Ad Widget

ಆಲೆಟ್ಟಿ : ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ : ಆಲೆಟ್ಟಿ ಗ್ರಾಮದ ಶಂಕರ ಪಾಟಾಳಿ ಎಂಬುವವರು ತೋಟಕ್ಕೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು ಸದ್ಯ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ

ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ...
Ad Widget

ಹಿಂದು ಕಾರ್ಯಕರ್ತರ ಬಂಧನ ಖಂಡಿಸಿ ನಗರದಲ್ಲಿ ಪರಿವಾರ ಸಂಘಟನೆಗಳಿಂದ ಮೆರವಣಿಗೆ – ದೈವಸ್ಥಾನದಲ್ಲಿ ಪ್ರಾರ್ಥನೆ – ಠಾಣೆಯ ಗೇಟಿನ ಬಳಿ ಪ್ರತಿಭಟನೆ

ಅನ್ಯ ಕೋಮಿನ ಯುವಕ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಸೆ.23 ರಂದು ಸುಳ್ಯ ನಗರ ಭಜರಂಗದಳ ಮುಖಂಡ ವರ್ಷಿತ್ ಮತ್ತು ಮಿಥುನ್ ಎಂಬ ಇಬ್ಬರು ಕಾರ್ಯಕರ್ತರನ್ನು ಹಲ್ಲೆ ಪ್ರಕರಣದ ಸೆಕ್ಷನ್ ಅಳವಡಿಸದೆ ಕೊಲೆಯತ್ನ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದೆ ಎಂದು ಆರೋಪಿಸಿ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಂಜಾನೆ 9 ಗಂಟೆಯ ಎಬಿವಿಪಿ...

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷ ಅಚ್ಚುತ ಗುತ್ತಿಗಾರು – ಕಾರ್ಯದರ್ಶಿ ಅಜಿತ್ ಬಾಕಿಲ –  ಕೋಶಾಧಿಕಾರಿ ಕಾರ್ತಿಕ್ ಪೈಕ

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇದರ ಮಹಾಸಭೆ ಸೆ. 20 ರಂದು ನಡೆಯಿತು. ಈ ಸಭೆಯಲ್ಲಿ 2024 - 25 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಾಧವ ಎರ್ದಡ್ಕ, ನೂತನ ಅಧ್ಯಕ್ಷರಾಗಿ ಅಚ್ಚುತ ಗುತ್ತಿಗಾರು, ಪ್ರಧಾನ ಕಾರ್ಯದರ್ಶಿಯಾಗಿ ಅಜಿತ್ ಬಾಕಿಲ ಹಾಗೂ ಕೋಶಾಧಿಕಾರಿಯಾಗಿ ಕಾರ್ತಿಕ್ ಪೈಕ  ಮತ್ತು ವಿವಿಧ ಪದಾಧಿಕಾರಿಗಳನ್ನು...

ಮಂಗಳೂರಿನಲ್ಲಿ ಅಪಘಾತ – ಆಲೆಟ್ಟಿಯ ಯುವಕ ಮೃತ್ಯು

ಮಂಗಳೂರಿನ ಮಾರಿಪಳ್ಳದಲ್ಲಿ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ನಡೆದ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ದುರ್ಮರಣವನ್ನಪ್ಪಿದ ಘಟನೆ ವರದಿಯಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿರುವಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಸೇವಂತ್ ರವರು ರಸ್ತೆ ಮೇಲೆ ಬಿದ್ದು...

ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ- ಕಾನೂನು ಅರಿವು ಕಾರ್ಯಕ್ರಮ

ಕಾನೂನು ಸೇವೆಗಳ ಸಮಿತಿ ಸುಳ್ಯ , ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಆಲೆಟ್ಟಿ ಮಿತ್ತಡ್ಕ ಸುಳ್ಯಹಾಗೂ ವಕೀಲರ ಸಂಘ, ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 23 ರಂದು ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮೋಟಾರು ವಾಹನ ಕಾಯ್ದೆ ಮತ್ತು ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಹಿರಿಯ ಸಿವಿಲ್...

