- Saturday
- April 19th, 2025

ಶ್ರೀ ಚೆನ್ನಕೇಶವ ದೇವಸ್ಥಾನ ಸುಳ್ಯಕ್ಕೆ ನೂತನ ಬ್ರಹ್ಮರಥ ಭೂ ಸ್ಪರ್ಶ ಕಾರ್ಯಕ್ರಮವು ಜ.೨ ರಂದು ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ನಡೆಯಿತು. ಬಳಿಕ ಸಭಾ ಕಾರ್ಯಕ್ರಮವು ವಿಧ್ಯುಕ್ತ ಚಾಲನೆ ನೀಡಲಾಯಿತು ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಉದ್ಘಾಟಿಸಿದರು. ಈ ಸಭಾ ವೇದಿಕೆಯಲ್ಲಿ ಪರಮಪೂಜ್ಯ ಶ್ರೀಶ್ರೀಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರುದೇವದತ್ತ ಸಂಸ್ಥಾನ...

ಅರಂತೋಡು: ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಹೊಸ ವರ್ಷ ಆಚರಣೆಗೆ ಸಿದ್ಧತೆ ಮಾಡುತ್ತಿದ್ದ ಆರೋಪದಲ್ಲಿ 30 ಮಂದಿ ಯುವಕರನ್ನು ಅರಣ್ಯ ಇಲಾಖೆಯವರು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿ, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಡಿ.31 ರಂದು ಸಂಜೆ ಕೋಳಿಕಲ್ಲು ಮಲೆ ಬೆಟ್ಟಕ್ಕೆ ಯುವಕರು ತೆರಳುತ್ತಿದ್ದಂತೆ...

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ವತಿಯಿಂದ ಸಂಪಾಜೆ ವಲಯ ತೊಡಿಕಾನ ಕಾರ್ಯಕ್ಷೇತ್ರದ ಆದಿಶಕ್ತಿ ಸಂಘದ ಸದಸ್ಯ ರಾದ ವಸಂತಿ ರವರ ಅತ್ತೆ ರಾಮಕ್ಕರವರಿಗೆ ವಾಟರ್ ಬೆಡ್ ನೀಡಲಾಯಿತು. ರಾಮಕ್ಕರವರು ಅನಾರೋಗ್ಯದಿಂದಿದ್ದು ಜನ ಮಂಗಳ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ನ್ನು ವಲಯ ಜನಜಾಗ್ರತಿ ಅಧ್ಯಕ್ಷರಾದ ಸೋಮಶೇಖರ ಪೈಕ ರವರು ವಿತರಿಸಿದರು. ವಲಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಹಿನ್ನೆಲೆಯಲ್ಲಿ ಶ್ರೀ ಉಳ್ಳಾಲ್ತಿ ಭಕ್ತವೃಂದ ಮುಕ್ಕೂರು ಹಾಗೂ ಶ್ರೀ ಕ್ಷೇತ್ರ ಪೆರುವಾಜೆ ಭಕ್ತವೃಂದದಿಂದ ಜ.1 ರಂದು ರಾತ್ರಿ ಕರಸೇವೆ ನಡೆಯಿತು. ಶ್ರೀ ಕ್ಷೇತ್ರದಲ್ಲಿ ದಿನಾಂಕ 16-01-2025 ರಿಂದ 21-01-2025 ರವರೆಗೆ ವಾರ್ಷಿಕ ಜಾತ್ರೆ ಮತ್ತು ಬ್ರಹ್ಮ ರಥೋತ್ಸವ ನಡೆಯಲಿದೆ.

ಶ್ರೀ ಕ್ಷೇತ್ರ ಬ್ರಹ್ಮರಗಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದವ್ಯಾಸ ತಂತ್ರಿಯವರ ನೇತೃತ್ವದಲ್ಲಿ 47ನೇ ವರ್ಷದ ಅಯ್ಯಪ್ಪ ದೀಪೋತ್ಸವ ಮತ್ತು ರಂಗಪೂಜೆ ಮಹೋತ್ಸವ ಜ 01ರಂದು ವಿಜೃಂಭಣೆಯಿಂದ ನಡೆಯಿತು.ಹಳೆಗೇಟು ನಿಂದ ಕೇರಳದ ಚೆಂಡೆ ವಾದನದೊಂದಿಗೆ, ಶ್ರೀ ದುರ್ಗಾಶಕ್ತಿ ಸೇವಾ ಬಳಗ ಹೊಸಗದ್ದೆ, ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಬೆಟ್ಟಂಪಾಡಿ, ಶ್ರೀ ಗಜಾನನ ಭಜನಾ ಮಂದಿರ...

ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ದಾನಿಗಳ ಸಹಕಾರದೊಂದಿಗೆ ಜನರಿಗೆ ತುರ್ತು ಸಂದರ್ಭಗಳಲ್ಲಿ ಉಪಯೋಗವಾಗಬೇಕೆಂಬ ಸದುದ್ದೇಶದಿಂದ ಖರೀದಿಸಿದ ನೂತನ ಆಂಬ್ಯುಲೆನ್ಸ್ ವಾಹನದ ಲೋಕಾರ್ಪಣಾ ಕಾರ್ಯಕ್ರಮವು ಜ.02 ರಂದು ನಡೆಯಲಿದ್ದು, ಸ್ಥಳೀಯ ವೈದ್ಯರುಗಳು ದೀಪ ಬೆಳಗಿಸುವುದರೊಂದಿಗೆ ನೂತನ ಆಂಬ್ಯುಲೆನ್ಸ್ ಗೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದವರು, ಊರಿನ...

ಗುತ್ತಿಗಾರು ಮುಖ್ಯಪೇಟೆಯಲ್ಲಿರುವ ಬಸ್ ನಿಲ್ದಾಣದ ಬಳಿಯ ಚರಂಡಿಯ ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಸಂಗ್ರಹವಾಗಿದೆ. ಚರಂಡಿ ತೆರೆದ ಸ್ಥಿತಿಯಲ್ಲಿರುವುದರಿಂದ ಪ್ರಾಣಿ,ಪಕ್ಷಿಗಳು ಕೊಳಚೆ ನೀರನ್ನು ಬಳಸುವಂತಾಗಿದೆ. ಇದು ಹೀಗೆ ಮುಂದುವರೆದರೇ ಸಾಂಕ್ರಾಮಿಕ ರೋಗ ಉತ್ಪತ್ತಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಸ್ಥಳಿಯಾಡಳಿತ ಹಾಗೂ ಆರೋಗ್ಯ ಇಲಾಖೆ ಗಮನ ಹರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಇದರ ಅಡಿಯಲ್ಲಿ ಕರ್ನಾಟಕ ಸಂಭ್ರಮ -50 2024-25 ನೇ ಸಾಲಿನ ಸ್ಮಾರ್ಟ್ ಟಿ.ವಿ.ಯನ್ನು ಸಾಹಿತಿ ಹಾಗೂ ನಿವೃತ್ತ ಪ್ರಾಚಾರ್ಯ, ಹಿರಿಯ ರಾಜಕಾರಣಿ, ಊರಿನ ಹಿರಿಯರಾದ ಪ್ರೊ.ರಾಧಾಕೃಷ್ಣ ಕೆ.ಇ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕುಂಬಳಚೇರಿ ಹಿ.ಪ್ರಾ ಶಾಲೆಗೆ ನೀಡಲಾಯಿತು.ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಇದ್ದರು.

(ರತ್ನಾಕರ ಸುಬ್ರಹ್ಮಣ್ಯ) ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಹೊಸ ವರ್ಷದ ಅಂಗವಾಗಿ ಭಕ್ತರು ಪುಷ್ಪಾಲಂಕಾರ ಸೇವೆ ನೆರವೇರಿಸಿದ್ದಾರೆ.ಬೆಂಗಳೂರಿನ ಭಕ್ತರು ನಿರಂತರವಾದ 7ನೇ ವರ್ಷದ ತಮ್ಮ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದ್ದಾರೆ. ಸುಮಾರು ರೂ 9 ಲಕ್ಷ ವೆಚ್ಚದ ಹೂವುಗಳನ್ನು ಉಪಯೋಗಿಸಿಕೊಂಡು ಶೃಂಗಾರ ಮಾಡಿದ್ದಾರೆ. ತೆಂಗಿನ ಸಿರಿ, ತರಕಾರಿ, ಹಣ್ಣುಗಳು ಮತ್ತು 6 ಬಗೆಯ ಹೂವನ್ನು ಉಪಯೋಗಿಸಿಕೊಂಡು...

All posts loaded
No more posts