- Sunday
- April 20th, 2025

ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳಿಗೆ ಗಡಿ ಗುರುತು ಮಾಡಿ ಜಂಟಿ ಸರ್ವೇ ಮಾಡಬೇಕು : ಕಿಶೋರ್ ಶಿರಾಡಿ ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ಡಿ.15 ರಂದು ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ಹರಿಹರ, ಕಲ್ಮಕಾರು, ಕೊಲ್ಲಮೊಗ್ರು ಹಾಗೂ ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳ ಗ್ರಾಮಸ್ಥರ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಗಂಗಾಧರ ಬೆಳ್ಚಪ್ಪಾಡ (63) ಅಲ್ಪಕಾಲದ ಅಸೌಖ್ಯದಿಂದ ಡಿ.15 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ನಾಟಿವೈಧ್ಯೆ ಶ್ರೀಮತಿ ಸೀತಾರತ್ನ, ಪುತ್ರ ರಕ್ಷಿತ್, ಪುತ್ರಿ ಶ್ರೀಮತಿ ವಿದ್ಯಾ ರನ್ನು ಅಗಲಿದ್ದಾರೆ.

ವೃತ್ತಿಯಲ್ಲಿ ಉಪನ್ಯಾಸಕಿಯಾಗಿದ್ದು ಪ್ರವೃತ್ತಿಯಲ್ಲಿತರಬೇತುದಾರಳು, ಸಂಘಟಕಿ ಹಾಗೂಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ.ಅನುರಾಧಾ ಕುರುಂಜಿಯವರುಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರುಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು ಇದರ ವತಿಯಿಂದ ಬಲ್ಕಜೆ ಮತ್ತು ಮಡಪ್ಪಾಡಿ ಒಕ್ಕೂಟಗಳ ಸಂಘಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಗೋಪಾಲಕೃಷ್ಣ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ರವರು ದೀಪ ಪ್ರಜಲ್ವಿಸುವ ಮುಖೇನಾ ಚಾಲನೆಯನ್ನು...

ಸೌದೆಗಾಗಿ ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಮಾವ ಹಾಗೂ ಸೊಸೆಯ ಮೇಲೆ ಕಾಡು ಹಂದಿ ದಾಳಿ ನಡೆಸಿದ ಘಟನೆ ಬಾಳುಗೋಡು ಗ್ರಾಮದ ಕೊತ್ನಡ್ಕ ಎಂಬಲ್ಲಿ ವರದಿಯಾಗಿದ್ದು, ಕೊತ್ನಡ್ಕದ ಬಾಬು(ಮಾವ) ಹಾಗೂ ಹರಿಣಾಕ್ಷಿ(ಸೊಸೆ) ಎಂಬುವವರು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಸೌದೆ ತರಲು ಕಾಡಿಗೆ ಹೋಗಿದ್ದ ಸಂದರ್ಭದಲ್ಲಿ ಕಾಡು ಹಂದಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಮಹಿಳೆಯ ತೊಡೆ...

https://youtu.be/Glt6qIcvuAM?si=PC9WP7Egr8tMj9AW ಭಾಗಮಂಡಲ ನಾಡು ಗೌಡ ಯುವ ಒಕ್ಕೂಟದ ವತಿಯಿಂದ ಆಯೋಜಿಸಿದ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಕುಟುಂಬವಾರು ಹಗ್ಗ ಜಗ್ಗಾಟ ಪಂದ್ಯಾವಳಿಯ ಪ್ರಥಮ ವರ್ಷದ ಕೊಡಗು ಗೌಡ ಹುತ್ತರಿ ಕಪ್ - 2024 ಅನ್ನು ಪೆರಾಜೆಯ ಕುಂಬಳಚೇರಿ ಮನೆತನ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.ಭಾಗಮಂಡಲದ ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಪುರುಷರ...

ಭಾಷೆ ಬೆಳವಣಿಗೆ ಮತ್ತು ವಿಸ್ತರಣೆಗೆ ಸಹಕರಿಸಿದ ವಿವಿಧ ಕ್ಷೇತ್ರದ 6 ಮಂದಿ ಸಾಧಕರಿಗೆ ಸನ್ಮಾನ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸ್ಥಾಪನಾ ದಿನದ ಅಂಗವಾಗಿ ಕರ್ನಾಟಕ ಅರೆಭಾಷೆ ಅಕಾಡೆಮಿಯ ಆಶ್ರಯದಲ್ಲಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ನಗರ ಘಟಕ ಮತ್ತು ಮಹಿಳಾ ಸಮಿತಿಯ ಸಹಕಾರದಲ್ಲಿ ಸುಳ್ಯದ...

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಅಕಾಡೆಮಿ ಸುಳ್ಯದ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ 'ಬಿ' ಅಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಆಯ್ಕೆಯಾಗಿದ್ದಾರೆ.ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಡಾ.ರೇಣುಕಾ ಪ್ರಸಾದ್ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಮೂರು ಬಾರಿ ಆಯ್ಕೆಯಾಗಿದ್ದರು. ಎರಡು ಅವಧಿಗೆ ಅವಿರೋಧವಾಗಿ ಮತ್ತು ಮೂರನೇ ಅವಧಿಗೆ ಬಹುಮತದಿಂದ ಚುನಾಯಿತರಾಗಿದ್ದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು...

ದ. 16ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಬೆಳ್ಳಾರೆ ಜೇಸಿಐನ 2025ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ರೈ ಬೀಡು ಮತ್ತು ಕಾರ್ಯದರ್ಶಿಯಾಗಿ ಉಮೇಶ್ ಮಣಿಕ್ಕಾರ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದ. 16ರಂದು ಸಂಜೆ 6.30ಕ್ಕೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ.ಎ, ಅಜಪಿಲ...

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಆಶ್ರಯದಲ್ಲಿ ಬೆಳ್ಳಾರೆ ಸ್ನೇಹಾoಜಲಿ ಕುಣಿತ ಭಜನಾ ತಂಡದ 2 ನೇ ತಂಡದ ತರಬೇತಿ ಯು ದಿನಾಂಕ 15 ದಶoಬರ 2024 ಆದಿತ್ಯವಾರ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಂಗಣದಲ್ಲಿ ಪ್ರಾರಂಭಗೊಂಡಿತು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ದೀಪ ಪ್ರಜ್ವಲಿಸಿ ಶುಭಹಾರೈಸಿದರು, ಸ್ನೇಹಿತರ...

All posts loaded
No more posts