳು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!