Ad Widget

ಸಮಾಜದಲ್ಲಿ ಮಹಿಳೆಯರು ಸ್ವಾಲಂಬಿಗಳಾಗಿ ಬದುಕನ್ನು ಕಟ್ಟಿಕೊಳ್ಳಬೇಕು ; ಸುಜಾತ ಕಲ್ಲಾಜೆ

ಸುಬ್ರಹ್ಮಣ್ಯ ನ. 8: “ಸಮಾಜದಲ್ಲಿ ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆ ಸಾಗುತ್ತಿದ್ದಾರೆ ಯಾರೊಬ್ಬರ ಆಶ್ರಯವನ್ನು ಅವಲಂಬಿಸದೆ ತಾವೇ ಸ್ವತಃ ದುಡಿದು ಸಂಪಾದಿಸಿ ಸ್ವಉದ್ಯೋಗದೊಂದಿಗೆ ಸ್ವಂತ ಬದುಕನ್ನ ಕಟ್ಟಿಕೊಳ್ಳಬೇಕು” ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪ್ರಥಮ ಪ್ರಜೆ ಸುಜಾತ ಕಲ್ಲಾಜೆ ನುಡಿದರು.ಅವರು ಶುಕ್ರವಾರ ಸುಬ್ರಹ್ಮಣ್ಯ ಸಮೀಪದ ದೇವರ ಹಳ್ಳಿಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನವರು ಬೆಂಗಳೂರು ಮಹಾಲಕ್ಷ್ಮಿ ಸೆಂಟ್ರಲ್ ರೋಟರಿ ಕ್ಲಬ್ ನ ಪ್ರಾಯೋಜಕತ್ವದಲ್ಲಿ ಕೌಶಲ್ಯ ಅಭಿವೃದ್ಧಿ ಯೋಜನೆ ಅನ್ವಯ ಒದಗಿಸಿದ 10 ಹೊಲಿಗೆ ಯಂತ್ರಗಳನ್ನ ವಿತರಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ವೇದಿಕೆಯಲ್ಲಿ ಬೆಂಗಳೂರು ಮಹಾಲಕ್ಷ್ಮಿ ಸೆಂಟ್ರಲ್ ರೋಟರಿ ಕ್ಲಬ್ಬಿನ ಅಧ್ಯಕ್ಷ ಶಿವಾನಂದ ಜಿಎಸ್ ಬೆಂಗಳೂರು ರೋಟರಿ ಜಿಲ್ಲೆ 3192ರ ಸಹಾಯಕ ಗವರ್ನರ್ ಸಂದೀಪ್ ಬಿ ಎಸ್ , ರೋಟರಿ ಜಿಲ್ಲೆ 3192ರ ಮೆಂಬರ್ಶಿಪ್ ಚೇರ್ಮನ್ ಆರ್ ಮಹೇಶ್, ರೋಟರಿ ಜಿಲ್ಲೆ 31 81ರ ಸಮುದಾಯ ವಿಭಾಗದ ಜಿಲ್ಲಾ ಕಾರ್ಯದರ್ಶಿ ಸಚ್ಚಿದಾನಂದ, ವಲಯ ಐದರ ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಪ್ರಯೋಜಕತ್ವದ ರೂವಾರಿ ಬೆಂಗಳೂರು ಐಟೆಲ್ ಕಂಪನಿ ಎಚ್.ಆರ್.ದಿನೇಶ್ ಅತ್ಯಾಡಿ, ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಕಾರ್ಯದರ್ಶಿ ಚಿದಾನಂದ ಕುಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವರಹಳ್ಳಿ ಹೋಲಿಗೆ ತರಬೇತಿ ಕೇಂದ್ರದ ತರಬೇತುದಾರರಾದ ಗಾಯತ್ರಿ, ಮಮತಾ ಹಾಗೂ ಫಲಾನುಭವಿಗಳು, ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವ ಅಧ್ಯಕ್ಷರುಗಳಾದ ಕಿಶೋರ್ ಕುಮಾರ್ ಕೂಜುಗೋಡು, ಭರತ್ ನೇಕ್ರಾಜೆ, ಮಾಯಿಲಪ್ಪ ಸಂಕೇಶ, ಉಪ ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ, ಸುಬ್ರಹ್ಮಣ್ಯ ಅತ್ಯಾಡಿ ಹಾಜರಿದ್ದರು.ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ಗೋಪಾಲ ಎಣ್ಣೆಮಜಲು ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯದರ್ಶಿ ಚಿದಾನಂದ ಕುಳ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading