- Sunday
- May 10th, 2026
ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ದಾನಿಗಳ ಸಹಕಾರದೊಂದಿಗೆ ಜನರಿಗೆ ತುರ್ತು ಸಂದರ್ಭಗಳಲ್ಲಿ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಖರೀದಿಸಿದ ನೂತನ ಆಂಬ್ಯುಲೆನ್ಸ್ ವಾಹನದ ಲೋಕಾರ್ಪಣಾ ಕಾರ್ಯಕ್ರಮವು ಜ.02 ರಂದು ನಡೆಯಲಿದ್ದು, ಸ್ಥಳೀಯ ವೈದ್ಯರುಗಳು ದೀಪ ಬೆಳಗಿಸುವುದರೊಂದಿಗೆ ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದವರು, ಊರಿನ...
ಗುತ್ತಿಗಾರು ಮುಖ್ಯಪೇಟೆಯಲ್ಲಿರುವ ಬಸ್ ನಿಲ್ದಾಣದ ಬಳಿಯ ಚರಂಡಿಯ ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಸಂಗ್ರಹವಾಗಿದೆ. ಚರಂಡಿ ತೆರೆದ ಸ್ಥಿತಿಯಲ್ಲಿರುವುದರಿಂದ ಪ್ರಾಣಿ,ಪಕ್ಷಿಗಳು ಕೊಳಚೆ ನೀರನ್ನು ಬಳಸುವಂತಾಗಿದೆ. ಇದು ಹೀಗೆ ಮುಂದುವರೆದರೇ ಸಾಂಕ್ರಾಮಿಕ ರೋಗ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಥಳಿಯಾಡಳಿತ ಹಾಗೂ ಆರೋಗ್ಯ ಇಲಾಖೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇದರ ಅಡಿಯಲ್ಲಿ ಕರ್ನಾಟಕ ಸಂಭ್ರಮ -50 2024-25 ನೇ ಸಾಲಿನ ಸ್ಮಾರ್ಟ್ ಟಿ.ವಿ.ಯನ್ನು ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯ, ಹಿರಿಯ ರಾಜಕಾರಣಿ, ಊರಿನ ಹಿರಿಯರಾದ ಪ್ರೊ.ರಾಧಾಕೃಷ್ಣ ಕೆ.ಇ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಂಬಳಚೇರಿ ಹಿ.ಪ್ರಾ ಶಾಲೆಗೆ ನೀಡಲಾಯಿತು.ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಇದ್ದರು.
(ರತ್ನಾಕರ ಸುಬ್ರಹ್ಮಣ್ಯ) ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಹೊಸ ವರ್ಷದ ಅಂಗವಾಗಿ ಭಕ್ತರು ಪುಷ್ಪಾಲಂಕಾರ ಸೇವೆ ನೆರವೇರಿಸಿದ್ದಾರೆ.ಬೆಂಗಳೂರಿನ ಭಕ್ತರು ನಿರಂತರವಾದ 7ನೇ ವರ್ಷದ ತಮ್ಮ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದ್ದಾರೆ. ಸುಮಾರು ರೂ 9 ಲಕ್ಷ ವೆಚ್ಚದ ಹೂವುಗಳನ್ನು ಉಪಯೋಗಿಸಿಕೊಂಡು ಶೃಂಗಾರ ಮಾಡಿದ್ದಾರೆ. ತೆಂಗಿನ ಸಿರಿ, ತರಕಾರಿ, ಹಣ್ಣುಗಳು ಮತ್ತು 6 ಬಗೆಯ ಹೂವನ್ನು ಉಪಯೋಗಿಸಿಕೊಂಡು...
ರೇಶನ್ ಕಾರ್ಡ್ ತಿದ್ದುಪಡಿಗೆ ಸರಕಾರ ಅವಕಾಶ ಕಲ್ಪಿಸಿದೆ. ಜನವರಿ 31 ಕೊನೆಯ ದಿನವಾಗಿದ್ದು , ಬೆಳಿಗ್ಗೆ 10.00 ರಿಂದ ಸಂಜೆ 05.00 ಗಂಟೆಯ ತನಕ ಅವಕಾಶ ಕಲ್ಪಿಸಿದೆ. ಸದಸ್ಯರ ಹೆಸರು ತಿದ್ದುಪಡಿ, ಸೇರ್ಪಡೆ, ಫೊಟೋ ಬದಲಾವಣೆ, ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆಗೆ ತಾಲೂಕಿನ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಸೇವೆ ಲಭ್ಯವಿದೆ....
ಅಂತೂ 2024ನೇ ವರ್ಷ ಮುಗಿದು 2025ನೇ ನೂತನ ವರ್ಷದ ಹೊಸ್ತಿಲಿನಲ್ಲಿ ನಾವಿಂದು ನಿಂತಿದ್ದೇವೆ. ನಾವೆಲ್ಲರೂ 2024ನೇ ವರ್ಷಕ್ಕೆ ವಿದಾಯ ತಿಳಿಸಿ 2025ನೇ ವರ್ಷದತ್ತ ಹೋಗುತ್ತಿರುವ ಈ ಸಂದರ್ಭದಲ್ಲಿ 2024ನೇ ವರ್ಷವು ನಮ್ಮ ಬದುಕಿನಲ್ಲಿ ಏನೇನು ಬದಲಾವಣೆಗಳನ್ನು ತಂದಿದೆ, 2024ನೇ ವರ್ಷದಲ್ಲಿ ನಮ್ಮ ಜೀವನದಲ್ಲಿ ಏನೇನು ಘಟನಾವಳಿಗಳು ನಡೆದಿವೆ ಎಂದು ನಾವು ಒಂದು ಕ್ಷಣ ಯೋಚಿಸಿ ಮೆಲುಕು...
ಸಮಯ : ಬೆಳಿಗ್ಗೆ 10.00 ರಿಂದ ಸಂಜೆ 05.00 ಗಂಟೆ.(ಕೊನೆಯ ದಿನಾಂಕ 31 ಜನವರಿ 2025) ▶️ಸದಸ್ಯರ ಹೆಸರು ತಿದ್ದುಪಡಿ/ಸೇರ್ಪಡೆ/▶️ಸದಸ್ಯರ ಫೊಟೋ ಬದಲಾವಣೆ▶️ಕುಟುಂಬದ ಮುಖ್ಯಸ್ಥರ ಬದಲಾವಣೆ ಸ್ಥಳ : ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಸದ್ಯ ಅವಕಾಶ ಇಲ್ಲ ಬಂದಾಗ ತಿಳಿಸಲಾಗುವುದು
ತೊಡಿಕಾನ ಸಮೀಪದ ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದಲ್ಲಿ ನ್ಯೂ ಇಯರ್ ಪಾರ್ಟಿ ಮಾಡುತ್ತಿದ್ದ 40 ಜನರನ್ನು ಅರಣ್ಯ ಇಲಾಖೆ ಬಂಧಿಸಿದೆ. ಮೀಸಲು ಅರಣ್ಯದೊಳಗೆ ಅಕ್ರಮ ಪ್ರವೇಶದ ಬಗ್ಗೆ ಬಂಧಿಸಿ ಕೇಸು ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಇದರಲ್ಲಿ ಕಡಬ, ಸುಳ್ಯ ಹಾಗೂ ಪೆರಾಜೆ ಭಾಗದವರು ಇದ್ದರೆಂದು ಹೇಳಲಾಗಿದೆ.
