Ad Widget

ಕಡಬ : ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ  ಪ್ರದೀಪ್ ಕಳಿಗೆ  ನೇಮಕ

ಕಡಬ  ಬ್ಲಾಕ್ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಯುವ ಮುಖಂಡ ಪ್ರದೀಪ್ ಕಳಿಗೆ ಅವರು ನೇಮಕಗೊಂಡಿದ್ದಾರೆ. ಇವರು ಬಿಳಿನೆಲೆ ವಲಯ ಕಾಂಗ್ರೆಸ್ ಕಾರ್ಯದರ್ಶಿ ಆಗಿದ್ದರು, ಕಡಬ ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ದುಡಿದಿದ್ದಾರೆ. ಹಲವು ಸಂಘ ಸಂಸ್ಥೆಗಳಲ್ಲಿ ಸಹ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ. ಇವರು ಹಿರಿಯ ಕಾಂಗ್ರೆಸಿಗ ಜನಾರ್ಧನ ಗೌಡ ಕಳಿಗೆ ಇವರ ಪುತ್ರ.

ಪೆರುವಾಜೆಯಲ್ಲಿ ನಡೆದ ಮ್ಯಾರಥಾನ್  – 163 ಕ್ರೀಡಾಪಟುಗಳು ಭಾಗಿ

ರಾಜ್ಯ ಪ್ರಶಸ್ತಿ ಪುರಸ್ಕೃತ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಹಾಗೂ ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಸಹಯೋಗದೊಂದಿಗೆ ಪೆರುವಾಜೆ ಮ್ಯಾರಥಾನ್ 2025 ಫೆ.09 ರಂದುಯುವಕ ಮಂಡಲದ ಆವರಣದಲ್ಲಿ ನಡೆಯಿತು.. ರಾಷ್ಟ್ರೀಯ ಕ್ರೀಡಾಪಟು ಸುಬ್ರಹ್ಮಣ್ಯ ಕೆ ಎಮ್ ಮ್ಯಾರಥಾನ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಲ.ಉಷಾದೇವಿ ರಾವ್ ಪೆರುವಾಜೆ, ಭಾವೈಕ್ಯ...
Ad Widget

ಫೆ.15-16 ರಂದು ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ 5ನೇ ವರ್ಷದ ಒತ್ತೆಕೋಲ ಮಹೋತ್ಸವ

ಕೊಲ್ಲಮೊಗ್ರು ಗ್ರಾಮದ ಗಡಿಕಲ್ಲು ವಿಷ್ಣುನಗರ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಹಾಗೂ 16 ರಂದು 5ನೇ ವರ್ಷದ ಒತ್ತೆಕೋಲ ಮಹೋತ್ಸವವು ನಡೆಯಲಿದ್ದು, ಫೆ.15 ರಂದು ಪ್ರಾತಃಕಾಲ 5:00 ಗಂಟೆಗೆ ಅಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ 9:30ಕ್ಕೆ ಗಣಪತಿಹೋಮ, ಬೆಳಿಗ್ಗೆ 10:00 ಗಂಟೆಗೆ ಉಗ್ರಾಣ ಮುಹೂರ್ತ, ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 1:00 ಗಂಟೆಗೆ ಅನ್ನಸಂತರ್ಪಣೆ,...

ಕನಕಮಜಲು : ಹಿಟ್ & ರನ್ ಪ್ರಕರಣದ ಕಾರು ಪತ್ತೆ – ಇಕೋ ಕಾರಿನ ಮಾಲಕ ನಾಪತ್ತೆ

ಫೆ 08 ರಂದು ಕನಕಮಜಲಿನ ಸುಣ್ಣಮೂಲೆಯಲ್ಲಿ ಪಾದಾಚಾರಿಗಳ ಸಾವಿಗೆ ಕಾರಣವಾಗಿದ್ದ ವಾಹನ ಪತ್ತೆ ಹಚ್ಚುವಲ್ಲಿ ಪೋಲೀಸರು ಯಶಸ್ವಿಯಾಗಿದ್ದು ಇಂದು ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಭೇದಿಸಲು ಪೋಲೀಸರು ವ್ಯಾಪಕ ತನಿಖೆ ಆರಂಭಿಸಿದ್ದರು. ಜಾಲ್ಸೂರಿನಿಂದ ಹಿಡಿದು ಸುಳ್ಯದ ತನಕ ಎಲ್ಲಾ ರಸ್ತೆ ಕಾಣುವ ಸಿಸಿ ಟಿವಿ ಗಳನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಒಂದು ಇಕೋ ಕಾರು ಸಂಶಯಾಸ್ಪದವಾಗಿ...

