Ad Widget

ನಾಲ್ಕೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ – ಗಿಡ ನೆಡುವ ಕಾರ್ಯಕ್ರಮ

ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ...

ನಿಧನ : ಗಿರಿಜಾ ದಬ್ಬಡ್ಕ

ಹರಿಹರ ಪಲ್ಲತ್ತಡ್ಕ ನಿವಾಸಿ ಕೊಲ್ಲಮೊಗ್ರು ಗ್ರಾಮದ ದಬ್ಬಡ್ಕ ದಿ| ರುಕ್ಮಯ್ಯ ಗೌಡ ರವರ ಧರ್ಮಪತ್ನಿ ಗಿರಿಜಾ ದಬ್ಬಡ್ಕ ರವರು ನಿನ್ನೆ(ಆ.24) ರಾತ್ರಿ 11:30ರ ಸುಮಾರಿಗೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ದಿ| ಕುಮುದಾಕ್ಷಿ, ದಿ| ನರಸಿಂಹ ಹಾಗೂ ಶ್ರೀಮತಿ ವಿಜಯ ಶಿವರಾಮ್ ಕಜ್ಜೋಡಿ ಮತ್ತು ಅಳಿಯಂದಿರಾದ ಬಾಲಭಾಸ್ಕರ, ಶಿವರಾಮ ಕಜ್ಜೋಡಿ...
Ad Widget

ಎನ್ನೆಂಸಿ: ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆಪ್ಟೆಂಬರ್ 2 ರಂದು ನಡೆಯಲಿರುವ ರಾಷ್ಟ್ರೀಯ ವಿಚಾರ ಸಂಕಿರಣದ ಆಮಂತ್ರಣ ಪತ್ರ ಹಾಗೂ ಕರಪತ್ರದ ಅನಾವರಣ ಕಾರ್ಯಕ್ರಮ ಆಗಸ್ಟ್ 24ರಂದು ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಹಾಗೂ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಆಮಂತ್ರಣ ಪತ್ರ ಹಾಗೂ ಕರಪತ್ರವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಬಂಟಮಲೆ...

ಬಾಳಿಲ:ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಬಾಳಿಲ ವಿದ್ಯಾಬೋಧಿನೀ ಸಂಸ್ಥೆಯಲ್ಲಿ ಜರುಗಿತು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಶ್ರೀಯುತ ಪಿ ಜಿ ಎಸ್ ಎನ್ ಪ್ರಸಾದ್ ರವರು ಅಧ್ಯಕ್ಷತೆಯನ್ನು ವಹಿಸಿ...

ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸುಜ್ಞಾನ ನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮವು ಸುಳ್ಯ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುರೇಶ ಕಣೆಮರಡ್ಕರವರ ಅಧ್ಯಕ್ಷತೆಯಲ್ಲಿ ಕೆ ವಿ ಜಿ ತಾಂತ್ರಿಕ ಮಹಾವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ಕುರುಂಜಿಭಾಗ್ ಅಕಾಡೆಮಿ...

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ – ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು . ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ ಎಂ ಎ ಸುಳ್ಯ,...

ತೊಡಿಕಾನ  ಶ್ರೀ  ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಣ ಶನಿವಾರದ ಪ್ರಯುಕ್ತ ಮಹಾಪೂಜೆ

ಸೋಣ ಶನಿವಾರ ಪ್ರಯುಕ್ತ  ತೊಡಿಕಾನ  ಶ್ರೀ  ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂರಾರು  ಭಕ್ತರು ದೂರದ ಊರಿಂದ ಹಾಗೂ ಸ್ಥಳೀಯರು ಮಹಾಪೂಜೆಗೆ ಆಗಮಿಸಿ ದೇವರ ದರ್ಶನ ಪಡೆದರು  ನಂತರ ಅನ್ನಪ್ರಸಾದ ವಿತರಣೆ ನಡೆಯಿತು.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಳಲಂಬೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಗುತ್ತಿಗಾರು, ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆಗಸ್ಟ್ 22ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಡಪ್ಪಾಡಿ ಇಲ್ಲಿ ನಡೆದಿದ್ದು ಸ.ಹಿ.ಪ್ರಾ.ಶಾಲೆ ವಳಲಂಬೆ ಇಲ್ಲಿಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ದ್ವಿತೀಯ...

ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು

ಈಶ್ವರಮಂಗಲದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಆ.20ರಿಂದ ನಾಮಪತ್ತೆಯಾಗಿರುವುದಾಗಿ ಮನೆಯವರು ಬೆಂಗಳೂರು ಬೆಳ್ಳಂದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಈಶ್ವರಮಂಗಲದ ಶ್ರೀಕಾಂತ್ ಎಂಬವರು ಬೆಂಗಳೂರಿನಲ್ಲಿ  ಚಿಕ್ಕ ಬೆಳ್ಳಂದೂರು ಕಾರ್ಮೆಲಾರಂ ರೈಲು ನಿಲ್ದಾಣ ಪಕ್ಕ ನಿಸರ್ಗ ಪಿ.ಜಿ ಯಲ್ಲಿದ್ದು, ಬೆಂಗಳೂರಿನಲ್ಲಿ ಟೆಕ್ನಿಕಲ್ ಆಗಿ ಕೆಲಸ ಮಾಡಿಕೊಂಡಿದ್ದು, ಆ.20ರಂದು ನಾಪತ್ತೆಯಾಗಿದ್ದಾರೆ. ಅವರ ಬ್ಯಾಗ್ ವಿನೋದ ಎಂಬವರಿಗೆ ದೊರೆತಿದ್ದು ಅದನ್ನು...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಗಳಿಗೆ ಚಾಲನೆ

ಸುಳ್ಯ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಶನಿವಾರ ನಡೆಯಿತು.ಸ್ಪರ್ಧೆಗಳಿಗೆ ಶಾಲಾ ಸಂಚಾಲಕ ಜಾಕೆ ಸದಾನಂದ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ದೇರಣ್ಣ ಗೌಡ ಎ ವಹಿಸಿದರು.ಅತಿಥಿಗಳಾಗಿ ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಆಶಾ ನಾಯಕ್ ಭಾಗವಹಿಸಿ ಪ್ರಾಸ್ತಾವಿಕ ಮಾತನಾಡಿದರು.ವೇದಿಕೆಯಲ್ಲಿ ಎಸ್. ಡಿ.ಎಂ.ಸಿ...
Loading posts...

All posts loaded

No more posts

error: Content is protected !!