Ad Widget

ಕೊಲ್ಲಮೊಗ್ರು : ಮಳೆಗಾಲದಲ್ಲಿ ಸಂಚಾರಕ್ಕೆ ಕಷ್ಟಕರವಾಗುವ ಮುಳುಗು ಸೇತುವೆಗೆ ಸಿಗಬೇಕಿದೆ ಮುಕ್ತಿ ; ಸರ್ವಋತು ಸೇತುವೆ ನಿರ್ಮಾಣಕ್ಕೆ ಆಗ್ರಹ

✍️ಉಲ್ಲಾಸ್ ಕಜ್ಜೋಡಿಮಳೆಗಾಲದ ಸಮಯದಲ್ಲಿ ನೀರಿನ ಹರಿವು ಹೆಚ್ಚಾಗಿ ನದಿಗಳು ತುಂಬಿ ಹರಿಯುವುದು ಸರ್ವೇಸಾಮಾನ್ಯ. ಕೆಲವೊಮ್ಮೆ ನೀರಿನ ಹರಿವು ಹೆಚ್ಚಾದಾಗ ನದಿಯ ನೀರು ರಸ್ತೆ, ಸೇತುವೆಗಳ ಮೇಲೆ ಹರಿದು ಕೆಲಹೊತ್ತು ಸಂಚಾರಕ್ಕೆ ತೊಡಕುಂಟಾಗುತ್ತದೆ. ಆದರೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರು ಪೇಟೆ ಸಮೀಪದಲ್ಲಿರುವ ಕೊಲ್ಲಮೊಗ್ರು ಮತ್ತು ಕಲ್ಮಕಾರು ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಮುಳುಗು ಸೇತುವೆಯೊಂದಿದ್ದು, ಪ್ರತೀ...

ಕಡ್ತಲ್ ಕಜೆ ಕೆಂಚಪ್ಪ ಗೌಡ ನಿಧನ

ಗುತ್ತಿಗಾರು ಗ್ರಾಮದ ಕಡ್ತಲ್ ಕಜೆ ಕೆಂಚಪ್ಪ ಗೌಡ ಸೆ.02 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರರಾದ ಗೋವರ್ದನ, ಮೆಸ್ಕಾಂ ಉದ್ಯೋಗಿ ಹರ್ಷವರ್ದನ, ಪುತ್ರಿ ಚಿತ್ರಾ ಚಂದ್ರಶೇಖರ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Ad Widget

ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಶತಮಾನೋತ್ಸವ ಕಂಡ ಅರಂತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 1ರಂದು ಶ್ರಮದಾನ ನಡೆಯಿತು ಈ ಸಂದರ್ಭದಲ್ಲಿ ಗೋಪಾಲಕೃಷ್ಣ ಬನ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಉಳುವಾರು ಶಿಕ್ಷಕಿ ಭಾನುಮತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶ್ರಮದಾನದಲ್ಲಿ...

ಸುಬ್ರಹ್ಮಣ್ಯ : ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಮಹಾಸಭೆ – ಅಧ್ಯಕ್ಷರಾಗಿ ಚಿದಾನಂದ, ಕಾರ್ಯದರ್ಶಿಯಾಗಿ ಕುಸುಮಾಧರ

ಕುಕ್ಕೆಶ್ರೀ ಟ್ಯಾಕ್ಸಿ ಚಾಲಕ ಮಾಲಕರ ಸಂಘದ ಮಹಾಸಭೆ ಆ.29 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತರ ಅಧ್ಯಕ್ಷರಾಗಿ ಚಿದಾನಂದ ಆರಾಧನಾ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಿನೇಶ್ ಕಲ್ಲೇರಿ, ಕಾರ್ಯದರ್ಶಿಯಾಗಿ ಕುಸುಮಾಧರ ಆರಾಧನಾ, ಜೊತೆ ಕಾರ್ಯದರ್ಶಿಯಾಗಿ ಮನೋಜ್ ಪೆರ್ನಾಜೆ ಆಯ್ಕೆಯಾದರು.

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅಕ್ಷಯ ಬಾಬ್ಲುಬೆಟ್ಟು ಗೆ ಚಿನ್ನದ ಪದಕ

ಕರ್ನಾಟಕ ರಾಜ್ಯಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ -2024 ಯೋಗಾಸನ ಸ್ಪರ್ಧೆ ಗಂಗಾ ಇಂಟರ್ನ್ಯಾಷನಲ್ ಸ್ಕೂಲ್ ಬೆಂಗಳೂರು ನಲ್ಲಿ 01 ಸೆಪ್ಟೆಂಬರ್ 2024 ರಂದು ಆದಿತ್ಯವಾರ ದಂದು ನಡೆಯಿತು.10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಅಕ್ಷಯ ಬಾಬ್ಲುಬೆಟ್ಟು ಪ್ರಥಮ ಸ್ಥಾನ ಗಳಿಸಿರುತ್ತಾರೆ.ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೇಕಲ್ಲು ನಲ್ಲಿ 04 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.ಇವರು...

ದೇವಚಳ್ಳ : ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ – ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತ ರೋಗಗಳ ನಿಯಂತ್ರಣ ಸಾಧ್ಯ – ಡಾ.ಸೀತಾರಾಮ್ ಭಟ್

"ರಕ್ತದಾನ ಮಾಡುವುದರಿಂದ ಮತ್ತೊಬ್ಬ ವ್ಯಕ್ತಿಯ ಜೀವ ಉಳಿಸಿದಂತಾಗುತ್ತದೆ ಮಾತ್ರವಲ್ಲದೆ,ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದು, 18 ರಿಂದ 60 ವಯಸ್ಸಿನ ಆರೋಗ್ಯವಂತ ವ್ಯಕ್ತಿಗಳು ಲಿಂಗ ಭೇದವಿಲ್ಲದೆ ರಕ್ತ ಮಾಡಬಹುದು" ಎಂದು ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಅಧ್ಯಕ್ಷರಾದ ಡಾ. ಸೀತಾರಾಮ ಭಟ್ ಹೇಳಿದರು. ಅವರು ಸೆ.01ರಂದು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಬೃಹತ್ ರಕ್ತದಾನ...

ಕಳಂಜ: 33ನೇ ವರ್ಷದ ಮೊಸರು ಕುಡಿಕೆ ಉತ್ಸವ, ಉದ್ಘಾಟನೆ

ಕಲಾವಿಕಾಸ(ರಿ.) ಕಳಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 33ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆ.01ರಂದು ನಡೆಯಿತು. ಬೆಳಗ್ಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಶ್ರೀ ವಿಷ್ಣುಮೂರ್ತಿ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಕರುಣಾಕರ ಶೆಟ್ಟಿ ನಾಲ್ಗುತ್ತು ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಎನ್.ವಿಶ್ವನಾಥ ರೈ...
error: Content is protected !!