Ad Widget

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

 ಶಾಲಾ ಶಿಕ್ಷಣ ಇಲಾಖೆ (ಪಪೂ )ಹಾಗೂ ಶಾರದಾ ಪಪೂ ಕಾಲೇಜು ಸುಳ್ಯ ಇವರು ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ   ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ  ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾoಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಕನ್ನಡ ಭಾಷೆ ಕಲಿಸುವುದರಲ್ಲಿ ನಾವು ಶೇ 50 ರಷ್ಟು ಹಿಂದಿದ್ದೇವೆ – ಬಿಳಿಮಲೆ

ಸುಳ್ಯಕ್ಕೆ ಆಗಮಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆಯವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜತೆ ಪತ್ರಕರ್ತರ ಜತೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯ ಕುರಿತಾಗಿ ಮಾತನಾಡಿದರು. ಕನ್ನಡವನ್ನು ಕಲಿಸುವ ಮಾದರಿಯಲ್ಲಿ ನಾವು ಶೇ.50ರಷ್ಟು ಹಿಂದಿದ್ದೇವೆ ಎಂದು ಹೇಳಿದರು.‌ ಅಲ್ಲದೇ ರಾಜ್ಯ ಸರಕಾರಗಳು ಅಂದಿನಿಂದ ಇಂದಿನವರೆಗೆ ಕನ್ನಡದ ಅಭಿವೃದ್ಧಿಗೆ ಬೇಕಾಗಿ ಅನೇಕ...
Ad Widget

ಸುಬ್ರಹ್ಮಣ್ಯ : ಅಂತಿಮ ಪದವಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಜಿಲ್ಲಾ ಯೋಜನೆ “ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ” ವು ಆ.23 ರಂದು ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನಲ್ಲಿ ನಡೆಯಿತು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರೋ.ವೆಂಕಟೇಶ್.ಹೆಚ್.ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ ವಸತಿಯುತ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರಾದ...

ಕೆಲಸದ ಒತ್ತಡಗಳ ಮಧ್ಯೆ ಕೆಸರುಗದ್ದೆಯಲ್ಲಿ ಕ್ರೀಡೆಯ ಮೂಲಕ ಸಂಭ್ರಮಿಸಿದ ಸುಳ್ಯ ಪೋಲೀಸರು

ಸುಳ್ಯ:ಉಪನಿರೀಕ್ಷಕ ಈರಯ್ಯ ದೂಂತೂರು ಸೇರಿದಂತೆ ಠಾಣಾ ಸಿಬ್ಬಂದಿಗಳು ಅಜ್ಜಾವರ ಗ್ರಾಮದ ಮೇನಾಲದ ಕೆಸರುಗದ್ದೆಯಲ್ಲಿ ಸುಳ್ಯ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ವಿವಿಧ ಕ್ರೀಡೆಗಳನ್ನು ಆಡಿ ಸಂಭ್ರಮಿಸಿದರು. ಕೆಲಸದ ಒತ್ತಡಗಳ ನಡುವೆ ಪೊಲೀಸ್ ಅಧಿಕಾರಿಗಳಾದ ಈರಯ್ಯ ದೂಂತೂರು ನೇತೃತ್ವದಲ್ಲಿ ಸಿಬ್ಬಂದಿಗಳು ಪರಸ್ಪರ ಒಬ್ಬರನ್ನೊಬ್ಬರು ಕೆಸರಿಗೆ ತಳ್ಳಿ ಹಾಕಿ ಜೈಕಾರಗಳನ್ನು ಹಾಕಿಕೊಂಡು ಸಂತೋಷಪಟ್ಟರು.

ಸುಳ್ಯ ಎನ್ನೆoಪಿಯುಸಿಯಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಕ್ರೀಡೆಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉನ್ನತ ಸಾಧನೆಗೈಯುವಂತಾಗಲಿ ಅವರು ಶ್ರೀ ಪಿ ಎಸ್ ಗಂಗಾಧರ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಸಹಯೋಗದಲ್ಲಿ ಗೌಡ ಸಮುದಾಯ ಭವನ ಕೊಡಿಯಾಲಬೈಲ್  ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ...

ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾ‌ರ್ ಜಿ.ಮಂಜುನಾಥ್ ಅವರಿಗೆ ಬೀಳ್ಕೊಡುಗೆ.

ಸುಳ್ಯ: ಕಳೆದ ಹದಿನೈದಕ್ಕು ಹೆಚ್ಚು ತಿಂಗಳುಗಳಿಂದ ಸುಳ್ಯ ನಗರ ಪಂಚಾಯತ್‌ನ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ತಹಶೀಲ್ದಾ‌ರ್ ಜಿ.ಮಂಜುನಾಥ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ನಗರ ಪಂಚಾಯತ್‌ಗೆ ನೂತನ ಅಧ್ಯಕ್ಷ, ಹಾಗೂ ಉಪಾಧ್ಯಕ್ಷ ಆಯ್ಕೆ ನಡೆದ ಹಿನ್ನಲೆಯಲ್ಲಿ ಆಡಳಿತಾಧಿಕಾರಿ ಅವರ ಅಧಿಕಾರ ಕೊನೆಗೊಂಡಿದೆ. ಈ ಹಿನ್ನಲೆಯಲ್ಲಿ ನಗರ ಪಂಚಾಯತ್‌ನಲ್ಲಿ ಸೆ.2ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ನ.ಪಂ. ಅಧ್ಯಕ್ಷೆ ಎ.ಶಶಿಕಲಾ...

