Ad Widget

ಸುಳ್ಯ: ಶಿವಕುಮಾರ್ ಹೊಸಗದ್ದೆ ನಿಧನ

ಸುಳ್ಯ ದ ಬೀರಮಂಗಲ ದಲ್ಲಿ ವಾಸವಾಗಿದ್ದ ಶಿವಕುಮಾರ್ ಹೊಸಗದ್ದೆ ಯವರನ್ನು ಅನಾರೋಗ್ಯದಿಂದ ಡಿ.06 ರಂದು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆ ಗೆ ದಾಖಲಿಸಿದರೂ ರಾತ್ರಿ ವೇಳೆಗೆ ತೀವ್ರ ಅಸ್ವಸ್ಥ ಗೊಂಡು ಕೊನೆ ಉಸಿರೆಳೆದಿರುತ್ತಾರೆ. 37 ವರ್ಷ ವಯಸಾಗಿದ್ದು ಮೃತರು ತಾಯಿ, ಪತ್ನಿ, ಸಹೋದರಿ ಮತ್ತು ಬಂದು ಮಿತ್ರರನ್ನು...

ಕ್ಯಾಂಪ್ಕೊ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಶಸ್ತ್ರಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಕ್ಯಾಂಪ್ಕೊ ಸಂಸ್ಥೆಯ "ಸಾಂತ್ವನ" ಯೋಜನೆಯಡಿಯಲ್ಲಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರೀಯ ಸದಸ್ಯ ರಝಾಕ್ ಯಂ ಎ ಅವರಿಗೆ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ರೂಪಾಯಿ 3 ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲರವರು ಡಿ. 07 ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕ್ಯಾಂಪ್ಕೋ ಸಂಸ್ಥೆ ಪುತ್ತೂರು ಇದರ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ್...
Ad Widget

ಡಾ. ಕೆ.ವಿ.ಚಿದಾನಂದರಿಂದ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣೆ – ಡಿ.25 ರಂದು ಸುಳ್ಯಕ್ಕೆ ಬ್ರಹ್ಮರಥ ಆಗಮನ

ಸುಳ್ಯ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾಗಿರುವ ಡಾ. ಕೆ.ವಿ. ಚಿದಾನಂದ ಹಾಗೂ ಮನೆಯವರು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನಕ್ಕೆ ನೂತನ ಬ್ರಹ್ಮರಥವನ್ನು ಕೊಡುಗೆಯಾಗಿ ನೀಡಲಿದ್ದು, ಬ್ರಹ್ಮರಥ ಸುಳ್ಯಕ್ಕೆ ಆಗಮಿಸುವ ಹಾಗೂ ಸಮರ್ಪಣೆ ಸಿದ್ಧತೆಯ ಕುರಿತು ಭಕ್ತಾಧಿಗಳ ಸಭೆಯು ಸುಳ್ಯದ ಚೆನ್ನಕೇಶವ ದೇವಸ್ಥಾನ ಸಭಾಂಗಣದಲ್ಲಿ ಡಿ.6ರಂದು ನಡೆಯಿತು. ಕೋಟೇಶ್ವರದ ಕುಂಭಾಶಿಯಲ್ಲಿ ರಥಶಿಲ್ಪಿ ರಾಜಗೋಪಾಲಾಚಾರ್ಯರ ಉಸ್ತುವಾರಿಯಲ್ಲಿ ಬ್ರಹ್ಮರಥ...

ದೊಡ್ಡೇರಿ ಶಾಲಾ ವಿದ್ಯಾರ್ಥಿಗಳಿಂದ ವಂದೇ ಭಾರತ್ ನಲ್ಲಿ ಶೈಕ್ಷಣಿಕ ಪ್ರವಾಸ

ದೊಡ್ಡೇರಿ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಂದ ವಂದೇ ಭಾರತ್ ನಲ್ಲಿ ಡಿ.06 ರಂದು ಶಾಲಾ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಲಾಯಿತು. ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಶಾಲೆಯ ಪೋಷಕರು ಮತ್ತು ಮಕ್ಕಳೊಡನೆ ಒಂದು ದಿನದ ಪ್ರವಾಸ ಹಮ್ಮಿಕೊಳ್ಳಲಾಯಿತು. ಕಣ್ಣೂರು ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ, ಸಾಯಂಕಾಲ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ...

ದೀನದಯಾಳ್ ಸಹಕಾರ ಸಂಘ ಹಾಗೂ ನೂತನ ಕಛೇರಿ ಉದ್ಘಾಟನೆ.

