Ad Widget

ದುಗ್ಗಲಡ್ಕ : 24ನೇ ವರ್ಷದ ಗಣೇಶೋತ್ಸವ ಆಚರಣೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ದುಗ್ಗಲಡ್ಕ ಇದರ ಆಶ್ರಯದಲ್ಲಿ 24ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ದುಗ್ಗಲಡ್ಕದ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಠಾರದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ನೆರವೇರಿತು.‌ ಇಂದು ಸಂಜೆ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ.

ಅಕ್ಟೋಬರ್ 9ರಿಂದ 17ರ ತನಕ ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ ಉತ್ಸವ – ಇಂದು ಆಮಂತ್ರಣ ಬಿಡುಗಡೆಗೊಳಿಸಿದ ಶಾಸಕಿ ಕು|ಭಾಗೀರಥಿ ಮುರುಳ್ಯ

ಸುಳ್ಯದ ನಾಡಹಬ್ಬ 53ನೇ ವರ್ಷದ ಶ್ರೀ ಶಾರದಾಂಬ ದಸರಾ – 2024ರ ಆಮಂತ್ರಣ ಪತ್ರಿಕೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಶ್ರೀ ಚೆನ್ನಕೇಶವ ದೇವಾಲಯದ ವಠಾರದಲ್ಲಿ ಬಿಡುಗಡೆಗೊಳಿಸಿದರು. ಸುಳ್ಯ ದಸರಾ ಉತ್ಸವವು ಅ.9ರಿಂದ ಅ.17ರ ತನಕ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮೈದಾನದಲ್ಲಿ ವಿಜೃಂಭಣೆಯಿಂದ ಜರುಗಲಿದೆ. ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ...
Ad Widget

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ –

▪️ಅಧ್ಯಕ್ಷರಾಗಿ ಮಿರಾಝ್ ಸುಳ್ಯ▪️ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ▪️ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ ಸುಳ್ಯ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ನ 2024-27 ನೇಯ ಸಾಲಿಗೆ...

ವಳಲಂಬೆ : ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟನೆ

ಗಣೇಶ ಚತುರ್ಥಿ ಪ್ರಯುಕ್ತ ಗುತ್ತಿಗಾರು ಗ್ರಾಮ ಪಂಚಾಯತ್ ಒಕ್ಕೂಟ ಮತ್ತು ದೇವಚಳ್ಳ ಗ್ರಾಮ ಪಂಚಾಯತ್ ಒಕ್ಕೂಟ ಜಂಟಿ ಆಶ್ರಯ ದಲ್ಲಿ ವಳಲಂಬೆ ದೇವಸ್ಥಾನ ಆವರಣ ದಲ್ಲಿ ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬೆಳ್ಯಪ್ಪ...

ಚೌತಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲರ್ಸ್ ನಲ್ಲಿ ಫುಲ್ ರಶ್ – ಶುಭ ದಿನದಂದು ಚಿನ್ನ ಖರೀದಿಗೆ ಆಗಮಿಸಿದ ಗ್ರಾಹಕರು

ಸುಳ್ಯದ ಪ್ರಸಿದ್ಧ ಜಿ.ಎಲ್.ಆಚಾರ್ಯ ಜ್ಯುವೆಲರ್ಸ್ ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಪುಲ್ ರಶ್ ಕಂಡು ಬಂದಿದೆ.ಶುಭ ದಿನದ ಪ್ರಯುಕ್ತದ ಖರೀದಿಗಾಗಿ ಬೆಳಗ್ಗಿನಿಂದಲೇ ಗ್ರಾಹಕರು ಚಿನ್ನ, ಬೆಳ್ಳಿ ಖರೀದಿಗಾಗಿ ಧಾವಿಸಿದರು. ಮಕ್ಕಳಿಗೆ ಕಿವಿ ಚುಚ್ಚುಲು ಶುಭ ದಿನವಾದುದರಿಂದಲೂ ಮಳಿಗೆ ಜನಸಂದಣಿ ಕಂಡು ಬಂತು. ಗ್ರಾಹಕರು ವೈವಿಧ್ಯಮಯ ಚಿನ್ನಾಭರಣಗಳನ್ನು ಖರೀದಿಸಿದರು.

ಹರಿಹರ ಪಲ್ಲತ್ತಡ್ಕ – 15 ನೇ ವರ್ಷದ ಗಣೇಶೋತ್ಸವ ಆಚರಣೆ

ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.‌

ಕುಕ್ಕುಜಡ್ಕ : 32 ನೇ ವರ್ಷದ ಗಣೇಶೋತ್ಸವು ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಕ್ಕುಜಡ್ಕ ಇದರ ವತಿಯಿಂದ ನಡೆಯುವ 32 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ಸೆ.08 ರಂದು ಅದ್ದೂರಿ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ.

ಕಲ್ಮಡ್ಕ : ನವೋದಯ ಸಂಘದ ಆಶ್ರಯದಲ್ಲಿ 46 ವರ್ಷದ ಗಣೇಶೋತ್ಸವ ಆಚರಣೆ

ಕಲ್ಮಡ್ಕ ನವೋದಯ ಸಂಘ ಆಶ್ರಯದಲ್ಲಿ 46 ವರ್ಷದ ಗಣೇಶೋತ್ಸವು ಗಣಪತಿ ಪ್ರತಿಷ್ಠೆಯೊಂದಿಗೆ ಆರಂಭಗೊಂಡಿತು. ವೇದಮೂರ್ತಿ ಶಿವರಂಜನ್ ವೈದಿಕ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.ಇಂದು ಸಂಜೆ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನಡೆಯಲಿದೆ.

ಪೇರಾಲು – ಮೈತಡ್ಕ ಗಣೇಶೋತ್ಸವ ಆಚರಣೆ

ಪಯಸ್ವಿನಿ ಕ್ರೀಡಾ ಮತ್ತು ಕಲಾ ಸಂಘ ಹಾಗೂ ಪಯಸ್ವಿನಿ ಯುವತಿ ಸಂಘ ಪೇರಾಲು ಮೈತಡ್ಕ ಇದರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ಗಣಪತಿ ಪ್ರತಿಷ್ಠೆ ನಡೆಯಿತು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಇಂದು ಸಂಜೆ ಶೋಭಾಯಾತ್ರೆ ನಡೆಯಲಿದೆ.

ವಳಲಂಬೆ : ಗಣಪತಿ ಪ್ರತಿಷ್ಠೆಯೊಂದಿಗೆ ಗಣೇಶೋತ್ಸವ ಆರಂಭ – ನಾಳೆ ಶೋಭಾಯಾತ್ರೆ

ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವು ಇಂದು ಬೆಳಿಗ್ಗೆ ಗಣಪತಿ ಮೂರ್ತಿಯ ಪ್ರತಿಷ್ಠಾಪನೆಯೊಂದಿಗೆ ಆರಂಭಗೊಂಡಿದೆ. ಎರಡು ದಿನಗಳ ಕಾಲ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಭಜನೆ ಹಾಗೂ ವಿವಿಧ ಸ್ಪರ್ಧಾ ಕಾರ್ಯಕ್ರಮಗಳೊಂದಿಗೆ ನಡೆದು ಸೆ.08 ರಂದು ಭವ್ಯ ಶೊಇಭಾಯಾತ್ರೆಯಲ್ಲಿ ತೆರಳಿ ಶ್ರೀ ಗಣೇಶನ ವಿಸರ್ಜನೆ...
Loading posts...

All posts loaded

No more posts

error: Content is protected !!