Ad Widget

ಜಾಲ್ಸೂರು : ಅರಣ್ಯ ಇಲಾಖೆಯ ಸಿಬ್ಬಂದಿ ಕುಸಿದ್ದು ಬಿದ್ದು ಮೃತ್ಯು

ಸುಳ್ಯದ ಜಾಲ್ಸೂರಿನಲ್ಲಿ ಕರ್ತವ್ಯ ನಿರತ ಫಾರೆಸ್ಟ್ ವಾಚರ್ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಡಿ.7ರಂದು ವರದಿಯಾಗಿದೆ. ಜಾಲ್ಸೂರಿನ ಗೇಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಸದಾಶಿವ (50) ಎಂಬವರೇ ಮೃತಪಟ್ಟ ದುರ್ದೈವಿ. ಅಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರೂ ಫಲಕಾರಿಯಾಗಲಿಲ್ಲವೆನ್ನಲಾಗಿದೆ..

ಕನಕಮಜಲು : ಚಿತ್ರಕಲಾ ಶಿಬಿರ ಸಮಾರೋಪ

ಯುವಕ ಮಂಡಲ (ರಿ) ಕನಕಮಜಲು, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ (ಕಾವಾ) ಮೈಸೂರು ಆಶ್ರಯದಲ್ಲಿ ನಡೆದ ಸು-ಯೋಗ 2024 ನಿಸರ್ಗ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭವು ಡಿ. 08 ರಂದು ಶ್ರೀ ಬಾಲ ನಿಲಯ ಮೂರ್ಜೆ ಕನಕಮಜಲು ನಡೆಯಿತು.ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ಕು| ಭಾಗೀರಥಿ ಮುರುಳ್ಯ ಮಾನ್ಯ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ ವಹಿಸಿದರು. ಮುಖ್ಯ ಅಥಿತಿಗಳಾಗಿ...
Ad Widget

ರಾಜ್ಯ ಮಟ್ಟದ ಖೋಖೋ ಪಂದ್ಯಾಟಕ್ಕೆ ಆರ್ಹತೆ ಪಡೆದ ಅನ್ವಿತಾ ಬೊಮ್ಮೆಟ್ಟಿ

ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪದವಿ ವಿಭಾಗದ ಖೋಖೋ ಪಂದ್ಯಾಟದಲ್ಲಿ ಕು. ಅನ್ವಿತಾ ಬೊಮ್ಮೆಟ್ಟಿ ಆಯ್ಕೆಯಾಗಿ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ. ಮಂಗಳೂರಿನ ಹಂಪನಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಈಕೆ ಕಲ್ಮಡ್ಕ ಗ್ರಾಮದ ಬಾಲಕೃಷ್ಣ ನಾಯ್ಕ ಬೊಮ್ಮೆಟ್ಟಿ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರಿ.

“ನಿನಾದ” ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ವತಿಯಿಂದ ಡಾl ಪುರುಷೋತ್ತಮ ಬಿಳಿಮಲೆಯವರ ಕೃತಿ ” ಹುಡುಕಾಟ ” ಅನಾವರಣ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇದರ ಆಶ್ರಯದಲ್ಲಿ ಕ. ಸಾ. ಪ ಸುಳ್ಯ ತಾಲೂಕು ಘಟಕ, ಪ್ರೆಸ್ ಕ್ಲಬ್ ಸುಳ್ಯ,ಮತ್ತು ಕಳಂಜ ಯುವಕ ಮಂಡಲ ಸಹಯೋಗದಲ್ಲಿ ನಡೆದ ಡಾl ಪುರುಷೋತ್ತಮ ಬಿಳಿಮಲೆಯವರ ಕೃತಿ "ಹುಡುಕಾಟ " ಅನಾವರಣ ಹಾಗೂ ಸಂವಾದ ಕಾರ್ಯಕ್ರಮವು ತಂಟೆಪ್ಪಾಡಿಯ ಪ್ರಶಾಂತ ಪರಿಸರದ ಸುಂದರ "ನಿನಾದ" ಕೇಂದ್ರದ ವೇದಿಕೆಯಲ್ಲಿ ಡಿ 7 ರಂದು...

ಕುಕ್ಕೆ ಸುಬ್ರಹ್ಮಣ್ಯ : ಜುಬಿನ್ ಮೊಹಾಪಾತ್ರ ಅವರಿಂದ ಮಾದ್ಯಮ ಕೇಂದ್ರ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಅವರು ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದರು.ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾದ ವಿಶ್ವನಾಥ ನಡುತೋಟ, ಉಪಾಧ್ಯಕ್ಷರಾದ ಲೊಕೇಶ್.ಬಿ.ಎನ್, ಕಾರ್ಯದರ್ಶಿ ರತ್ನಾಕರ ಸುಬ್ರಹ್ಮಣ್ಯ, ಕೋಶಾಧಿಕಾರಿಗಳಾದ ದಯಾನಂದ ಕಲ್ನಾರ್, ಜತೆ ಕಾರ್ಯದರ್ಶಿ ಪ್ರಕಾಶ್...