ಶಿಕ್ಷಕರಿಂದ ಮಾತ್ರ ಉತ್ತಮ ನಾಯಕನ ಸೃಷ್ಟಿ ಸಾಧ್ಯ : ಸವಿತಾರ ಮುಡೂರು

ಬೆಳ್ಳಾರೆ ಜ್ಞಾನದೀಪದಲ್ಲಿ ಪರಿಣಾಮಕಾರಿ ನಾಯಕತ್ವ ತರಬೇತಿ ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣವಿರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವದ ಗುಣಗಳನ್ನು ಕಲಿಸಿಕೊಟ್ಟು ಸಮಾಜದ ಉತ್ತಮ ನಾಯಕರನ್ನಾಗಿ ರೂಪಿಸುವ ಕೆಲಸ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ಜೇಸಿಐ ವಲಯ ತರಬೇತುದಾರ ಸವಿತಾರ ಮುಡೂರು ಹೇಳಿದರು. ಅವರು ಬೆಳ್ಳಾರೆ ಜೇಸಿಐ ಆಶ್ರಯದಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆದ ಪರಿಣಾಮಕಾರಿ ನಾಯಕತ್ವ...

ವಿದ್ಯಾರ್ಥಿವೇತನ,ವಿವಿಧ ಪ್ರಶಸ್ತಿ ಪುರಸ್ಕಾರ ಪ್ರದಾನದೊಂದಿಗೆ ಬೆಳ್ಳಾರೆ ಜೇಸಿ ಸಪ್ತಾಹ ಸಮಾರೋಪ

ವಿವಿಧ ಸಾರ್ವಜನಿಕ ಕಾರ್ಯಕ್ರಮ ಹಾಗೂ ತರಬೇತು ಕಾರ್ಯಕ್ರಮಗಳೊಂದಿಗೆ ನಡೆದ ಬೆಳ್ಳಾರೆ ಜೇಸಿಐನ ಜೇಸಿ ಸಪ್ತಾಹದ ಸಮಾರೋಪ ಸಮಾರಂಭ ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ನಡೆಯಿತು. ಸಮಾರಂಭದಲ್ಲಿ ದಿ. ಜೇಸಿ ಲೋಕೇಶ್ ಪೆರ್ಗಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಮಾರು 17 ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಯುವ ಪುರಸ್ಕಾರವನ್ನು ಡಾ.ಕಿಶನ್ ರಾವ್ ಬಾಳಿಲ, ಪ್ರತಿಭಾ ಪುರಸ್ಕಾರವನ್ನು...

ಪೆರುವಾಜೆಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

ಜೇಸಿಐ ಬೆಳ್ಳಾರೆಯ ಜೇಸೀ ಸಪ್ತಾಹದ ಅಂಗವಾಗಿ ಬೃಹತ್ ಸ್ವಚ್ಛತಾ ಆಂದೋಲನ ಪೆರುವಾಜೆಯಲ್ಲಿ ನಡೆಯಿತು. ಪೆರುವಾಜೆ ಶ್ರೀ ಜಾಲದುರ್ಗಾ ದೇವಿ ದೇವಸ್ಥಾನದ ಮುಂಭಾಗದಲ್ಲಿ ಸ್ವಚ್ಛತಾ ಆಂದೋಲನಕ್ಕೆ ದೇವಸ್ಥಾನದ ಆಡಳಿತಧಿಕಾರಿ ಮತ್ತು ಪೆರುವಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಚಾಲನೆ ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪೆರುವಾಜೆ ಡಾ. ಕೆ ಶಿವರಮ...

ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ.

ಸುಳ್ಯ : ಹಿಂದೂ ಕಾರ್ಯಕರ್ತರ ಬಂಧನ ಖಂಡಿಸಿ ಠಾಣೆ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ. ಹಿಂದೂ ಪರ ಕಾರ್ಯಕರ್ತರ ಬಂಧನ ಖಂಡಿಸಿ ಹಿಂದೂ ಪರ ಸಂಘಟನೆಗಳು ಕಾರ್ಯಕರ್ತರು ಠಾಣೆಯ ಗೇಟಿನ ಬಳಿಯಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು ಘೋಷಣೆ ಕೂಗಲಾಗುತ್ತಿದೆ
Loading posts...

All posts loaded

No more posts

error: Content is protected !!