Ad Widget

ಕುಕ್ಕೆ ಸುಬ್ರಹ್ಮಣ್ಯ : ಇಂದು(ಡಿ.06) ರಾತ್ರಿ ಪಂಚಮಿ ರಥೋತ್ಸವ – ನಾಳೆ(ಡಿ.07) ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ “ಚಂಪಾಷಷ್ಠಿ ಮಹಾರಥೋತ್ಸವ”

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.27 ರಿಂದ ಡಿ.12 ರವರೆಗೆ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ನ.27 ರಂದು ಕೊಪ್ಪರಿಗೆ ಏರುವುದರೊಂದಿಗೆ ಜಾತ್ರಾ ಮಹೋತ್ಸವವು ಪ್ರಾರಂಭಗೊಂಡಿದ್ದು, ಇಂದು(ಡಿ.06) ರಾತ್ರಿ ಪಂಚಮಿ ರಥೋತ್ಸವ, ತೈಲಾಭ್ಯಂಜನ ನಡೆಯಲಿದ್ದು, ನಾಳೆ(ಡಿ.07) ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ “ಚಂಪಾಷಷ್ಠಿ ಮಹಾರಥೋತ್ಸವ”...

ಹರೀಶ ಪಟ್ಟೆ ನಿಧನ

ಮರ್ಕಂಜ ಗ್ರಾಮದ ಪಟ್ಟೆ ಚಂದ್ರ ಪಾಟಾಳಿ ಎಂಬವರ ಪುತ್ರ ಹರೀಶ ಎಂಬವರು ನಿನ್ನೆ (ಡಿ.5) ನಿಧನರಾದರು. ಅವರಿಗೆ 37 ವರ್ಷ ವಯಸ್ಸಾಗಿತ್ತು. ಹರೀಶರವರು ಮುಂಡೋಡಿ ಶ್ರೀ ಶಿರಾಡಿ ಯಾನೆ ರಾಜನ್ ದೈವದ ಎಣ್ಣೆ ಹಿಡಿಯುವ ಸೇವೆ ಮಾಡುತ್ತಿದ್ದರು. ಹಾಗೂ ಸುಳ್ಯದಲ್ಲಿ ಹೂವಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ ಮತ್ತು ತಾಯಿ ದೇವಕಿಯವರನ್ನು ಅಗಲಿದ್ದಾರೆ.
Ad Widget

ಭಾರತ ಸರ್ಕಾರದ ಗೃಹ ಸಚಿವಾಲಯದಿಂದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಡಿಜಿ ಡಿಸ್ಕ್ ಪುರಸ್ಕಾರ

ಕಳೆದ ಹತ್ತು ವರ್ಷಗಳಿಂದ ದ ಕ ಜಿಲ್ಲಾ ಗ್ರಹ ರಕ್ಷಕ ದಳದಲ್ಲಿ ನೀಡಿದ ನ್ಯಾಯಸಮ್ಮತ, ನಿಷ್ಕಾಮ,ನಿಷ್ಕಳಂಕ ಮತ್ತು ಪ್ರಾಮಾಣಿಕ ಸೇವೆಯನ್ನು ಗುರುತಿಸಿ,ದಿನಾಂಕ 06/12/2024 ನೆ ಶುಕ್ರವಾರದಂದು ಭಾರತ ಸರ್ಕಾರದ ಗೃಹ ಸಚಿವಾಲಯ, ನವದೆಹಲಿ ಇವರಿಂದ ನೀಡಲ್ಪಟ್ಟ ಡಿಜಿ ಡಿಸ್ಕ್ ಪುರಸ್ಕಾರವನ್ನು ಪೋಲಿಸ್ ಮಹಾನಿರ್ದೇಶಕರ ಕಚೇರಿ ಬೆಂಗಳೂರು ಇಲ್ಲಿ ನಡೆದ ಗೃಹರಕ್ಷಕ ದಳದ 62ನೆಯ ಉತ್ತಾನ ದಿನಾಚರಣೆಯಂದು...

ಡಿ.16 ರಿಂದ ಜ.14 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆ

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧನುಪೂಜೆಯು ಡಿ.16 ರಿಂದ ಜ.14 ರವರೆಗೆ ನಡೆಯಲಿದೆ. ಧನುಪೂಜೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಚೇರಿಯಿಂದ ರೂ.200 ರಶೀದಿ ಪಡೆದು ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿ ಶ್ಯಾಂ ಪ್ರಸಾದ್ ರವರು ತಿಳಿಸಿದ್ದಾರೆ.

ಸೇವಾಜೆ : ನಾಪತ್ತೆಯಾಗಿದ್ದ ವೃದ್ಧನ ಅಸ್ಥಿಪಂಜರ ಪತ್ತೆ

ನಿಗೂಢವಾಗಿ ಕಣ್ಮರೆಯಾಗಿದ್ದ ಸೇವಾಜೆ ನಿವಾಸಿ ವೃದ್ಧ ಬೆಳ್ಯಪ್ಪ ಗೌಡ (85)ಅವರದೆನ್ನಲಾದ ಅಸ್ಥಿಪಂಜರ ಮನೆಯ ಸಮೀಪದ ರಬ್ಬರ್ ತೋಟದ ಬಳಿ ಪತ್ತೆಯಾಗಿದೆ. ಸೆ.9ರಂದು ಸೇವಾಜೆಯ ಬೆಳ್ಯಪ್ಪ ಗೌಡ ಎಂಬುವವರು ಮನೆಯಿಂದ ಹಠಾತ್ ನಾಪತ್ತೆಯಾಗಿದ್ದರು. ಮನೆಯವರು ಹಾಗೂ ಊರವರು ಹುಡುಕಾಟ ನಡೆಸಿದ್ದರೂ ಅವರ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿರಲಿಲ್ಲ. ಜ್ಯೋತಿಷ್ಯ ಮೊರೆ ಹೋಗಿದ್ದರೂ ಫಲಿತಾಂಶ ಶೂನ್ಯವಾಗಿತ್ತು. ಇದೀಗ ಎಲ್ಲರೂ...

