Ad Widget

ಕುಲ್ಕುಂದ : ನಾಗರ ಪಂಚಮಿ ಆಚರಣೆ

ಕುಲ್ಕುಂದ  ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಶ್ರೀ ದೇವರಿಗೆ ಹಾಲು ,ಸೀಯಾಳ, ನಾಗತಂಬಿಲ ಸೇವೆ ನಡೆಯಿತು. ‌

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮದ ನಾಗರ ಪಂಚಮಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಕ್ಷೀರಾಭಿಷೇಕ, ಸೀಯಾಳ ಅಭಿಷೇಕ ನಡೆಯಿತು. ‌ ಭಕ್ತರಿಂದ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ಹಾಲು ಸಮರ್ಪಣೆ, ಪುರೋಹಿತ ರಿಂದ ನಾಗರಾಜನಿಗೆ ಹಾಲು, ಸೀಯಾಳ, ಹಣ್ಣು ಕಾಯಿ ಸಮರ್ಪಣೆ ನಡೆಯಿತು. ಅತ್ಯಧಿಕ ಸಂಖ್ಯೆಯಲ್ಲು ಭಕ್ತರು ಶ್ರೀ ದೇವರ ದರುಶನ ಪಡೆದರು.
Ad Widget

ವಳಲಂಬೆ : ನಾಗರಪಂಚಮಿ ಆಚರಣೆ

ಗುತ್ತಿಗಾರು ಗ್ರಾಮದ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಕ್ಷೀರಾಭಿಷೇಕ, ಸೀಯಾಳ ಅಭಿಷೇಕ, ನಾಗ ತಂಬಿಲ ನಡೆಯಿತು. ಮಧ್ಯಾಹ್ನ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ ನೆರವೇರಲಿದೆ.

ಕೊಡಿಯಾಲ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ

ಕೊಡಿಯಾಲ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ದೇವಾಲಯದ ಅರ್ಚಕರಾದ ಶಂಕರನಾರಾಯಣ ಮಯ್ಯರ ನೇತೃತ್ವದಲ್ಲಿ ನಾಗರಪಂಚಮಿ ಅಂಗವಾಗಿ ಹಾಲು,ಸೀಯಾಳ ಅಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

ಕುಮಾರಸ್ವಾಮಿ ವಿದ್ಯಾಲಯ ದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ – ಕುಮಾರ ಸ್ವಾಮಿ ವಿದ್ಯಾಲಯದ ಬಾಲಕ ಬಾಲಕಿಯರ ತಂಡ ಪ್ರಥಮ

ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಆ.8ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕುಮಾರಸ್ವಾಮಿ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಹಾಗೂ ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಆಟಗಾರ ...

ಸಂಪಾಜೆ ಗ್ರಾಮಕ್ಕೆ ಸಹಾಯಕ ಕಮಿಷನರ್ ಭೇಟಿ

ಸುಳ್ಯ ತಾಲೂಕು ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೂನಡ್ಕ ಪೇರಡ್ಕ ರಸ್ತೆಯಲ್ಲಿ ಸಂಪರ್ಕ ಕಲ್ಪಿಸುವ ದರ್ಕಸ್ ಮುಳುಗು ಸೇತುವೆ ಮಳೆಗಾಲದಲ್ಲಿ ಪಯಸ್ವಿನಿ ನದಿಯಲ್ಲಿ ಪ್ರವಾಹ ಹೆಚ್ಚಾದಾಗ ಆಗಾಗ ಮುಳುಗಡೆಯಗುತ್ತಿದ್ದು ಈ ರಸ್ತೆಯಲ್ಲಿ ನೂರಾರು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ನಿತ್ಯ ಸಂಚಾರ ಮಾಡುತ್ತಿದ್ದು ನೂರಾರು ಮನೆಗಳಿಗೆ ಸಂಪರ್ಕ ಕಲ್ಪಿಸುವ ಮಂದಿರ ಮಸೀದಿ ಶಾಲಾ ವಿದ್ಯಾರ್ಥಿಗಳಿಗೆ ಸಂಪರ್ಕ ಕಲ್ಪಿಸುವ...

ಪಂಜ ರೇಂಜರ್ ಗಿರೀಶರಿಗೆ ಎ.ಸಿ.ಎಫ್ ಆಗಿ ಪದೋನ್ನತಿ

ಪಂಜ ರೇಂಜರ್ ಆಗಿರುವ ಗಿರೀಶ್ ಆರ್ ರವರಿಗೆ ಎ.ಸಿ.ಎಫ್ ಆಗಿ ಪದೋನ್ನತಿಯಾಗಿದ್ದು ಅವರನ್ನು ರಾಮನಗರ ಸಾಮಾಜಿಕ ಅರಣ್ಯ ಉಪ ವಿಭಾಗಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಿದೆ.

