Ad Widget

ಸುಳ್ಯ : ತಾಲೂಕು ಮಟ್ಟದ ಪ.ಜಾತಿ/ಪಂಗಡದ ಮಾಸಿಕ ಕುಂದು ಕೊರತೆ ಸಭೆ

ಸುಳ್ಯ ತಾಲೂಕು ಮಟ್ಟದ ಪ.ಜಾತಿ ಮತ್ತು ಪ.ಪಂಗಡದವರ ಕುಂದುಕೊರತೆಗಳ ಸಭೆಯು ಸುಳ್ಯ ಠಾಣಾಧಿಕಾರಿ ಸಂತೋಷ್ ರವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು ಪ್ರಮುಖ ಕಾನೂನು ಸಲಹೆಗಳು ಮತ್ತು ಎಸ್ಸಿ ಎಸ್ಟಿ ಸಮುದಾಯದ ಪ್ರಮುಖರಿಗೆ ಕಾನೂನಿನ ಅರಿವು ಮೂಡಿಸುವ ಸಲುವಾಗಿ ನಾಯಕರು ಶ್ರಮ ವಹಿಸಬೇಕು ಎಂದು ತಿಳಿಸಿದರು. ಮುಂದೆ ಪ್ರತಿ ಗ್ರಾಮವಾರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ...

ಮರ್ಕಂಜ : ಮಿನುಂಗೂರು ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದ ಕಳ್ಳರು

ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳವು ಮಾಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮರ್ಕಂಜ ಗ್ರಾಮದ ಮಿನುಂಗೂರು ದೇವಸ್ಥಾನ ಜೀರ್ಣೋದ್ದಾರ ಗೊಳ್ಳುತ್ತಿದ್ದು, ದೇವರನ್ನು ಬಾಲಾಲಯದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಹೊರಗಿನ ಆವರಣದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗಿತ್ತು. ಕಳೆದ ರಾತ್ರಿ ಕಳ್ಳರು ದೇವಸ್ಥಾನಕ್ಕೆ ಬಂದು ಕಾಣಿಕೆ ಡಬ್ಬಿಯನ್ನು ಒಡೆದು ಹಣ ದೋಚಿದ್ದಾರೆನ್ನಲಾಗಿದೆ. ಇಂದು ಬೆಳಿಗ್ಗೆ...
Ad Widget

ಶೇಣಿ ಗರಡಿ : ನೂತನ ಚಪ್ಪರ ಕೊಂಬು ನಿರ್ಮಾಣದ ಮನವಿ ಪತ್ರ ಬಿಡುಗಡೆ

ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ ಇದರ ನೂತನ ಚಪ್ಪರ ಕೊಂಬು ಬೆಳ್ಳಿಯ ಆಭರಣ ನಿರ್ಮಾಣದ ಮನವಿ ಪತ್ರ ಬಿಡುಗಡೆ ಕಾರ್ಯಕ್ರಮ ಗರಡಿಯಲ್ಲಿ ನಡೆಯಿತು. ಪ್ರಗತಿಪರ ಕೃಷಿಕ ವೆಂಕಟೇಶ್ ಹೆಬ್ಬಾರ್ ಶೇಣಿ ಮನವಿ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ಚಪ್ಪರ ಕೊಂಬು ಸಮಿತಿ ಗೌರವಧ್ಯಕ್ಷ ಕರಿಯಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಾಮಾಜಿಕ ಮುಖಂಡ ರಾಧಾಕೃಷ್ಣ...

ಎಣ್ಮೂರು ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಎಣ್ಮೂರು ಇಲ್ಲಿನ ಹತ್ತನೇ ತರಗತಿ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅದೇ ರೀತಿ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆಯ ಪ್ರಬಂಧ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಸಾಕ್ಷಿ ಕೆ ಪ್ರಥಮ ಸ್ಥಾನ ಪಡೆದು ರಾಜ್ಯ...

ಪೇರಾಲು : ಡಿ.21-22; ಬಜಪ್ಪಿಲ ಇರುವೆರ್ ಉಳ್ಳಾಕುಲು, ಧೂಮಾವತಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

https://youtu.be/zgSiUd63naM?si=ySc2yrkGN77qljxL ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು,ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಡಿ. 21 ಮತ್ತು 22 ರಂದು ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳರವರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕ್ಷೇತ್ರದ ಅನುವಂಶಿಕ...

