Ad Widget

ಸುಳ್ಯ : ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ವತಿಯಿಂದ ಪಂಜಿನ ಮೆರವಣಿಗೆ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ಇದರ ಸುಳ್ಯ ನಗರ ವತಿಯಿಂದ ಪಂಜಿನ ಮೆರವಣಿಗೆಯು ಸುಳ್ಯ ನಗರದಲ್ಲಿ ದೊಂದಿಯ ಮೆರವಣಿಗೆಯೊಂದಿಗೆ ನಡೆಯಿತು. 1947 ಆಗಸ್ಟ್ 14ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲಟ್ಟ ಆ ಕರಾಳ ದುರಂತವನ್ನು ನೆನಪಿಸುತ್ತಾ , ಭ್ರಷ್ಟಚಾರ , ಕೋಮವಾದ ಸೇರಿದಂತೆ ಇತರೆ ವಿಚಾರಗಳನ್ನು ಮುಂದಿಟ್ಟುಕೊಂಡು ಬೃಹತ್ ಪಂಜಿನ ಮೆರವಣಿಗೆಯನ್ನು ನಡೆಸಲಾಯಿತು....

ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾದ ಡಾ| ಮುರಲೀ ಮೋಹನ್ ಚೂಂತಾರು

ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಿದೆ. ಇವರು ಕಳೆದ ಒಂಬತ್ತೂವರೆ ವರುಷಗಳಿಂದ ದ ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸಲ್ಲಿಸಿದ ಪ್ರಾಮಾಣಿಕ,ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ ಶಿಫಾರಸಿನಂತೆ ರಾಷ್ಟ್ರಪತಿಗಳ...
Ad Widget

ಅಗಲಿದ ಲಕ್ಷ್ಮೀ ಎಲೆಕ್ಟ್ರಿಕಲ್ ಮಾಲಕ ಸತ್ಯ ಅವರ ಅಂತಿಮ ದರ್ಶನ ಪಡೆದ ನೂರಾರು ಜನ

ಅಕಾಲಿಕ ಮೃತ್ಯುವಾದ ಎಲೆಕ್ಟ್ರಿಷನ್  ಸತ್ಯಣ್ಣ ನ  ಮೃತದೇಹ ಸುಳ್ಯ ಕ್ಕೆ ಆಗಮನ ...  ಹಳೆಗೇಟು ನಲ್ಲಿ  ಅಂತಿಮ ದರ್ಶನಕ್ಕೆ ಅಪಾರ  ಸಂಖ್ಯೆ ಯಲ್ಲಿ ಸೇರಿದ ಜನಸ್ತೋಮ..  ಅಂಗಡಿ ಮುಂಗಟ್ಟು ಮುಚ್ಚಿ    ವ್ಯವಹಾರ ಸ್ಥಗಿತ ಗೋಳಿಸಿ   ಶ್ರದ್ಧಾಂಜಲಿ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಅಜಾತ ಶತ್ರುವಾಗಿದ್ದ ಹಳೆಗೇಟಿನ ಲಕ್ಷ್ಮೀ ಅಟೋ ಎಲೆಕ್ಟ್ರಿಕಲ್ ನ ಮಾಲಕ ಸತ್ಯ...

ಸುಳ್ಯ ನಗರದಲ್ಲಿ ಸ್ವಾತಂತ್ರ್ಯನಡಿಗೆ , ಗೀತಗಾಯನ ಕಾರ್ಯಕ್ರಮ

ಸ್ವಾತಂತ್ರ್ಯ ದಿನಾಚರಣೆಯ ದಿನವಾದ ಆಗಸ್ಟ್ ೧೫ರಂದು ಅಪರಾಹ್ನ ಸುಳ್ಯ ನಗರದಲ್ಲಿ ಸುಳ್ಯ ನಗರದ ಮತ್ತು ತಾಲೂಕಿನ ಎಲ್ಲ ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ 'ಸ್ವಾತಂತ್ರ್ಯ ನಡಿಗೆ' ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ‌ ಎಂದು ಪ್ರಧಾನ ಸಂಚಾಲಕ ಹರೀಶ್ ಬಂಟ್ವಾಳ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಸ್ಟಿಯಲ್ಲಿ ಮತನಾಡುತ್ತಾ ಈ ಬಾರಿ ಆಗಸ್ಟ್ ೧೫ರಂದು...

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರ ಕಚೇರಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಅಧ್ಯಕ್ಷರಾದ ಭರತ್ ಮುಂಡೋಡಿ ರವರ ಕಚೇರಿ ಉದ್ಘಾಟನಾ ಕಾರ್ಯಕ್ರಮ ಇಂದು ನೆರವೇರಿತು. ಗುತ್ತಿಗಾರಿನ ಲೀಲಾವತಿ ಅಪ್ಪಯ್ಯ ಆಚಾರ್ಯ ರವರು ಕಛೇರಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು,ಮಾಜಿ ಶಾಸಕರಾದ ಹರೀಶ್ ಕುಮಾರ್ ರವರು ದೀಪ ಪ್ರಜ್ವಲನೆ ಮಾಡಿದರು. ಈ ಸಂದರ್ಭದಲ್ಲಿ...