ಕಾಂತಮಂಗಲ ಹೊಳೆಗೆ ಹಾರಿದ ಯುವಕನ ಮೃತದೇಹ ಪತ್ತೆಹಚ್ಚಿದ ಉಪ್ಪಿನಂಗಡಿ ಮುಳುಗು ತಜ್ಞರು.

ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನಿನ್ನೆ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಡ್ಕ ನಿವಾಸಿ ಸುಮಾರು 23 ವರ್ಷದ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ ಮುಳುಗು ತಜ್ಞರ ತಂಡ ಮತ್ತು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಚ್ಚು ಪ್ರಗತಿ ಸಹಿತ ಮತ್ತಿತರರ ಸಹಾಯದಿಂದ ಮೃತದೇಹವನ್ನು ಪತ್ತೆ ಮಾಡಿರುವುದಾಗಿ ತಿಳಿದುಬಂದಿದೆ.

ಮರೆಯದಿರು ನೀ..

ಮಳೆಹನಿಗಳು ನಾ ಮೇಲು-ತಾ ಮೇಲು ಎನ್ನುತ್ತಾ ಪುಟಿದುಒಂದಾಗಿ ಹರಿಯುವುದು ನೀ ಕಂಡಿಯಾ?ಇನ್ನೇಕೆ ನಮ್ಮೊಳಗಿನ ಜಗಳನಾವೆಲ್ಲರೂ ಒಂದೇ ಎಂದು ನೀ ಮರೆತೆಯಾ? ಮಳೆಗೆ ಬಾಗಿದ ಗಿಡಗಳು ಖುಷಿಯಾಗಿ ನಿಲ್ಲುವುದುತಾ ಬಾಗಿದರೂ, ಬಾಯಾರಿದ ಬೇರು ತನಿಯಿತೆಂದು..ಬಂದ ಕಷ್ಟವ ಎದುರಿಸಿ ನೀ ಧೈರ್ಯದಿ ನಿಲ್ಲು..ಅನುಭವಗಳಿಂದ ಗಟ್ಟಿಯಾದೆನೆಂದು.. ಗಾಳಿಯಾಡಲು ಖುಷಿಯಾದ ಮರಗಳುಭೂಮಿಯ ಮುಟ್ಟುವ ಯತ್ನದಲ್ಲಿ..ತಾನು ನಿಲ್ಲಲು ಭೂಮಿಯೇ ಕಾರಣವೆಂಬಹೆಮ್ಮೆ ಅವುಗಳಲ್ಲಿ.. ಖುಷಿಯಾಡೊಡನೆ...

ಕ್ರೈಸ್ತ ಅಲ್ಪಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ – ಶೇ 12 ಡಿವಿಡೆಂಡ್ ನೀಡಲು ತೀರ್ಮಾನ

ಸೆ.01 ಆದಿತ್ಯವಾರದಂದು ಕ್ರೈಸ್ತ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರಿ ಸಂಘದ 2023-24ನೇ ಸಾಲಿನ 15ನೇ ವಾರ್ಷಿಕ ಮಹಾಸಭೆಯು ದೇವಮ್ಮ ಕಾಂಪ್ಲೆಕ್ಸ್ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಬಿಟ್ಟಿ ಬಿ ನೆಡುನಿಲಂ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. 2023-24ನೇ ಸಾಲಿನಲ್ಲಿ ಸಂಘವು ಉತ್ತಮ ವ್ಯವಹಾರ ನಡೆಸಿರುತ್ತದೆ. ಮತ್ತು ಸಂಘದ ಸದಸ್ಯರಿಗೆ 12% ಡಿವಿಡೆಂಡ್ ನೀಡುವುದೆಂದು ತೀರ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕೆ.ಪಾ...

ಸುಳ್ಯ : ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಭಾರತೀಯ ಜನತಾ ಪಾರ್ಟಿಯ ಮುಂದಿನ ಆರು ವರ್ಷಗಳ ಅವಧಿಯ ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ದೆಹಲಿಯಲ್ಲಿ ಚಾಲನೆ ನೀಡಿದ್ದು ಈ ಸಂದರ್ಭದಲ್ಲಿ ಸುಳ್ಯದಲ್ಲೂ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಯಿತು. ಸುಳ್ಯದ ಬಿಜೆಪಿಯ ಹಿರಿಯರಾದಂತಹ ಸೀತ ಅಶೋಕ್ ಪ್ರಭುಗಳ ಮನೆಯಲ್ಲಿ ಅಶೋಕ್ ಪ್ರಭುಗಳು 8800002024 ಸಂಖ್ಯೆಗೆ ಮಿಸ್ ಕಾಲ್ ನೀಡುವ ಮೂಲಕ ಬಿಜೆಪಿಯ ಸದಸ್ಯತ್ವವನ್ನು ಪಡೆದುಕೊಂಡರು....
Loading posts...

All posts loaded

No more posts

error: Content is protected !!