ಡಿ.21 : ಪ.ಜಾತಿ/ ಪಂಗಡದವರ ಕುಂದುಕೊರತೆಗಳ ನಿವಾರಣಾ ಸಭೆ

ಸುಳ್ಯ ತಾಲೂಕು ಮಟ್ಟದ ಪ.ಜಾತಿ ಹಾಗೂ ಪಂಗಡದವರ ಕುಂದುಕೊರತೆಗಳ ನಿವಾರಣಾ ಸಭೆಯು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಡಿ.21 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಕುಲ್‌ದಾಸ್ ರಿಗೆ ಸಾರ್ವಜನಿಕ ಸನ್ಮಾನಕ್ಕೆ ಸಿದ್ಧತೆ – ಪ್ರೆಸ್ ಕ್ಲಬ್ ನಲ್ಲಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

https://youtu.be/6JnKAW8XMtA?si=yYXChxHwM0OhGACr ಸುಳ್ಯದಲ್ಲಿ ಕಳೆದ 40 ವರ್ಷಗಳಿಂದ ಸಾರ್ವಜನಿಕ ಸೇವೆ ಸಲ್ಲಿಸುತ್ತಿರುವ ಪ್ರಸ್ತುತ ಈ ಸಾಲಿನ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಗೋಕುಲ್‌ದಾಸ್ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಡಿ.28 ರಂದು ನಡೆಯಲಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಹೇಳಿದ್ದಾರೆ. ಅವರು ಪ್ರೆಸ್ ಕ್ಲಬ್ ನಲ್ಲಿ...

ಬೆಳ್ಳಾರೆ : ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಳ್ಳಾರೆ ಪ್ರಾ.ಕೃ.ಪ.ಸಹಕಾರಿ ಸಂಘದ ಆಡಳಿತ ಮಂಡಳಿಗೆ ಡಿ. 25ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ ಸಾಲಗಾರರ ಕ್ಷೇತ್ರದಿಂದ ಸಾಮಾನ್ಯ ಸ್ಥಾನಕ್ಕೆ ಪದ್ಮನಾಭ ಶೆಟ್ಟಿ, ನಾರಾಯಣ ಕೊಂಡೆಪ್ಪಾಡಿ, ದಯಾಕರ ಆಳ್ವ, ಆರ್.ಕೆ. ಭಟ್ ಕುರುಂಬುಡೇಲು, ಸಾಯಿಪ್ರಸಾದ್ ರೈ, ಜನಾರ್ಧನ ಗೌಡ, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಭಾಸ್ಕರ ನೆಟ್ಟಾರು, ಹಿಂದುಳಿದ ವರ್ಗ ಎ...

ಕವನ : ನನ್ನೊಳಗಿನ ನನಗೆ ಬೆಂಕಿಯಿಕ್ಕುತಾ…

ಭಯದಿಂದಲೇ ಬದುಕುತ್ತಿರುವ ಈ ಬದುಕಿನಲ್ಲಿ ನಾ ಭರವಸೆಯ ಹುಡುಕಿ ಹೊರಟಿರುವೆ, ಭಯವ ಬಿಟ್ಟರೆ ಮಾತ್ರ ಬದುಕಿನಲ್ಲಿ ಭರವಸೆಯು ಬರುವುದು ಎಂಬುವುದನ್ನು ನಾ ಅರಿತಿರುವೆ, ಆದರೂ ನಾ ಭರವಸೆಯ ಹುಡುಕಿ ಸಾಗುತ್ತಲೇ ಇರುವೆ, “ನನ್ನೊಳಗಿನ ಭಯಕ್ಕೆ ಬೆಂಕಿಯಿಕ್ಕುತಾ…”ಪ್ರತಿಕ್ಷಣವೂ ಬದಲಾಗುತ್ತಿರುವ ಈ ಸ್ವಾರ್ಥ ತುಂಬಿದ ಮನುಷ್ಯರ ನಡುವೆ ನಾ ಮನುಷ್ಯತ್ವವ ಹುಡುಕಿ ಹೊರಟಿರುವೆ, ಮನುಷ್ಯರು ಬದಲಾದಂತೆ ಮನುಷ್ಯತ್ವವೂ ಬದಲಾಗುತ್ತದೆಯೇ?...

ಸುಳ್ಯ ಸೈಂಟ್ ಜೋಸೆಫ್ ಶಾಲೆಯ ಅಶ್ವಿಜ್ ಆತ್ರೇಯ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಪ್ರತಿಭಾ ಕಾರಂಜಿ ಸ್ಪರ್ಧೆಯು ಬೆಳ್ತಂಗಡಿ ಹೋಲಿ ರೆಡಿವೇರ್‌ ವಿದ್ಯಾಸಂಸ್ಥೆಯಲ್ಲಿ ನಡೆದಿದ್ದು ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಹಿರಿಯರ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಸಂತ ಜೋಸೆಪ್ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಅಶ್ವಿಜ್ ಆತ್ರೇಯ ಸುಳ್ಯ ಇವರು ಪ್ರಥಮ ಸ್ಥಾನ ಪಡೆಯುವ ಮೂಲಕ ಸುಳ್ಯವನ್ನು ಜಿಲ್ಲಾ ಮಟ್ಟದಲ್ಲಿ ಗುರುತಿಸಿ ರಾಜ್ಯಮಟ್ಟಕ್ಕೆ...
Loading posts...

All posts loaded

No more posts

error: Content is protected !!