ಸಹಕಾರ ಸಂಸ್ಕೃತಿಯಿಂದಾಗಿ ಬ್ಯಾಂಕಿಂಗ್‌ ಕ್ಷೇತ್ರ ಅಭಿವೃದ್ಧಿ ಗೊಂಡಿದೆ - ಕ್ಯಾಪ್ಟನ್ ಬೃಜೇಶ್. ದೀನದಯಾಳು ಸಹಕಾರ ಸಂಘದ ಮೂಲಕ ಬಡವರ ದೀನದಲಿತರ ಅಭಿವೃದ್ಧಿಯಾಗಲಿ - ಮುರುಳ್ಯ. ಸುಳ್ಯದ ರಥಬೀದಿಯಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್‌. ಕಟ್ಟಡದಲ್ಲಿ ಮಾಜಿ ಸಚಿವ ಎಸ್.ಅಂಗಾರ ನೇತೃತ್ವದ ಪಂಡಿತ್ ದೀನದಯಾಳ್ ಸಹಕಾರ ಸಂಘ ಶುಭಾರಂಭಗೊಂಡಿತು. ಬೆಳಿಗ್ಗೆ 11.22 ರ ಕುಂಭಲಗ್ನದಲ್ಲಿ ಸಹಕಾರ ಸಂಘವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ...

ಕಲ್ಚೆರ್ಪೆ ರಸ್ತೆ ಬದಿ ನಿಲ್ಲಿಸಿದ ಲಾರಿಯ ಚಕ್ರ ಕದ್ದೊಯ್ದ ಕಳ್ಳರು- ಪೋಲಿಸ್ ದೂರು

ಪೆರಾಜೆ ಕಲ್ಚೆರ್ಪೆ ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಯ ಚಕ್ರವನ್ನು ಬಿಚ್ಚಿ ಕಳ್ಳತನ ಮಾಡಿರುವ ಘಟನೆ ಡಿ.3 ರಂದು ವರದಿಯಾಗಿದೆ. ಕೇರಳದ ನೋಂದಣಿ ಸಂಖ್ಯೆ ಹೊಂದಿರುವ ಲಾರಿಯಾಗಿದ್ದು ಕುಂಬಳಚೇರಿಯಲ್ಲಿ ಮರದ ವ್ಯಾಪಾರಕ್ಕೆಂದು ಬಂದವರ ಲಾರಿ ಇದಾಗಿದ್ದು ಕಲ್ಚೆರ್ಪೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು ರಾತ್ರಿ ಸಮಯದಲ್ಲಿ ಯಾರೋ ಕಿಡಿಗೇಡಿ ಕಳ್ಳರು ಹೊಂಚು ಹಾಕಿ ಲಾರಿಯ ಹಿಂಬದಿಯ 2 ಚಕ್ರವನ್ನು...

ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ – ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ದಿನಾಂಕ 05.12.2024 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ...

ಕುಕ್ಕೆ ಸುಬ್ರಹ್ಮಣ್ಯ : ಭಕ್ತಿ ಸಂಭ್ರಮದಿಂದ ನೆರವೇರಿದ “ಚಂಪಾಷಷ್ಠಿ ಮಹಾರಥೋತ್ಸವ – ಬ್ರಹ್ಮರಥದಲ್ಲಿ ವಿರಾಜಿಸಿದ ಸುಬ್ರಹ್ಮಣ್ಯ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.07ರ ಶನಿವಾರ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ...

ಗುತ್ತಿಗಾರು : ಗ್ಯಾರೇಜ್ ಮಾಲಕ ಕಾಂತಪ್ಪ ಪೂಜಾರಿ ನಿಧನ

ಗುತ್ತಿಗಾರಿನಲ್ಲಿ ಹಲವು ವರ್ಷಗಳಿಂದ ಕಾವೇರಿ ಮೋಟಾರ್ ವರ್ಕ್ಸ್ ನಡೆಸುತ್ತಿದ್ದ ಕಾಂತಪ್ಪ ಪೂಜಾರಿ ಇಂದು ಹೃದಯಾಘಾತದಿಂದ ನಿಧನರಾದರು.

ಸುಳ್ಯ ಎನ್ನೆoಪಿಯುಸಿಯಲ್ಲಿ ವಾರ್ಷಿಕ ಕ್ರೀಡಾಕೂಟ

ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟ ಡಿ 6ರಂದು ನಡೆಯಿತು. ಧ್ವಜಾರೋಹಣವನ್ನು ಪ್ರಾoಶುಪಾಲರಾದ ಮಿಥಾಲಿ ಪಿ ರೈ ಅವರು ನೆರವೇರಿಸಿದರು.,ಪದವಿ ವಿಭಾಗದ ದೈ. ಶಿ ನಿರ್ದೇಶಕರಾದ ಲೆ ಸೀತಾರಾಮ ಎಂ ಡಿ, ಕ್ರೀಡಾ ಜ್ಯೋತಿ ಸ್ವೀಕರಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಉಪಸ್ಥಿತರಿದ್ದರು.ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಯ ದೈ ಶಿ...
Loading posts...

All posts loaded

No more posts

error: Content is protected !!