ಧೈರ್ಯವಾಗಿ ಮುನ್ನುಗ್ಗಲು ಡಿಜಿಟಲ್ ಕ್ರಾಂತಿ ಮಾಧ್ಯಮ ಕ್ಷೇತ್ರಕ್ಕೆ ಶಕ್ತಿ ತುಂಬಿದೆ : ಜಿಲ್ಲಾ ಪತ್ರಕರ್ತರ ಸಮ್ಮೇಳನದ ಅಧ್ಯಕ್ಷ ಶಿವಸುಬ್ರಹ್ಮಣ್ಯ ಕೆ. ಅಭಿಮತ

ಆಧುನಿಕ ಯುಗದಲ್ಲಿ ನಡೆದಿರುವ ಡಿಜಿಟಲ್ ಕ್ರಾಂತಿಯ ಮಾಧ್ಯಮ ಯುಗದಲ್ಲಿ ಪತ್ರಿಕೋದ್ಯಮದ ಉಳಿವಿನ ಬಗ್ಗೆ ಹಲವು ಸಂಪಾದಕರಿಗೆ ಭಯ ಶುರು ಆಗಿದೆ. ಆದರೆ ಡಿಜಿಟಲ್ ಆಗಿ ಧೈರ್ಯದಿಂದ ಮುನ್ನುಗ್ಗುವ ಅವಕಾಶವನ್ನು ಡಿಜಿಟಲ್ ಕ್ರಾಂತಿ ಮಾಧ್ಯಮಗಳಿಗೆ ನೀಡಿದೆ ಎಂದು ಹಿರಿಯ ಪತ್ರಕರ್ತರಾದ ಶಿವಸುಬ್ರಹ್ಮಣ್ಯ ಕೆ. ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ...

ಪೇಯ್ಡ್ ನ್ಯೂಸ್‌ನಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ- ಡಾ.ಮೋಹನ್‌ ಆಳ್ವ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ ಪೇಯ್ಡ್ ನ್ಯೂಸ್ ಸಂಸ್ಕೃತಿ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ ವಾಹನಗಳ ಪಾರ್ಕಿಂಗ್‌ಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವದ ಪ್ರಧಾನ ದಿನಗಳಾದ ಪಂಚಮಿ ಮತ್ತು ಷಷ್ಠಿಯಂದು ವಾಹನ ನಿಲ್ದಾಣ ವ್ಯವಸ್ಥೆಯನ್ನು ಪ್ರತ್ಯೇಕವಾಗಿ ನಿಗದಿಪಡಿಸಲಾಗಿದೆ. ಉತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ವಾಹನಗಳಿಗೆ ಡಿ.6 ಮತ್ತು 7 ರಂದು ವಿಶೇಷ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. . ಆದುದರಿಂದ...

ಡಿ.7- ನಿನಾದ ತಂಟೆಪ್ಪಾಡಿಯಲ್ಲಿ ಪ್ರೊ. ಬಿಳಿಮಲೆ ಹಾಗೂ ಸುಬ್ರಾಯ ಚೊಕ್ಕಾಡಿಯವರೊಂದಿಗೆ ಸಂವಾದ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇದರ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ, ಪ್ರೆಸ್ ಕ್ಲಬ್ ಸುಳ್ಯ ಮತ್ತು ಯುವಕ ಮಂಡಲ ಕಳಂಜ ಇದರ ಸಹಯೋಗದೊಂದಿಗೆ ಡಾ.ಪುರುಷೋತ್ತಮ ಬಿಳಿಮಲೆಯವರ ಕೃತಿ 'ಹುಡುಕಾಟ'ದ ಅನಾವರಣ ಮತ್ತು ಸುಳ್ಯ ತಾಲೂಕಿನ ಸಾಂಸ್ಕೃತಿಕ ಮತ್ತು ಸಾಹಿತ್ಯಕ ನೆಲೆಗಟ್ಟಿನ ಕುರಿತು ಹಿರಿಯರಾದ ಕವಿ ಸುಬ್ರಾಯ ಚೊಕ್ಕಾಡಿ ಹಾಗೂ ಕನ್ನಡ...

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ- ಬೆಟ್ಟಂಪಾಡಿ ಗ್ರಾಮದ ಕಕ್ಕೂರುನಲ್ಲಿ ಸುಸಜ್ಜಿತ ಬಸ್‌ಸ್ಟ್ಯಾಂಡ್ ಉದ್ಘಾಟನೆ

ಪುತ್ತೂರು ತಾಲೂಕು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ತಂಗುದಾಣವನ್ನು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ನಿರ್ಮಿಸಿ ಡಿ.5 ರಂದು ಉದ್ಘಾಟಿಸಲಾಯಿತು. ಉದ್ಘಾಟನಾ ಕಾರ್ಯಕ್ರಮವನ್ನು ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಬಲರಾಮ ಆಚಾರ್ಯ ನೇರವೇರಿಸಿದರು....
Loading posts...

All posts loaded

No more posts

error: Content is protected !!