Ad Widget

ಎರಡು ವರ್ಷಗಳ ಹಿಂದಿನ ಮನೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ, ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ, ನಡೆದ ಸುಮಾರು ₹1,48,000 ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ ₹ 30,000/- ಸೇರಿ ಒಟ್ಟು ₹1,78,000/- ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು,...

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಜು.05 ರಂದು ವಾರ್ಡ್ ಸಭೆ ಹಾಗೂ ಜು.08 ರಂದು ಗ್ರಾಮಸಭೆ

ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನಲ್ಲಿ ಜುಲೈ 05 ರಂದು ವಾರ್ಡ್ ಸಭೆಗಳು ಹಾಗೂ ಜುಲೈ 08 ರಂದು ಗ್ರಾಮಸಭೆ ನಡೆಯಲಿದೆ. ವಾರ್ಡ್ ಸಭೆಗಳು ಜುಲೈ 05 ರಂದು ಪೂರ್ವಾಹ್ನ 10:00 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ, ಪೂರ್ವಾಹ್ನ 11:30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಹಾಗೂ ಅಪರಾಹ್ನ 1:30ಕ್ಕೆ ಸ.ಕಿ.ಪ್ರಾ. ಶಾಲೆ ಕೊಡಿಯಾಲಬೈಲು ಇಲ್ಲಿ ನಡೆಯಲಿದೆ.ಗ್ರಾಮಸಭೆಯು...
Ad Widget

ಪತ್ರಿಕ ದಿನಾಚರಣೆಯ ಶುಭಾಶಯ ಹೇಳಿದ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರು

ಕುಕ್ಕೆ ಸುಬ್ರಹ್ಮಣ್ಯ :ಜು.1,ಜುಲೈ ಒಂದು ಪತ್ರಿಕಾ ದಿನಾಚರಣೆ ಈ ವಿಶೇಷ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಈಗಿನ ಅಧ್ಯಕ್ಷರಾದ ವಿಶ್ವನಾಥ್ ನಡುತೋಟ ಅವರು ನಾಡಿನ ಸಮಸ್ತ ದೃಶ್ಯ, ಡಿಜಿಟಲ್ ಹಾಗೂ ಪತ್ರಿಕಾವೃತ್ತಿಬಾಂಧವರಿಗೆ ಶುಭಾಶಯ ಹೇಳಿದ್ದಾರೆ.ಪತ್ರಿಕೆ,ದೃಶ್ಯ ಮಾಧ್ಯಮಗಳು ಜನಸಾಮಾನ್ಯರಿಗೆ ಸಹಕಾರಿಯಾಗಿರಬೇಕು, ಯಾವುದೇ ವರದಿ ಮಾಡುವ ಸಂದರ್ಭದಲ್ಲಿ ಸತ್ಯತೆಯನ್ನ ಅರಿತು ನಿಷ್ಪಕ್ಷಪಾತ ವರದಿ ಮಾಡಬೇಕು, ನಾವೆಲ್ಲ ಮಾಧ್ಯಮದವರು ...

ಜು.02: ನಾಳೆ ಸುಳ್ಯದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಜುಲೈ 2 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00...

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಟ್ಟದ ತರ್ತೀಲ್

ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಟ್ಟದ ತರ್ತೀಲ್(ಕುರ್ಆನ್) ಸ್ಪರ್ಧೆಯುದಿನಾಂಕ 30-06-2024 ಆದಿತ್ಯವಾರದಂದು ಸುಳ್ಯ ಸ್ಟೂಡೆಂಟ್ಸ್ ಸೆಂಟರ್ ನಲ್ಲಿ ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಸಿದ್ದೀಕ್ ಹಿಮಮಿ ಸಖಾಫಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಳ್ಯ ಡಿವಿಷನ್ ನ 4 ಸೆಕ್ಟರ್ ಗಳ 20 ರಷ್ಟು ಯೂನಿಟ್ ಗಳಿಂದ ವಿವಿಧ ಸ್ಪರ್ಧೆಗಳಲ್ಲಿ ಸ್ಪರ್ಧಾರ್ಥಿಗಳು ಭಾಗವಹಿಸಿದರು. ಅಂಕಪಟ್ಟಿಯಲ್ಲಿ ಸುಳ್ಯ ಸೆಕ್ಟರ್ ಪ್ರಥಮ ಹಾಗೂ...