ಕುಕ್ಕೆ ಸುಬ್ರಹ್ಮಣ್ಯ : ಜಾತ್ರೋತ್ಸವದ ಅಂಗವಾಗಿ ತಾತ್ಕಾಲಿಕ ವೈದ್ಯಕೀಯ ಚಿಕಿತ್ಸಾ ಕೇಂದ್ರ ಉದ್ಘಾಟಿಸಿದ ಎ.ಸಿ ಜುಬಿನ್ ಮೊಹಪಾತ್ರ

ಸುಬ್ರಹ್ಮಣ್ಯ ಡಿ.6: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ರಥಬೀದಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸುಳ್ಯ ಇವುಗಳ ಆಶ್ರಯದಲ್ಲಿ ತಾತ್ಕಾಲಿಕ ವೈದ್ಯಕೀಯ ಚಿಕಿತ್ಸಾ ಕೇಂದ್ರದ ಉದ್ಘಾಟನೆ ನಡೆಯಿತು.ದೇವಳದ ಆಡಳಿತಾಧಿಕಾರಿಗಳಾದ ಎ.ಸಿ ಜುಬಿನ್ ಮೊಹಪಾತ್ರ ಅವರು ಚಿಕಿತ್ಸಾ ಹಾಗೂ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ...

ಐವರ್ನಾಡಿನ ಮಿಥುನ ಅಶ್ವಥ್ ಜಬಳೆಯವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ಬೆಂಗಳೂರಿನ ಕಲಾಗ್ರಾಮದಲ್ಲಿ ಆಚರಿಸಲಾಯಿತು. ಕನ್ನಡಪರ ಹೋರಾಟಗಾರರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾ.ರಾ ಗೋವಿಂದರವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಸುಂದರ್ ರಾಜ್, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷರಾದ ಬಿ.ಎನ್ ಜಗದೀಶ್, ಅಂಬೇಡ್ಕ‌ರ್...

ಅರಂತೋಡು : ಸಂಹಿತ ಆಯುರ್ವೇದ ಕ್ಲಿನಿಕ್ ಶುಭಾರಂಭ

ಅರಂತೋಡಿನಲ್ಲಿ ನಿವೃತ್ತ ಶಿಕ್ಷಕರಾದ ಚಿದಾನಂದ ಅಡ್ತಲೆ ಹಾಗೂ ಸರಸ್ವತಿ ಅಡ್ತಲೆಯವರ ಸುಪುತ್ರ ಡಾ। ನಿತಿನ್ ಅಡ್ತಲೆಯವರ ಸಂಹಿತ ಆಯುರ್ವೇದ ಕ್ಲಿನಿಕ್ ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ನಿವೃತ್ತ ಶಿಕ್ಷಕಿ ಗಿರಿಜಾ ಜತ್ತಪ್ಪ ಗೌಡ ಅಳಿಕೆ ದೀಪ ಬೆಳಗಿಸಿ ಉದ್ಘಾಟಿಸಿದರು.‌ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧ‌ರ್ ಕುರುಂಜಿ ಶುಭ ಹಾರೈಸಿದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ...

ನವೀನ್ ಚಾತುಬಾಯಿಯವರಿಗೆ ನಿಟ್ಟೆ ವಿಶ್ವವಿದ್ಯಾಲಯದಿಂದ ಸಾಧಕ ಕೃಷಿಕ ಪುರಸ್ಕಾರ

ಸುಳ್ಯದ ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ನವೀನ್ ಚಾತುಬಾಯಿಯವರಿಗೆ ನಿಟ್ಟೆ ವಿಶ್ವವಿದ್ಯಾಲಯದ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದಿಂದ 2024ನೇ ವರ್ಷದ "ಗುಡ್ ಅಕ್ವಾಟಿಕ್ ಸ್ಟೀವರ್ಡ್ ಶಿಪ್ ಪ್ರಾಕ್ಟೀಸ್" ಪುರಸ್ಕಾರ ನೀಡಿ ಗೌರವಿಸಲಾಗಿದೆ.ನ. 25ರಂದು ಮಂಗಳೂರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ಅನಿರ್ವನ್ ಚಕ್ರವರ್ತಿ ಮತ್ತು ಪ್ರೊ.ಡಾ. ಅಖಿಲಾರವರು ಕಾಲೇಜಿನ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹಾರಥೋತ್ಸವ ಸಂಪನ್ನ – ಸಹಸ್ರಾರು ಮಂದಿ ರಥೋತ್ಸವದಲ್ಲಿ ಭಾಗಿ

ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಚಂಪಾಷಷ್ಠಿಯ ಮಹಾರಥೋತ್ಸವ ಇಂದು(ಡಿ.07) ನೆರವೇರಿತು. ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆಸೀನರಾಗಿ ರಥೋತ್ಸವವು ನಡೆಯಿತು.ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಭಕ್ತರು ದೇವರ ಮಹಾರಥವನ್ನು ಎಳೆದರು. ಬ್ರಹ್ಮರಥವು ರಾಜಗಾಂಭೀರ್ಯದಿಂದ ಅತ್ಯಂತ ಸಲೀಸಾಗಿ, ಆಕರ್ಷಕವಾಗಿ ರಥಬೀದಿಯಲ್ಲಿ ಮುನ್ನಡೆಯಿತು. ವರ್ಷದಲ್ಲಿ ಒಂದು ಬಾರಿ...
Loading posts...

All posts loaded

No more posts

error: Content is protected !!