ಅಜ್ಜಾವರ : ಕೆಡ್ಡಸ ಆಚರಣೆ

ಚೈತ್ರ ಯುವತಿ ಮಂಡಲ ಅಜ್ಜಾವರ , ಪ್ರತಾಪ ಯುವಕ ಮಂಡಲ ಅಜ್ಜಾವರ ಹಾಗೂ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ತುಳುನಾಡಿನ ವಿಶಿಷ್ಟ ಪರ್ಬವಾದ ಕೆಡ್ಡಸ ಆಚರಣೆ ಕಾರ್ಯಕ್ರಮ ಮಾವಿನಪಳ್ಳದಲ್ಲಿ ನಡೆಯಿತು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ವಹಿಸಿದ್ದರು. ಕೆಡ್ಡಸ ಆಚರಣೆಯ ಮಹತ್ವದ ಬಗ್ಗೆ ಮಾಹಿತಿಯನ್ನು ಶ್ರೀ ಶಾಸ್ತಾವೇಶ್ವರ ದೇವಸ್ಥಾನ...

ಸುಳ್ಯದ ಜೀವನದಿಗೆ ವಿಷಪ್ರಾಶನ –  ನೀರಿನಲ್ಲಿ ಸತ್ತು ತೇಲಿದ ಮೀನುಗಳು – ಸೂಕ್ತ ಕ್ರಮಕ್ಕೆ ಜನತೆ ಆಗ್ರಹ

ಜೀವನದಿಯಾಗಿರುವ ಪಯಸ್ವಿನಿ ಸುಳ್ಯದ ನಗರ ಹಾಗೂ ಅಜ್ಜಾವರ ಗ್ರಾಮದಲ್ಲಿನ ಜನರ ಕುಡಿಯುವ ನೀರಿಗೆ  ವಿಷಪ್ರಾಶನವಾಗಿದ್ದು ಇದೀಗ ಮೀನು ಸೇರಿದಂತೆ ಹಲವು ಜಲಚರಗಳ ಮಾರಣಹೋಮವೇ ನಡೆದು ಹೋಗಿದೆ. ಫೆ.9ರಂದು ಸುಳ್ಯದ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ ವ್ಯಾಪ್ತಿಯಲ್ಲಿ  ಸಾವಿರಾರು ಮೀನುಗಳು ಸಾವಿಗೀಡಾಗಿದ್ದು, ದಿ.10 ರಂದು ಮುಂಜಾನೆ ಮತ್ತೆ ಕಾಂತಮಂಗಲ ದಲ್ಲಿಯೂ ಮೀನುಗಳು ಸತ್ತು ತೇಲಲಾರಂಭಿಸಿದವು. ನದಿ ನೀರಿನಲ್ಲಿ...

ಕಂದ್ರಪ್ಪಾಡಿ ಜಾತ್ರಾ ಮುಹೂರ್ತ – ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದ ಜಾತ್ರಾ ಮುಹೂರ್ತ ಅಂಗವಾಗಿ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಕಾರ್ಯಕ್ರಮ ಶಂಖಚೂಡ ಕ್ಷೇತ್ರದಲ್ಲಿ ಫೆ.10 ರಂದು ನಡೆಯಿತು. ಈ ಸಂದರ್ಭದಲ್ಲಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಆಡಳಿತ ಮೊಕ್ತೇಸರರಾದ ಕಾಳಿಕಾ ಪ್ರಸಾದ್ ಮುಂಡೋಡಿ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ...

ನಾಳೆ (ಫೆ.11) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.11 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ – ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ

ಮಡಪ್ಪಾಡಿಯ ಶ್ರೀರಾಮ ಭಜನಾ ಮಂಡಳಿಯ ಸಭೆ ಫೆ.07 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಸಮಿತಿ ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ವಿನ್ಯಾಸ್ ಪಾರೆಮಜಲು, ಕಾರ್ಯದರ್ಶಿಯಾಗಿ ಪ್ರೇಕ್ಷಿತ್ ಬೊಮ್ಮೆಟ್ಟಿ , ಉಪಾಧ್ಯಕ್ಷರಾಗಿ ರಂಜಿತ್ ಬೊಮ್ಮೆಟ್ಟಿ ಹಾಗೂ ಕುಶನ್ ಅಂಬೆಕಲ್ಲು, ಕೋಶಾಧಿಕಾರಿಯಾಗಿ ಚೇತನ್ ಕುಚ್ಚಾಲ, ಜೊತೆ ಕಾರ್ಯದರ್ಶಿಯಾಗಿ ಸುಬ್ರಹ್ಮಣ್ಯ ಬೊಮ್ಮೆಟ್ಟಿ ಹಾಗೂ ಸದಸ್ಯರು ಮತ್ತು ಗೌರವ ಸಲಹೆಗಾರರನ್ನು...

ಎಡನೀರು ಮಠದಲ್ಲಿ ಜಿ.ಎಲ್‌.ಆಚಾರ್ಯ ಪುತ್ತೂರು ಶತಮಾನದ ಸ್ಮರಣೆ ಸಾಧಕರು ಜನಮಾನಸದಲ್ಲಿ ಜೀವಂತ: ಡಿ.ವಿ.ಸದಾನಂದ

ಫೆ. 9: ಸಮಾಜ ದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹೇಳಿದರು. ಸ್ವರ್ಣ ಉದ್ಯಮಿ, ಸಮಾಜ ಸೇವಕರೂ ಆಗಿದ್ದಂತಹ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಥರಣೆ...
Loading posts...

All posts loaded

No more posts

error: Content is protected !!