- Sunday
- April 20th, 2025

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.12ರಂದು ಗುರುವಾರ ಹೊಸ್ತಾರೋಗಣೆ(ನವಾನ್ನ ಪ್ರಸಾದ) ನೆರವೇರಲಿದೆ. ಈ ನಿಮಿತ್ತ ಪ್ರಾತ:ಕಾಲ 5.15 ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, 7.30 ಕ್ಕೆ ತೆನೆ ತರುವುದು ಹಾಗೂ ಕದಿರು ಪೂಜೆ ನಡೆಯಲಿರುವುದು. ಬೆಳಗ್ಗೆ 8 ರ ಬಳಿಕ ದೇವಳದ ನೌಕರರಿಗೆ ಮತ್ತು ಸ್ಥಳೀಯ...

ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದ ಮಕ್ಕಳಿಂದ ಸುದರ್ಶನ ವಿಜಯ ಭಾರ್ಗವ ವಿಜಯ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಗ್ರಾಮದ ಮಕ್ಕಳು ಪುಟ್ಟಪುಟ್ಟ ಹೆಜ್ಜೆಯನ್ನು ಹಾಕಿ ಕುಣಿದು ತಮ್ಮದೇ ರೀತಿಯಲ್ಲಿ ಅವರವರ ಪಾತ್ರವನ್ನು ಅದ್ಭುತವಾಗಿ ಪ್ರಸಂಗಿಸಿ ಪ್ರೇಕ್ಷಕರ ಮನತಣಿಸಿದರು. ಗ್ರಾಮದ ಎಲ್ಲಾ ಮಕ್ಕಳ ಬಗ್ಗೆ ಸಾರ್ವಜನಿಕರು ಅಭಿಮಾನ ವ್ಯಕ್ತಪಡಿಸಿದರು. ಯೋಗೀಶ್ ಶರ್ಮಾ ರವರ ಭಾಗವತಿಕೆಯಲ್ಲಿ...

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರ ಗೃಹರಕ್ಷಕ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಸೆ. 8ರಂದು ಬೆಳ್ಳಾರೆಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಹುಟ್ಟೂರಿನಲ್ಲಿ ಪಡೆದ ಸನ್ಮಾನ ರಾಷ್ಟ್ರ ಪ್ರಶಸ್ತಿ ಪಡೆದದ್ದಕೆ ಸಮಾನ ವೈದ್ಯಕೀಯ ವೃತ್ತಿಯ ಜೊತೆಜೊತೆಗೆ ನಿರಂತರ ಬರಹಗಳನ್ನು ಬರೆಯುತ್ತಾ ಸಮಾಜಕ್ಕೆ ಉತ್ತಮ...

ಬ್ರಿಟಿಷರ ಒಡೆದು ಆಳುವ ನೀತಿಯ ವಿರುದ್ಧ ಹಿಂದೂ ಸಮಾಜ ಸಂಘಟಿತವಾಗಲೂ ಗಣೇಶೋತ್ಸವ ಆಚರಣೆಯನ್ನು ತಿಲಕ್ ರವರು ಆರಂಭಿಸಿದಂತೆ ಇಂದು ನಾವೆಲ್ಲರೂ ಒಗ್ಗಟ್ಟಾಗಿ ಹಿಂದೂ ಧರ್ಮದ ರಕ್ಷಣೆಗಾಗಿ ಜಾಗೃತ ಸಮಾಜ ನಿರ್ಮಿಸಬೇಕಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕರಾದ ಶಿವಪ್ರಸಾದ್ ಮಲೆಬೆಟ್ಟು ಹೇಳಿದರು. ಅವರು ವಳಲಂಬೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ...

ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಲಿರುವ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಮನವಿ ಪತ್ರ ಮತ್ತು ಕ್ರೀಡಾ ಲೋಗೋ ಬಿಡುಗಡೆ ಕಾರ್ಯಕ್ರಮ ಸೆ. 08 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಚ ವೆಂಕಟ್ ದಂಬೆಕೋಡಿ, ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಮಾಜಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಸೀ ಫುಡ್ ಇದರ ಮಾಲಕರಾದ ಇಬ್ರಾಹಿಂ ಜಿ.,...

ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ನವೀನ್ ಮೃತಪಟ್ಟ ಘಟನೆ ಇಂದು ನಡೆದಿದ್ದು, ದ್ವಿತೀಯ ವರ್ಷದ ಐಟಿಐ ಪರೀಕ್ಷೆ ಬರೆದಿದ್ದು, ಪರೀಕ್ಷೆ ಫಲಿತಾಂಶ ಬರುವ ಮೊದಲೇ ವಿಧಿ ಬರಹ ಬೇರೆಯಾಗಿತ್ತು. ಈತ ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ. ನವೀನ್ ತಂದೆ,ತಾಯಿ, ಸಹೋದರ...

ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.ರಿಕ್ಷಾ ಶರತ್ ಎಂಬುವರದಾಗಿದ್ದು ಸ್ಕೂಟಿ ಸವಾರ ಐಟಿಐ ವಿದ್ಯಾರ್ಥಿ ನವೀನ್ ಎಂದು ತಿಳಿದುಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ಮೃತಪಟ್ಟ ದುರ್ದೈವಿ.

ಶ್ರೀ ರಾಮ ಭಜನಾ ಸೇವಾ ಸಂಘ ಜಟ್ಟಿಪಳ್ಳ ಇದರ ವತಿಯಿಂದ ನಡೆದ 31ನೇ ವರ್ಷದ ಗಣೇಶೋತ್ಸವವು ಬೆಳಿಗ್ಗೆ ಮೂರ್ತಿ ಪ್ರತಿಷ್ಠೆ ಯೊಂದಿಗೆ ಆರಂಭಗೊಂಡು, ವಿವಿಧ ದಾರ್ಮಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು. ವಿಜೃಂಭಣೆಯ ಶೋಭಾಯಾತ್ರೆಯು ಸುಳ್ಯದ ಮುಖ್ಯರಸ್ತೆಯಲ್ಲಿ ಸಾಗಿತು. ನಾಸಿಕ್ ಬ್ಯಾಂಡ್ ಮತ್ತು ಮಕ್ಕಳ ತಂಡದ ಆಕರ್ಷಣೀಯ ಕುಣಿತ ಭಜನೆಯು ಗಮನ ಸೆಳೆಯಿತು.

ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ಸುಳ್ಯ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ 56ನೇ ವರ್ಷದಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಶ್ರೀ ಗಣಪತಿ ಪ್ರತಿಷ್ಠೆ ನಡೆಯಿತು. ಐದು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆದು ಸೆ.11 ರಂದು ಶೋಭಯಾತ್ರೆಯೊಂದಿಗೆ ಶ್ರೀ ದೇವರ ವಿಸರ್ಜನೆ ನಡೆಯಲಿದೆ.

All posts loaded
No more posts