ಚೋಮ ಮುಗೇರ ನಿಧನ

ದೇವಚಳ್ಳ ಗ್ರಾಮ ದ ಬಾಜಿನಡ್ಕ ನಿವಾಸಿ ಸುಳ್ಯದ ಎನ್ ಎಂ ಸಿ ಯಲ್ಲಿ ಎಟೆಂಡರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಚೋಮ ಮುಗೇರ ಜೂ. 30 ರಂದು ಸ್ವಗೃಹ ದಲ್ಲಿ ನಿಧನರಾದರು. ಮೃತರು  ಪತ್ನಿ, ನಾಲ್ವರು ಮಕ್ಕಳು ಹಾಗೂ ಮೊಮ್ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಪತ್ನಿಗೆ ಚೂರಿಯಿಂದ ಇರಿದ ಪತಿ –  ಪ್ರಕರಣ ದಾಖಲು

ತವರು ಮನೆಗೆ ಬಂದಿದ್ದ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪತಿ ಕೊನೆಗೆ ಚೂರಿಯಿಂದ ಇರಿದ ಘಟನೆ ನಡೆದಿದ್ದು, ಮಹಿಳೆಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಾಗಿದೆ. ಜಾಲ್ಸೂರು ನಿವಾಸಿ ಅಶ್ವಿನಿ  ಎಂಬವರು ಕಳೆದ 6 ವರ್ಷಗಳ ಹಿಂದೆ ನವೀನ್ ಕುಮಾರ್ ಎಂಬಾತನನ್ನು ವಿವಾಹವಾಗಿದ್ದರು. ಮದುವೆಯ ನಂತರ ಪತಿ ವಿನಃ ಕಾರಣ ಪತ್ನಿಗೆ ಕಿರುಕುಳ ನೀಡುತ್ತಾ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುವಿನ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಗಾಂಧಿನಗರ ಕಾರ್ಯಕ್ಷೇತ್ರದ ಸದಸ್ಯರಿಗೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸುಳ್ಯ ವಲಯದ ಅಧ್ಯಕ್ಷರಾದ ಮನೋಹರರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು, ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಭವಾನಿ ಶಂಕರ ಅಡ್ತಲೆಯವರು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ,...

ಕೆವಿಜಿ ಐಪಿಎಸ್ ನ ಮಕ್ಕಳ ಕೆಸರುಗದ್ದೆ ಹಬ್ಬ

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳಿಗೆ ಮರ್ಕಂಜದ ಜಗದೀಶ  ರೈ  ಪಟ್ಟೆ  ಇವರ ಗದ್ದೆಯಲ್ಲಿ ಜೂ .29 ರಂದು ಕೆಸರುಗದ್ದೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು.      ಕಾರ್ಯಕ್ರಮವನ್ನು ಪ್ರಾರ್ಥನೆಯ ಮೂಲಕ ಆರಂಭಿಸಲಾಯಿತು....

ಬದುಕಿಗೆ ಭರವಸೆ ನೀಡುವ ವೈದ್ಯ ನಾರಾಯಣನಿಗೆ ನಮನ

ಜುಲೈ 1, 1882ರಂದು ಭಾರತ ಕಂಡ ಮಹಾನ್ ವೈದ್ಯ, ಪ್ರಾಮಾಣಿಕ ರಾಜಕಾರಣಿ ಅಪ್ರತಿಮ ದೇಶಸೇವಕ ಮತ್ತು ಮಹಾನ್ ಸ್ವಾತಂತ್ರ ಹೋರಾಟಗಾರ, ಶಿಕ್ಷಣ ತಜ್ಞ ಡಾ| ಬಿದನ್ ಚಂದ್ರ ರಾಯ್ ಜನ್ಮವೆತ್ತ ದಿನ. ಈ ಮಹಾನ್ ಚೇತನದ ನೆನಪಿನ ಕುರುಹಾಗಿ ದೇಶದ್ಯಾಂತ ಜುಲೈ 1ರಂದು ವೈದ್ಯರ ದಿನ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಮಾರು 80 ವರ್ಷಗಳ ಕಾಲ...
Loading posts...

All posts loaded

No more posts

error: Content is protected !!