Ad Widget

ರೋಟರಿಯಿಂದ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವಿಕರಿಸಲಿ : ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ

ಸುಬ್ರಹ್ಮಣ್ಯದಲ್ಲಿ ರೋಟರಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

. . . . . . . . .

ಸುಬ್ರಹ್ಮಣ್ಯ ಅ. 21: “ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯಿಂದ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ಬರುತ್ತಿವೆ. ಅದರೊಂದಿಗೆ ಜನರು ರೋಟರಿಗೆ ಹೆಚ್ಚು ಹೆಚ್ಚು ಆಕರ್ಷಣೀಯ ಆಕರ್ಷಣೆಗೊಂಡು ಸದಸ್ಯತನ ಸಂಖ್ಯೆ ಕೂಡ ವೃದ್ಧಿಯಾಗುವಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳು ಪೂರಕವಾಗಿದೆ ಹಾಗೂ ಸಹಕಾರಿಯಾಗಿದೆ. ನಮ್ಮ ದೇಶದ ನಾಲ್ಕು ವಲಯಗಳಲ್ಲಿ ಪ್ರತಿವರ್ಷ ಸದಸ್ಯದ ತನ್ನ ಸಂಖ್ಯೆ ವೃದ್ಧಿಗೊಳ್ಳುತ್ತಿದ್ದು ರೋಟರಿ ಜಿಲ್ಲೆ 31 81 ಮುಂಚೂಣಿಯಲ್ಲಿದೆ” ಎಂದು ರೋಟರಿ ಜಿಲ್ಲೆ 31 81ರ ಜಿಲ್ಲಾ ಗವರ್ನರ್ ವಿಕ್ರಮದತ್ತ ನುಡಿದರು.
ಅವರು ರವಿವಾರ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಾದ ಕುಮಾರ ಕಲಾ ವೈಭವವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ವೇದಿಕೆಯಲ್ಲಿ ಡಿಜಿಎನ್ ಸತೀಶ್ ಬೋಳಾರ್, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸೀತಾ ರಾಮ ರೈ ಸವಣೂರು, ಜಿಲ್ಲಾ ಅಡ್ಮಿನ್ ಕಾರ್ಯದರ್ಶಿ ರಿತೇಶ್ ಬಾಳಿಗ, ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ್, ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಚೇರ್ಮನ್ ಸತೀಶ್, ವೈಸ್ ಚೇರ್ಮನ್ ಗೋಪಾಲ್ ಎಣ್ಣೆಮಜಲ್, ಇವೆಂಟ್ ಚೇರ್ಮನ್ ಬಾಲಕೃಷ್ಣ ಪೈ, ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಚಿದಾನಂದ ಕುಳ ಉಪಸ್ಥಿತರಿದ್ದರು.
ರೋಟರಿ ಜಿಲ್ಲೆ 31 81 ರ 9 ವಲಯಗಳಲ್ಲಿ ವಿಜೇತರಾದ ಸ್ಪರ್ಧಿಗಳು ಭಾಗವಹಿಸಿದ್ದರು. ರೋಟರಿ ಪುರುಷ ಮಹಿಳೆಯರಿಗೆ ಮಕ್ಕಳಿಗೆ ವಿವಿಧ ಸ್ಪರ್ಧೆಗಳಾದ ಸೋಲೋ ಸಿಂಗಿಂಗ್, ಗ್ರೂಪ್ ಸಿಂಗಿಂಗ್, ಗ್ರೂಪ್ ಡ್ಯಾನ್ಸ್, ಸ್ಕಿಟ್ ಸ್ಪರ್ಧೆಗಳು ನಡೆದವು. ಸಾಂಸ್ಕೃತಿಕ ವೈಸ್ ಚೇರ್ಮನ್ ಗೋಪಾಲ್ ಎಣ್ಣೆಮಜಲ್ ಸ್ವಾಗತಿಸಿದರು. ಕಾರ್ಯದರ್ಶಿ ಚಿದಾನಂದ ಕುಳ ವಂದಿಸಿದರು. ಪೂರ್ವ ಎ.ಜಿ. ರಾಮಕೃಷ್ಣ ಮಲ್ಲಾರ ಕಾರ್ಯಕ್ರಮ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading