Ad Widget

ಕಳಂಜ: 33ನೇ ವರ್ಷದ ಮೊಸರು ಕುಡಿಕೆ ಉತ್ಸವ, ಉದ್ಘಾಟನೆ

ಕಲಾವಿಕಾಸ(ರಿ.) ಕಳಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 33ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.01ರಂದು ನಡೆಯಿತು. ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಕರುಣಾಕರ ಶೆಟ್ಟಿ ನಾಲ್ಗುತ್ತು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಎನ್.ವಿಶ್ವನಾಥ ರೈ ಕಳಂಜ, ಕಳಂಜ ಶ್ರೀ ವಿಷ್ಣುಮೂರ್ತಿ ಕಲಾ ಸಂಘದ ಮಾಜಿ ಅಧ್ಯಕ್ಷರಾದ ರುಕ್ಮಯ್ಯ ಗೌಡ ಕಳಂಜ, ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಮಾಜಿ ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ, ಪುರಂದರ ಗೌಡ ಸಪ್ತಗಿರಿ, ದೈವಸ್ಥಾನದ ಪಾತ್ರಿ ಚಂದ್ರಹಾಸ ಮಣಿಯಾಣಿ, ಕಲಾವಿಕಾಸ(ರಿ.) ಕಳಂಜ ಇದರ ಅಧ್ಯಕ್ಷ ಲೋಹಿತ್ ಕಟ್ಟತ್ತಾರು, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ ಹಾಗೂ ಕಲಾವಿಕಾಸ(ರಿ.) ಕಳಂಜ ಇದರ ಸದಸ್ಯರು, ಊರವರು ಉಪಸ್ಥಿತರಿದ್ದರು. ಮೊಸರು ಕುಡಿಕೆ ಉತ್ಸವದ ಅಂಗವಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆದವು. ಸಂಜೆ ಸಮಾರೋಪ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಆಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!