- Tuesday
- March 10th, 2026
ಕೆ ಎಫ್ ಡಿ ಸಿ ರಬ್ಬರ್ ಪ್ಲಾಂಟೇಷನ್ ನಲ್ಲಿ ಟ್ಯಾಪಿಂಗ್ ಮಾಡುತ್ತಿರುವ ವೇಳೆ ಕಾಡು ಹಂದಿ ತಿವಿದು ಮಹಿಳೆ ಗಾಯಗೊಂಡ ಘಟನೆ ದುಗ್ಗಲಡ್ಕ ದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಕೂಟೇಲು ಸಿಆರ್ ಸಿ ಯ ರಾಮಚಂದ್ರನ್ ಎಂಬವರ ಪತ್ನಿ ಅಂಬಿಕಾ ಎಂಬವರು ದುಗ್ಗಲಡ್ಕ ರಬ್ಬರ್ ತೋಟದಲ್ಲಿ ಸುಮಾರು 7 ಗಂಟೆ ಹೊತ್ತಿಗೆ ಟ್ಯಾಪಿಂಗ್ ನಡೆಸುತ್ತಿದ್ದರು. ಆಗ ಪೊದೆಗಳ...
ಶತಮಾನೋತ್ಸವ ಆಚರಿಸಿಕೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂದ್ರಪ್ಪಾಡಿ ಗೆ ಎಂ.ಆರ್.ಪಿ.ಎಲ್.ನ ವತಿಯಿಂದ ನಿರ್ಮಾಣವಾಗಲಿರುವ ರೂ.15 ಲಕ್ಷದ ಕೊಠಡಿಗೆ ಗುದ್ದಲಿಪೂಜೆಯು ನ.18ರಂದು ನಡೆಯಿತು. ಸುಳ್ಯ ಶಾಸಕಿ ಕು। ಭಾಗೀರಥಿ ಮುರುಳ್ಯ ಗುದ್ದಲಿಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸದಸ್ಯರಾದ ಭವಾನಿ ಶಂಕರ...
ಅನಾರೋಗ್ಯದ ಹಿನ್ನೆಲೆಯಲ್ಲಿದ್ದ ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅರಂತೋಡು ಗ್ರಾಮದ ಉಳುವಾರಿನಲ್ಲಿ ನ.19ರಂದು ಸಂಜೆ ಸಂಭವಿಸಿದೆ.ಅರಂತೋಡು ಗ್ರಾಮದ ಉಳುವಾರಿನ ಪುಟ್ಟಣ್ಣ ಅವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಅವರಿಗೆ 63 ವರ್ಷ ವಯಸ್ಸಾಗಿತ್ತು. ಪುಟ್ಟಣ್ಣ ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆಂದು ತಿಳಿದುಬಂದಿದೆ. ಮೃತರ ಪತ್ನಿ ಈ ಹಿಂದೆ ನಿಧನರಾಗಿದ್ದು, ಪುತ್ರ ಶರತ್, ಪುತ್ರಿ ರಮ್ಯ...
ಪೈಚಾರು ಅಲ್ ಅಮೀನ್ ಯೂತ್ ಸೆಂಟರ್ ವತಿಯಿಂದ 18 ನೇ ವಾರ್ಷಿಕ ಸ್ವಲಾತ್ ವಾರ್ಷಿಕ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಹಾಗೂ ಯೂತ್ ಸೆಂಟರ್ನ ನೂತನ ಕಛೇರಿ ಉದ್ಘಾಟನೆ ನ.24 ಮತ್ತು 25 ರಂದು ಪೈಚಾರ್ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಅಲ್ ಅಮೀನ್ ಯೂತ್ ಸೆಂಟರ್ನ ಪದಾಧಿಕಾರಿಗಳು ತಿಳಿಸಿದ್ದಾರೆ. ಸುಳ್ಯದಲ್ಲಿ...
ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಾಸ್ ಲಿಮಿಟೆಡ್ ವತಿಯಿಂದ ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ನಿಂತಿಕಲ್ಲು ಸಹಯೋಗದಲ್ಲಿ ಸಹಕಾರರತ್ನ ಎಂ.ಎನ್. ರಾಜೇಂದ್ರಕುಮಾರ್ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭವು ನ.25ರಂದು ನಿಂತಿಕಲ್ಲಿನ ಸಾಧನಾ ಸಹಕಾರಿ ಸೌಧದಲ್ಲಿ ನಡೆಯಲಿದೆ ಎಂದು ಮಂಗಳೂರು ಮಾಸ್ ಲಿಮಿಟೆಡ್ ಅಧ್ಯಕ್ಷ ಸಹಕಾರಿ ರತ್ನ...
ಕೃಷಿ ವಿಚಾರಗೋಷ್ಠಿ, ಅರವಿಂದ್ ಬೋಳಾರ್ ಅಭಿನಯದ ಒರಿಯಾಂಡಲಾ ಸರಿಬೋಡು ಹಾಸ್ಯಮಯ ನಾಟಕ ಶತಮಾನ ಪೂರೈಸಿರುವ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮ ನ.23ರಂದು ನಡೆಯಲಿದೆ. ಶತಮಾನೋತ್ಸವ ಸಂಭ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದಾರೆ. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ,...
ಬಾ ಮಗು ಒಮ್ಮೆ ಬರೆದು ನೋಡು ಮಕ್ಕಳ ಹಸ್ತ ಪ್ರತಿ ತಯಾರಿ ಕಾರ್ಯಗಾರ ಬರವಣಿಗೆಯಲ್ಲಿ ತಲ್ಲೀನರಾದ ವಿದ್ಯಾರ್ಥಿಗಳು..ಕೇವಲ ಹತ್ತೇ ನಿಮಿಷದಲ್ಲಿ ಹಸ್ತ ಪ್ರತಿ ತಯಾರಿ ವಿದ್ಯಾರ್ಥಿ ಜೀವನದ ಹಸ್ತಪ್ರತಿಗಳು ಭವಿಷ್ಯದ ಸಾಹಿತ್ಯಗಳಾಗಿ ಸಮಾಜಕ್ಕೆ ಕೊಡುಗೆಯಾಗಬಹುದು : ಲೇಖಕಿ ಅಶ್ವಿನಿ ಕೋಡಿಬೈಲು ಕರ್ನಾಟಕ ಸರ್ಕಾರ,ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್...
ಗ್ರಾಮಜನ್ಯ ರೈತ ಉತ್ಪಾದಕ ಕಂಪನಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜೇನು ಕೃಷಿಕರ ಸಮ್ಮಿಲನ ಕಾರ್ಯಕ್ರಮವು ನ.18ರಂದು ಪುತ್ತೂರು ಬೀರಮಲೆ ಬೆಟ್ಟದ ಗಾಂಧೀ ಮಂಟಪದಲ್ಲಿ ಸಂಜೆ ಗಂಟೆ 6ಕ್ಕೆ ನಡೆಯಿತು. ಕಾರ್ಯಕ್ರಮವನ್ನು ಬೀರಮಲೆ ಬೆಟ್ಟ ಅಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ರೊ. ಜಗಜೀವನ್ ದಾಸ್ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ದಕ್ಷಿಣ ಕನ್ನಡ...
ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಮೃತರು ತಾಯಿ ಓರ್ವ ಸಹೋದರ ನಂದನ್ ರವರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬರಬೇಕಿದೆ.
ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಹಾಗೂ ಅವರ ಪತ್ನಿ ದಿವೀಶಾ ಶೆಟ್ಟಿ ಅವರು ನ.19ರಂದು ಭೇಟಿ ನೀಡಿದರು. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ ಶ್ರೀ ದೇವರ ದರ್ಶನ ಪಡೆದು ಮಹಾಭಿಷೇಕ ಸೇವೆ ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಸೂರ್ಯಕುಮಾರ್ ಯಾದವ್ ದಂಪತಿಯನ್ನು ಗೌರವಿಸಲಾಯಿತು. ದೇವಸ್ಥಾನದ...
Loading posts...
All posts loaded
No more posts
