- Saturday
- March 7th, 2026
ಅಜ್ಜಾವರ ಗ್ರಾಮದ ಅಡ್ಡಂತ್ತಡ್ಕ ಮೋನಪ್ಪ ಗೌಡ (88) ಅಲ್ಪಕಾಲದ ಅಸೌಖ್ಯದಿಂದ ಮೇನಾಲದಲ್ಲಿರುವ ಸ್ವಗೃಹದಲ್ಲಿ ಸೆ.28 ರಂದು ನಿಧನರಾದರು. ಮೃತರು ಪತ್ನಿ ಮುತ್ತಮ್ಮ, ಪುತ್ರರಾದ ಚಂದ್ರಶೇಖರ, ಗೋಪಾಲಕೃಷ್ಣ ಹಾಗೂ ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ನಾಲ್ಕೂರು ಗ್ರಾಮದ ಹೊಸಹಳ್ಳಿ ನಿವಾಸಿ ಬಾಬುಗೌಡ ಬಾಳಿಲ ಕುಕ್ಕುತಡಿ ಇಂದು ಮುಂಜಾನೆ ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಚಂದ್ರಾವತಿ, ಮಗ ಸುರೇಶ್ ಬಾಳಿಲ, ಪುತ್ರಿ ನವೀನ ಮೋಹನ್ ದೇರಾಜೆ, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸುಳ್ಯ AIKMCC ಮೀಡಿಯಾ ವಿಂಗ್ ಕಾರ್ಯದರ್ಶಿ ಯಾಗಿ ಸಂಪಾಜೆಯ ತಸ್ಲೀಮ್ ಟರ್ಲಿ ಯವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ AIKMCC ಪ್ರದಾನ ಕಾರ್ಯದರ್ಶಿ ಸಯ್ಯದ್ ಅಫ್ಹಾಂ ಅಲೀ ತಂಙಳ್ ಹಾಗೂ ಸುಳ್ಯ AIKMCC ಅಧ್ಯಕ್ಷರಾದ ಖಲಂದರ್ ಎಲಿಮಲೆ ಯವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 2022 ರಲ್ಲಿ ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿ ಇಡೀ ಸರಕಾರವನ್ನು ಮತ್ತು ಕೇಂದ್ರ ನಾಯಕರನ್ನು ತಿರುಗಿ ನೋಡುವಂತೆ ಮಾಡಿದ ಅತೀ ಭೀಕರ ಕೊಲೆಯ ಬಗ್ಗೆ ಇದೀಗ ವ್ಯಕ್ತಿಯೋರ್ವರ ಪೋಸ್ಟ್ ಭಯ ಬೀಳಿಸುವಂತೆ ಮಾಡಿದೆ. ಇಬ್ರಾಹಿಂ ಕಲೀಲ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಮಸೀದಿಯ ಸಮಿತಿಯು ಬೆಳ್ಳಾರೆ ಪೋಲಿಸರಿಗೆ ದೂರು ನೀಡಿದ್ದು ಇದೀಗ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಗ್ರಾಮ ಪಂಚಾಯತ್ ಐವರ್ನಾಡು, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಮಿತ್ರವೃಂದ ಬಾಂಜಿಕೋಡಿ, ಗೆಳೆಯರ ಬಳಗ ದೇರಾಜೆ, ಮಂಜುಶ್ರೀ ಗೆಳೆಯರ ಬಳಗ ಪಾಲೆಪ್ಪಾಡಿ, ಸ್ಪೋರ್ಟ್ಸ್ ಕ್ಲಬ್ ಮಾಡತ್ತಕಾನ, ಯುವಶಕ್ತಿ ಸಂಘ ಐವರ್ನಾಡು, ಚಾಲಕ-ಮಾಲಕರ ಸಂಘ ಐವರ್ನಾಡು, ವರ್ತಕರ ಸಂಘ ಐವರ್ನಾಡು ಇವುಗಳ...
ಸುಳ್ಯ ನಗರದ ಶ್ರೀರಾಂ ಪೇಟೆಯಿಂದ ಖಾಸಗಿ ಬಸ್ ನಿಲ್ದಾಣ ತನಕ ಅಂಗಡಿಗಳಿಗೆ ತೆರಳಿ ಬಿಜೆಪಿ ಸದಸ್ಯತನ ಅಭಿಯಾನ ಸೆ.28 ರಂದು ನಡೆಯಿತು. ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ. ಎ. ಟಿ., ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ., ಮಂಡಲ ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಕಾಯರ್ತೋಡಿ ಬೂತ್ ಅಧ್ಯಕ್ಷ ಶೀನಪ್ಪ ಪಡ್ರೆ,...
ಮರ್ಕಂಜ ಗ್ರಾಮ ಮಿತ್ತಡ್ಕ ನಿವಾಸಿ ಮೋಹನರವರ ಪತ್ನಿ ಶೋಭಾಲತಾ ಎಂಬವರು ಸೆ.೨೪ರಂದು ನಾಪತ್ತೆಯಾದ ಹಿನ್ನಲೆಯಲ್ಲಿ ಬಾವಿಗೆ ಹಾರಿರಬಹುದೆಂಬ ಅನುಮಾನದಿಂದ ಬಾವಿಯನ್ನು ಅಗೆದು ನೋಡುವ ಕಾರ್ಯಾಚರಣೆ ಸೆ.೨೭ರಂದು ಆರಂಭವಾಗಿದ್ದು, ಇದೀಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಶೋಭಾಲತಾರವರು ಸೆ.೨೪ರ ಮಧ್ಯಾಹ್ನ ಮನೆಯಿಂದ ಕಾಣೆಯಾಗಿದ್ದರು. ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಹೀಗಾಗಿ ಅನುಮಾನದಿಂದ ಅವರ ಮನೆಯ ಬಳಿಯ ಬಾವಿಯಲ್ಲಿ ಹುಡುಕಲಾಗಿತ್ತು....
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕವು ದಿನಾಂಕ 28/9/2024 ರಂದು 'ವಿಶ್ವ ಹೃದಯ ದಿನಾಚರಣೆ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ್ ಪಿ ಟಿ ವಹಿಸಿದರು, ಮುಖ್ಯ ಅತಿಥಿ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯದ ವೈದ್ಯಾಧಿಕಾರಿ ಡಾ ತ್ರಿಮೂರ್ತಿ ಅವರು...
ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಬಾಯಿ, ಮುಖ ಮತ್ತು ದವಡೆಯ ಶಸ್ತç ಚಿಕಿತ್ಸಾ ವಿಭಾಗದ ವತಿಯಿಂದ ತುರ್ತು ಜೀವಾಧಾರ ತರಭೇತಿ ಕಾರ್ಯಗಾರವನ್ನು ಜೀವರಕ್ಷಾ ಟ್ರಸ್ಟ್ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಇವರುಗಳ ಸಹಯೋಗದೊಂದಿಗೆ ಸಪ್ಟೆಂಬರ್ ೨೫,೨೬,೨೭ರಂದುಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಕೆ.ವಿ.ಜಿ ದಂತ ಮಹಾವಿದ್ಯಾಲಯದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮೌರ್ಯ ಆರ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿದರು....
Loading posts...
All posts loaded
No more posts
