
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ ವಿ ಚಿದಾನಂದ ಇವರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ವಾಗಿದೆ. ಹಾಗು ಸಮಾಜಕ್ಕೆ ಅವರಿಂದ ಇನೂ ಹೆಚ್ಚಿನ ಸೇವೆಗಳು ಲಭಿಸಲಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಭಾರ ಕ್ಢೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು ಕೆ_ ಕೇಂದ್ರ ಸಾಹಿತ್ಯ ಪರಿಷತ್ ಸದಸ್ಯ ಡಾ ಮಾಧವ ಎಮ್ ಕೆ, ಹೋಬಳಿ ಘಟಕಗಳ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ , ಚಂದ್ರಾವತಿ ಬಡ್ಡಡ್ಕ, ಗೌರವ ಕಾರ್ಯದರ್ಶಿ ಚಂದ್ರಮತಿ ಕೆ, ಕೋಶಾಧಿಕಾರಿ ದಯಾನಂದ ಆಳ್ವ, ಜಿಲ್ಲಾ ಪ್ರತಿನಿಧಿ ಇವರು ಉಪಸ್ತಿತರಿದ್ದರು. ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿ ಶ್ರೀಮತಿ ಲತಾ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತು, ತಾಲೂಕು ಸಾಹಿತ್ಯ ಪರಿಷತ್ತು, ಹಾಗೂ ಹೋಬಳಿ ಘಟಕದ ಪದಾಧಿಕಾರಿಗಳು ಹಾಗು ಸದಸ್ಯರು ಉಪಸ್ಥಿತರಿದ್ದರು.