- Friday
- April 25th, 2025

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಳಿತ ಮಂಡಳಿಯ ಅದ್ಯಕ್ಷರಾಗಿ ಸತತ ಮೂರನೇ ಬಾರಿಗೆ . ಅನಂತ್ ಊರುಬೈಲು ರವರು ಮತ್ತು ಉಪಾಧ್ಯಕ್ಷರಾಗಿ ಯಶವಂತ ದೇವರಗುಂಡ ರವರು ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ತೀರ್ಥಪ್ರಸಾದ್ ಕೋಲ್ಚಾರು, ದಯಾನಂದ ಪನೇಡ್ಕ, ರಾಮಮೂರ್ತಿ ಉಂಬಳೆ, ಹೊನ್ನಪ್ಪ ಕಾಸ್ಪಾಡಿ, ದಿನೇಶ್ ಸಣ್ಣಮನೆ, ಕಿಶನ್ ಪೊನ್ನಾಟಿಯಂಡ, ಪುಂಡರೀಕ...

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ 2025ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.2025ನೇ ಸಾಲಿನ ಅಧ್ಯಕ್ಷರಾಗಿ ಜೇಸಿ. ಸುರೇಶ್ ಕಾಮತ್ ಜಯನಗರ, ನಿಕಟಪೂರ್ವ ಅಧ್ಯಕ್ಷರಾಗಿ ಜೇಸಿ. ಗುರುಪ್ರಸಾದ್ ನಾಯಕ್, ಕಾರ್ಯದರ್ಶಿಯಾಗಿ ಜೇಸಿ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಜೊತೆ ಕಾರ್ಯದರ್ಶಿಯಾಗಿ ಜೇಸಿ. ತಾರ ಗೌಡ ಚೂಂತಾರು, ಕೋಶಾಧಿಕಾರಿಯಾಗಿ ಜೇಸಿ. ಶಶ್ಮಿ ಭಟ್ ಅಜ್ಜಾವರ, ಉಪಾಧ್ಯಕ್ಷರಾಗಿ...

ದೇವಚಳ್ಳ ಗ್ರಾಮದ ದೊಡ್ಡಕಜೆ ಪರಮೇಶ್ವರಿ ಎಂಬುವವರು ಇಂದು ಮದ್ಯಾಹ್ನ ಸ್ವಗೃಹದಲ್ಲಿ ನಿಧನರಾದರು.ಮೃತರಿಗೆ 88 ವರ್ಷ ವಯಸ್ಸಾಗಿತ್ತು.ಮೃತರು ಮಕ್ಕಳಾದ ಗಂಗಾಧರ, ಜತ್ತಪ್ಪ, ಮೋಹನ್, ಮೋಹನಾಂಗಿ, ಶುಭಲತಾ, ಭವಾನಿ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

ಸುಳ್ಯದ ಗಾಂಧಿನಗರದ ಜನತಾ ಸ್ಟೋರ್ ಮುಂಬಾಗದಲ್ಲಿ ಇನ್ಸ್ ಪೈರ್ ಮೆನ್ಸ್ ವೇರ್ ಡಿ.05 ರಂದು ಶುಭಾರಂಭಗೊಂಡಿತು. ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಎ. ನೀರಬೀದಿರೆ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ವರ್ತಕರ ಸಂಘ ಸುಳ್ಯದ ಅಧ್ಯಕ್ಷರಾದ ಸುಧಾಕರ ರೈ ಪಿ. ಬಿ, ಗೌಡರ ಯುವ ಸೇವಾ ಸಂಘ ಸುಳ್ಯ ಇದರ ಅಧ್ಯಕ್ಷರಾದ...

https://youtu.be/0EX79AFINyI?si=Mx-GriWayOxgh7hS ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಕ್ಕೂ, ಜನವಸತಿ ಪ್ರದೇಶಕ್ಕೂ, ಕೃಷಿ ಭೂಮಿಗೂ ಗಡಿ ಗುರುತು ಮತ್ತು ಅರಣ್ಯ ಇಲಾಖೆ, ಕಂದಾಯ ಇಲಾಖೆ ಜಂಟಿ ಸರ್ವೆ ಮಾಡುವ ಕುರಿತಾಗಿ ಆಗ್ರಹಿಸಿ ಸುಳ್ಯ ತಾಲೂಕಿನ ಸುಳ್ಯ ಮತ್ತು ಪಂಜ ಹೋಬಳಿಯ ಅರಣ್ಯ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಲೆನಾಡು ಜನ ಹಿತ ರಕ್ಷಣಾ ವೇದಿಕೆ...

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶ್ರೀ ಹರಿಹರೇಶ್ವರ ದೇವಸ್ಥಾನ, ಹರಿಹರ ಪಳ್ಳತ್ತಡ್ಕ ಇವರ ಸಹಯೋಗದಲ್ಲಿ ಜ.11 ರಿಂದ 20 ರವರೆಗೆ ಪ್ರತೀ ದಿನ ಬೆಳಿಗ್ಗೆ 6:00 ರಿಂದ 7:00 ಗಂಟೆಯ ತನಕ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ “ಉಚಿತ ಯೋಗ ತರಬೇತಿ ಶಿಬಿರ” ನಡೆಯಲಿದ್ದು, ಜ.11 ರಂದು ಉಚಿತ ಯೋಗ ತರಬೇತಿ ಶಿಬಿರದ...

ರೋಟರಿ ಅಂತರಾಷ್ಟ್ರೀಯ ಜಿಲ್ಲೆ 31 81 ವಲಯ 5ರ ಸುಬ್ರಹ್ಮಣ್ಯ ರೋಟರಿ ಕ್ಲಬ್ ನಲ್ಲಿ ಕಳೆದ ಜುಲೈಯಿಂದ ಅಧ್ಯಕ್ಷ ಚಂದ್ರಶೇಖರ್ ನಾಯರ್ ಅವರ ಸಾರಥ್ಯದಲ್ಲಿ ನಿರಂತರವಾಗಿ ಸಮಾಜ ಸೇವಾ ಕಾರ್ಯಗಳು ನಡೆಯುತ್ತಿದ್ದು, ಅಶಕ್ತ ಜನರಿಗೆ ಸ್ವಾಭಿಮಾನದ ಬದುಕು ನೀಡುವಲ್ಲಿ ಸಹಾಯ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿ ಕಾರ್ಯಕ್ರಮಗಳು ,ಶಾಲೆ ಹಾಗೂ ಅಂಗನವಾಡಿಗಳಿಗೆ ಅಗತ್ಯತೆಯ ಕೊಡುಗೆಗಳು...

ಕಡಬ ತಾಲೂಕು ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ಸಿರಿಬಾಗಿಲು ಇಲ್ಲಿಯ ಶಾಲಾ ಎಸ್.ಡಿ.ಎಂ.ಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮ ರವಿವಾರ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕೊಂಬಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮಧುಸೂಧನ ವಹಿಸಿದ್ದರು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಪ್ರಸನ್ನ ಕುಮಾರ್ ಕೆ.ಎನ್. ನಿರ್ವಹಿಸಿದರು.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೊಂಬಾರು ಗ್ರಾಮ...