Ad Widget

ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳ ಅಸೌಖ್ಯದಿಂದ ನಿಧನ

ಎಡಮಂಗಲ ಗ್ರಾಮದ ಹೇಮಳ ದಿ. ಈಶ್ವರ ಗೌಡರ ಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳರವರು ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು.

. . . . . . . . .

ಅವರಿಗೆ 41 ವರ್ಷ ವಯಸ್ಸಾಗಿತ್ತು. ಸುಳ್ಯ ಸರಕಾರಿ ಜೂನಿಯ‌ರ್ ಕಾಲೇಜಿನಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಉದ್ಯೋಗಿಯಾಗಿದ್ದ ಇವರು ಆ ಬಳಿಕ ಬಂಟ್ವಾಳ ಬಿಇಒ ಕಚೇರಿ ಗೆ ಅಧೀಕ್ಷಕರಾಗಿ ಭಡ್ತಿಗೊಂಡು ವರ್ಗಾವಣೆಗೊಂಡಿದ್ದರು. ಹೇಮಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

. . . . . . .

ಮೃತರು ಪತ್ನಿ ಸ್ವಾತಿ, ಪುತ್ರಿ ಗಹನ, ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading