- Sunday
- April 20th, 2025

ಕಳಂಜ ವಿಷ್ಣುನಗರದ ಬಳಿ ಚಂದ್ರ ಗೌಡ ಕಜೆಮೂಲೆಯವರು ಚಲಾಯಿಸಿಕೊಂಡು ಹೋಗುತ್ತಿದ್ದ ಜೀಪಿಗೆ ಅಯ್ಯನಕಟ್ಟೆಯಿಂದ ಚೊಕ್ಕಾಡಿ ಕಡೆಗೆ ವೇಗದಲ್ಲಿ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ಜ.13ರಂದು ವರದಿಯಾಗಿದೆ. ಬೈಕ್ ಸವಾರ ಪೆರಾಜೆಯವರಾಗಿದ್ದು ಅಪಘಾತದ ಪರಿಣಾಮ ಬೈಕ್ ಸಂಪೂರ್ಣ ನಜ್ಜು-ಗುಜ್ಜಾಗಿದ್ದು ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಹೆಚ್ಚಿನ...

ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮಹೇಶ್ ಕುಮಾರ್ ಕರಿಕ್ಕಳ ನೇತೃತ್ವದಲ್ಲಿ ನಾಗರಿಕ ಸಮಿತಿ 12 ರಲ್ಲಿ 8 ಸ್ಥಾನ ಪಡೆದು ಅಧಿಕಾರಕ್ಕೇರಿದೆ. ಬಿಜೆಪಿ, ಜೆಡಿಎಸ್ ನೇತೃತ್ವದ ತಂಡ 4 ಸ್ಥಾನ ಪಡೆದಿದ್ದಾರೆ.ನಾಗರಿಕ ಸಮಿತಿಯಿಂದ ಸಾಮಾನ್ಯ ಕ್ಷೇತ್ರದಿಂದ ಮಹೇಶ್ ಕುಮಾರ್ ಕರಿಕ್ಕಳ, ಗಣೇಶ್ ಪ್ರಸಾದ್ ಭೀಮಗುಳಿ, ಹಿಂದುಳಿದ ವರ್ಗ...
https://youtu.be/zIL-JVq6PZU?si=Ll8F6c0lBuwrKXMu ಗುತ್ತಿಗಾರು ಬಸ್ ನಿಲ್ದಾಣದ ಮುಂಭಾಗದ ತರಕಾರಿ ಅಂಗಡಿ, ಪಕ್ಕದ ಕಟ್ಲೇರಿ ಅಂಗಡಿ, ಮೇಲಿನ ಪೇಟೆಯ ಮುತ್ತಪ್ಪ ನಗರದ ಗುಡಿಯ ಕಾಣಿಕೆ ಹುಂಡಿಗೆ ಕನ್ನ ಹಾಕಿರುವುದಾಗಿ ತಿಳಿದುಬಂದಿದೆ. ಅಂಗಡಿಗಳಿಂದ ನಗ-ನಗದು ಕಳವುಗೈದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಕಳ್ಳನ ಚಲನವನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಯುವವಾಹಿನಿ(ರಿ) ಸುಳ್ಯ ಘಟಕದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಐವರ್ನಾಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ. 12 ರಂದು ಯುವವಾಹಿನಿ (ರಿ) ಸುಳ್ಯ ಘಟಕದ ಅಧ್ಯಕ್ಷ ರಾದ ಸುನೀಲ್ ಪಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು,2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಯು. ಕೆ ಬೆಳ್ಳಾರೆ ಕಾರ್ಯದರ್ಶಿ ಯಾಗಿ ನವೀನ್ ರಾಮ...

ಶ್ರೀ ಭಾರತೀ ಸೇವಾ ಸಮಿತಿ ಕಳಂಜ (ರಿ.) ವತಿಯಿಂದ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಚಿಣ್ಣರ ಹಬ್ಬ ಜ.13ರಂದು ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸಂಜೆ ಮಾತೆಯರಿಂದ ದೀಪ ಬೆಳಗುವಿಕೆ ನಡೆಯಿತು. ನಂತರ ಶಿಶುಮಂದಿರದ ಪುಟಾಣಿಗಳಿಂದ ಚಿಣ್ಣರ ಪ್ರತಿಭಾ ದರ್ಶನ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಸೇವಾ ಸಮಿತಿ ಕಳಂಜ...

ಸಾರ್ವಜನಿಕ ದೇವತಾರಾಧನಾ ಸಮಿತಿ (ಕೊರತ್ತಿಕಲ್ಲು) ರಾಮನಗರ, ಕಲ್ಮಡ್ಕ ಇಲ್ಲಿ 6 ನೇ ವರ್ಷದ ಶ್ರೀ ಕೊರತ್ತಿ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಜ.16 ರಂದು ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ರವೀಂದ್ರ ಗೌಡ ಮಾಳಿಗೆ ತಿಳಿಸಿದ್ದಾರೆ.ಜ.16 ರಂದು ಬೆಳಿಗ್ಗೆ ಬ್ರಹ್ಮಶ್ರೀ ವೇದಮೂರ್ತಿ ಕರುವಜೆ ಕೇಶವ ಜೋಯಿಸರ ನೇತೃತ್ವದಲ್ಲಿ ಸ್ಥಳ ಶುದ್ಧಿ, ಗಣಪತಿ ಹವನ, ಶುದ್ಧಿಕಲಶ,...

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ಸರಕಾರ ನೇಮಕ ಮಾಡಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.13 ರಂದು ನಡೆಯಿತು. ಅಧ್ಯಕ್ಷತೆಗೆ ರಾಜೇಶ್ ಭಟ್ ಬಾಂಜಿಕೋಡಿ ಮತ್ತು ಶಿವರಾಮ ನೆಕ್ರಪ್ಪಾಡಿ ಅಕಾಂಕ್ಷಿಗಳಿದ್ದರಿಂದ ಮತದಾನದ ಮೂಲಕ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ರಾಜೇಶ್ ಭಟ್ ಬಾಂಜಿಕೋಡಿ ಆಯ್ಕೆಯಾದರು. ಸದಸ್ಯರಾಗಿ ದೇವಸ್ಥಾನದ ಪ್ರದಾನ ಅರ್ಚಕ ರಾಮಚಂದ್ರ...

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇವುಗಳ ಸಹಭಾಗಿತ್ವದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ...

ಮಡಪ್ಪಾಡಿ ಕೃಷಿ ಪತ್ತಿನ ಸಹಕಾರಿ ಸಂಘ ಇದರ 7 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 5 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಸಾಧಿಸಿದ್ದರು. ಇಂದು ಅಧ್ಯಕ್ಷ ಉಪಾಧ್ಯಕ್ಷತೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿನಯಕುಮಾರ್ ಮುಳುಗಾಡು ಹಾಗೂ ಉಪಾಧ್ಯಕ್ಷರಾಗಿ ಸಚಿನ್ ಬಳ್ಳಡ್ಕ ಆಯ್ಕೆಯಾದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪಿ.ಸಿ.ಜಯರಾಮ್, ಮಿತ್ರದೇವ ಮಡಪ್ಪಾಡಿ, ಸೋಮಶೇಖರ ಕೇವಳ, ಕರುಣಾಕರ...

“ಬದುಕು ಎಂದರೇನು..?” ಎನ್ನುವಂತಹ ಪ್ರಶ್ನೆ ಪ್ರತಿಯೊಬ್ಬರಿಗೂ ಕೂಡ ಒಮ್ಮೆಯಾದರೂ ಕಾಡಿಯೇ ಕಾಡಿರುತ್ತದೆ. ಆದರೆ ಹೆಚ್ಚಿನವರು ಈ ಪ್ರಶ್ನೆಗೆ ಉತ್ತರ ಹುಡುಕಲು ಹೋಗುವುದಿಲ್ಲ. ಒಂದು ವೇಳೆ ಉತ್ತರ ಹುಡುಕಿದರೂ ಕೂಡ ಈ ಪ್ರಶ್ನೆಯನ್ನು ತಮ್ಮ ವಾಸ್ತವ ಬದುಕಿಗೆ ಹೋಲಿಕೆ ಮಾಡಿಕೊಂಡು ಒಂದು ಉತ್ತರವನ್ನು ತಮಗೆ ತಾವೇ ಸೃಷ್ಟಿಸಿಕೊಳ್ಳುತ್ತಾರೆ. ಉದಾಹರಣೆಗೆ ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ ವ್ಯಕ್ತಿ “ಬದುಕು...

All posts loaded
No more posts