ನಿವೃತ್ತ ಮುಖ್ಯ ಶಿಕ್ಷಕರಾದ ನಾಗಪ್ಪ ಗೌಡ ಕೂಜುಗೋಡು ಕಟ್ಟೆಮನೆ ನಿಧನ

ಬಾಳುಗೋಡು ಗ್ರಾಮದ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ನಾಗಪ್ಪ ಗೌಡ ಕೂಜುಗೋಡು ಕಟ್ಟೆಮನೆ ಅವರು ಇಂದು ನಿಧನರಾದರು.ಅವರಿಗೆ 94 ವರ್ಷ ವಯಸ್ಸಾಗಿತ್ತು. ಇವರು ಸುಳ್ಯ ತಾಲೂಕು ಶಿಕ್ಷಣ ಇಲಾಖೆಯಲ್ಲಿ ನಿರೀಕ್ಷಕರಾಗಿದ್ದರು.ಮೃತರು ಪುತ್ರರಾದ ಗುತ್ತಿಗೆದಾರರಾದ ದಿನೇಶ್, ಕೆ.ವಿ.ಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಯತೀಶ್, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಮಿತ್ರರರನ್ನು ಅಗಲಿದ್ದಾರೆ.ಮೃತರ ಸದ್ಗತಿ ಕಾರ್ಯಕ್ರಮ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ಅರವಿಂದ ಅಯ್ಯಪ್ಪ ಸತಗುಂಡಿ ಅಧಿಕಾರ ಸ್ವೀಕಾರ

ಸುಬ್ರಹ್ಮಣ್ಯ ಆಗಸ್ಟ್ 8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯಾಗಿ ಅರವಿಂದ ಅಯ್ಯಪ್ಪ ಸತಗುಂಡಿ ಇಂದು ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಅವರು ಹುಲಿಗಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಗೋವಿಂದ ನಾಯ್ಕ ಅವರು ಅಧಿಕಾರ ಹಸ್ತಾಂತರಿಸಿ ಮಾತೃ ಸಂಸ್ಥೆ ಹಿಂದೂ...

ಸಾಕು ಪ್ರಾಣಿಗಳನ್ನು ರಸ್ತೆ ಬದಿಯಲ್ಲಿ ಬಿಡುವಷ್ಟು ನಿರ್ದಯಿಗಳಾಗದಿರಿ ; ಅವುಗಳೂ ಕೂಡ ನಮ್ಮಂತೆಯೇ ಒಂದು ಜೀವ ಎನ್ನುವುದನ್ನು ಮರೆಯದಿರಿ…

ಈ ಜಗತ್ತಿನಲ್ಲಿ ಮನುಷ್ಯನೂ ಸೇರಿದಂತೆ ಪ್ರತಿಯೊಂದು ಪ್ರಾಣಿ-ಪಕ್ಷಿ ಜೀವ ಸಂಕುಲಗಳಿಗೂ ಕೂಡ ಬದುಕಲು ಸಮಾನವಾದ ಹಕ್ಕು ಅವಕಾಶಗಳಿವೆ. ಕಾಡು ಪ್ರಾಣಿಗಳು ತಮ್ಮಿಚ್ಚೆಯಂತೆ ಸ್ವಚ್ಛಂದವಾಗಿ ಕಾಡಿನಲ್ಲಿ ಬದುಕಿದರೆ ಸಾಕು ಪ್ರಾಣಿಗಳು ಮನುಷ್ಯನೊಂದಿಗೆ ಮನುಷ್ಯನಿಗೆ ಉಪಕಾರಿಯಾಗಿ ಬದುಕುತ್ತವೆ.ಮನುಷ್ಯರಾದ ನಾವುಗಳು ನಮ್ಮೊಂದಿಗಿರುವ ಸಾಕು ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತೇವೆ ನಿಜ. ಆದರೆ ಮನುಷ್ಯತ್ವವೇ ಮರೆಯಾಗುತ್ತಿರುವ ಈ ಕಾಲದಲ್ಲಿಯೂ ಮನುಷ್ಯನಿಗಿಂತ ಹೆಚ್ಚಿನ ಪ್ರೀತಿಯನ್ನು...
Loading posts...

All posts loaded

No more posts

error: Content is protected !!