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಕಚೇರಿ ಶುಭಾರಂಭ

ಮಂಗಳೂರು, ಆಗಸ್ಟ್  17: ದಕ್ಷಿಣ ಕನ್ನಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ ಅವರ ಕಚೇರಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಆರಂಭಗೊಂಡಿತು.ಸುಳ್ಯ ಗುತ್ತಿಗಾರಿನ   ಯಶಸ್ವಿ ಕುಶಲಕರ್ಮಿ ಮಹಿಳೆ ಲೀಲಾವತಿ ಅವರು ಕಚೇರಿ ಉದ್ಘಾಟಿಸಿದರು. ಸರಕಾರದ ಮುಖ್ಯಸ್ಥರಾದ ಸಿದ್ಧರಾಮಯ್ಯ ಹಾಗೂ ಪಕ್ಷದ ಅಧ್ಯಕ್ಷರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಯೋಜನೆ ಪ್ರಾರಂಭವಾಗಿದ್ದು...

ಕುಸಿದು ಬಿದ್ದು ಆಸ್ಪತ್ರೆ ದಾಖಲಾಗಿದ್ದ  ಲಕ್ಷ್ಮಿ ಅಟೋ ಇಲೆಕ್ಟ್ರಿಕಲ್ ವರ್ಕ್ಸ್ ಮಾಲಕ ಸತ್ಯ ನಿಧನ

ಸುಳ್ಯದ ಹಳೆಗೇಟಿನಲ್ಲಿ ಕುಸಿದು ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ   ವೆಹಿಕಲ್ ಎಲೆಕ್ಟ್ರಿಷಿಯನ್ ಸತ್ಯ  ನಿಧನರಾಗಿದ್ದಾರೆಂದು ತಿಳಿದು ಬಂದಿದೆ.ಎರಡು ದಿನಗಳ ಹಿಂದೆ ಅವರು ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಕುಸಿದು ಬಿದ್ದಿದ್ದರು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ, ಇವರು ಹಲವು ವರ್ಷಗಳಿಂದ ಸುಳ್ಯದಲ್ಲಿ ವಾಹನಗಳ ಇಲಕ್ಟ್ರೀಷಿಯನ್ ಆಗಿ...

ಅರೆಭಾಷೆ ಅಕಾಡೆಮಿ ಸದಸ್ಯರಾಗಿ ವಿನೋದ್ ಮೂಡಗದ್ದೆ ನೇಮಕ

ಕರ್ನಾಟಕ ರಾಜ್ಯ ಅರೆಭಾಷೆ ಅಕಾಡೆಮಿಯ ಸದಸ್ಯರಾಗಿ ವಿನೋದ್ ಮೂಡಗದ್ದೆ ಅವರು ನೇಮಕಗೊಂಡಿದ್ದಾರೆ.ಇವರು ಪತ್ರಕರ್ತರಾಗಿ, ರಂಗಭೂಮಿ ಕಲಾವಿದರಾಗಿ, ಅರೆಭಾಷೆ ನಾಟಕಗಳಲ್ಲಿ ಹಾಗೂ ಕವಿಗೋಷ್ಠಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.ಕೊಡಗು ಚಾನಲ್ ನ ಕಾರ್ಯಕ್ರಮ ನಿರ್ವಾಹಕರಾಗಿ, ಮಡಿಕೇರಿ ಆಕಾಶವಾಣಿ ಉದ್ಘೋಷಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಇವರು ಕ್ರೀಡಾಪಟುವಾಗಿ, ಅತ್ಯುತ್ತಮ ಕಾರ್ಯಕ್ರಮ ನಿರೂಪಕರಾಗಿ ಗುರುತಿಸಿಕೊಂಡಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)

ಎಡಮಂಗಲ : ಮಾಲೆಂಗಿರಿ ಸೇತುವೆ ಬದಿ ಕುಸಿತ

ಎಡಮಂಗಲ ಸಂಪರ್ಕ ರಸ್ತೆ ಮಾಲೆಂಗಿರಿ ಸೇತುವೆ ಬದಿ ಮಣ್ಣು ಕುಸಿದು ಬಿದ್ದಿದ್ದು ಅಪಾಯದಲ್ಲಿದೆ.ಇನ್ನಷ್ಟು ಮಣ್ಣು ಕುಸಿದ್ದು ಬಿದ್ದರೆ ಎಡಮಂಗಲ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿದೆ. ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತಿದ್ದು ಸೇತುವೆ ಹಾನಿಯಾದರೆ ಸಮಸ್ಯೆ ಎದುರಾಗಲಿದ್ದು ಜನಪ್ರತಿನಿಧಿಗಳು,ಅಧಿಕಾರಿಗಳು ಗಮನಹರಿಸಬೇಕಾಗಿ ಸಾರ್ವಜನಿಕರು ತಿಳಿಸಿದ್ದಾರೆ.

ಗುರುಂಪುವಿನಲ್ಲಿ ಬೈಕ್ ಜೀಪ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಮೃತ್ಯು

ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಶಶಿಧರನ್ ಆಲೆಟ್ಟಿ ಯವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ‌ ಆ.10 ರಂದು ಬೆಳಗ್ಗೆಆಲೆಟ್ಟಿಯಿಂದ ಸುಳ್ಯಕ್ಕೆ ತಮ್ಮ ಬೈಕಿನಲ್ಲಿ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು ಗಾಯಗೊಂಡ ಅವರನ್ನು ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ದಾಖಲಿಸಿ...
Loading posts...

All posts loaded

No more posts

error: Content is protected !!