ಅಜ್ಜಾವರ: ಮೇದಿನಡ್ಕದಲ್ಲಿ 78ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು, ಗ್ರಾಮ ಪಂಚಾಯಿತಿಯತ್ ಸದಸ್ಯ ರವಿರಾಜ್ ಕರ್ಲಪ್ಪಾಡಿಯವರು ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಮೇನಾಲ ವಿಷ್ಣು ಯುವಕ ಮಂಡಲದ ಅಧ್ಯಕ್ಷರಾದ ರಂಜಿತ್ ರೈ ಮೇನಾಲ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ದಯಾಳನ್ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಅರ್ಚಕರಾದ ಯೋಗರಾಜ್, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ದಿವ್ಯ ಪಡ್ಡಂಬೈಲು, ವಿನೋದ್ ಮೇದಿನಡ್ಕ , ಹಿರಿಯರಾದ ಕರುಣಾಕರ ವೇದಿಕೆಯಲ್ಲಿ ಉಪಸ್ಥಿತರಿದ್ದರು, ವಿನೋದ್ ಮೇದಿನಡ್ಕ ಸ್ವಾಗತಿಸಿ ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯಂ ದನ್ಯವಾದ ಸಲ್ಲಿಸಿದರು. ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರೂಪಿಸಿದರು.
- Saturday
- September 21st, 2024