- Thursday
- February 20th, 2025

ಮನೆಯಲ್ಲಿ ಕೆಲಸ ಮಾಡುವ ವೇಳೆ ಆಯತಪ್ಪಿ ಬಿದ್ದು ಕಾಲು ಮುರಿತಗೊಂಡು ಮನೆಯಲ್ಲಿ ಕಷ್ಟ ಪಡುತ್ತಿರುವ ಅರಂತೋಡು ಗ್ರಾಮದ ಲೀಲಾವತಿ ಬೆದ್ರಕಾಡು ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ 30 ಕೆಜಿ ಅಕ್ಕಿ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಆರಂತೋಡು ಘಟಕದ ಅಧ್ಯಕ್ಷರಾದ ನವೀನ ಕಲ್ಲುಗುಡ್ಡೆ, ಕಾರ್ಯದರ್ಶಿ ರಾಮಕೃಷ್ಣ ಆರಮನೆಗಯ ಅಂಬೇಡ್ಕರ್ ರಕ್ಷಣಾ ವೇದಿಕೆಯ ಉಪಾಧ್ಯಕ್ಷರು,ತಾಲೂಕು...

ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಪದವೀಧರೇತರ ಶಾಲಾ ಮುಖ್ಯೋಪಾಧ್ಯಾಯರ ಸಂಘ (ರಿ ), ಬೆಂಗಳೂರು, ಸುಳ್ಯ ತಾಲೂಕು ಘಟಕದ ಪುನರ್ ರಚನಾ ಸಭೆ ಫೆಬ್ರವರಿ 15 ರಂದು ಸುಳ್ಯ ತಾಲೂಕು ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ನಿಂಗರಾಜು.ಕೆ. ಪಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿ ಅಧ್ಯಕ್ಷ ದೇವರಾಜ್ ಎಸ್...

ಸುಳ್ಯ ಪಯಸ್ವಿನಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಫೆ.16ರಂದು ಮಧ್ಯಾಹ್ನ ಕೊಳೆತ ಸ್ಥಿತಿಯಲ್ಲಿ ಕಂಡು ಬಂದ ಶವದ ಗುರುತು ಪತ್ತೆಯಾಗಿದ್ದು, ಪಿರಿಯಾಪಟ್ಟಣದ ಅಜಿತ್ (24) ಎಂದು ತಿಳಿದುಬಂದಿದೆ.ಈತ ಸುಳ್ಯದ ವೆಲ್ಕಮ್ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನೆಂದೂ, ಕೆಲ ತಿಂಗಳ ಹಿಂದೆ ಊರಿಗೆ ಹೋಗಿದ್ದ. ವಾಪಸು ಕೆಲಸಕ್ಕೆ ಬಂದಿರಲಿಲ್ಲ. ಫೆ.16ರಂದು ಪಯಸ್ವಿನಿ ನದಿ ಹರಿಯುವ ಅಂಗಡಿಮಠ ಗೋಳಿಮೂಲೆ ಎಂಬಲ್ಲಿ...

ಸುಳ್ಯದಲ್ಲಿ ನೇಸರ ಮಿನರಲ್ ವಾಟರ್ ಉದ್ಯಮ ನಡೆಸುತ್ತಿದ್ದ ಯುವಕ ಕೊಲ್ಲಮೊಗ್ರ ಗ್ರಾಮದ ಚಾಂತಾಳ ದಿ.ಗಣಪತಿ ಮಾಸ್ತರ್ ರವರ ಪುತ್ರ ಸಚಿನ್ ಚಾಂತಾಳ (38) ಬ್ರೈನ್ ಹೆಮರೇಜ್ ನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಅಡ್ಕಾರ್ ಕೋನಡ್ಕಪದವು ನಲ್ಲಿ ಮಯೂರ್ ಇಂಡಸ್ಟ್ರೀಸ್ (ನೇಸರ ಮಿನರಲ್ ವಾಟರ್ ) ನಡೆಸುತ್ತಿದ್ದರು. ಮೃತರು ಪತ್ನಿ...

ಕೊಲ್ಲಮೊಗ್ರು ಗ್ರಾಮದ ಜಯಪ್ರಕಾಶ್ ಕಜ್ಜೋಡಿ ಎಂಬುವವರ ರಬ್ಬರ್ ಸ್ಮೋಕ್ ಹೌಸ್ ಗೆ ಫೆ.15 ರಂದು ರಾತ್ರಿ 10 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.ಈ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿದ ಮುಳ್ಳುಬಾಗಿಲು ಬೈಲಿನ ಜನರು, ಹರಿಹರ ಹಾಗೂ ಐನೆಕಿದು ಭಾಗದ ಕೆಲವು ಯುವಕರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದು,...

ಕಳಂಜ ಗ್ರಾಮದ ನಾಲ್ಗುತ್ತು ಶ್ರೀಮತಿ ಪಾರ್ವತಿ ಮತ್ತು ದಿ|ಮೋನಪ್ಪ ಗೌಡರ ಪುತ್ರ ಚಿ|ರಾ| ಗಗನ್ ರವರ ವಿವಾಹವು ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಬುಡಾರಮನೆ ಶ್ರೀಮತಿ ಪುಷ್ಪಾವತಿ ಮತ್ತು ಶ್ರೀ ಹೊನ್ನಪ್ಪ ಗೌಡರ ಪುತ್ರಿ ಚಿ|ಸೌ| ವಿದ್ಯಾ ರೊಂದಿಗೆ ಫೆ.16ರಂದು ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜರುಗಿತು. ಪೆರುವಾಜೆ ಜೆ.ಡಿ. ಆಡಿಟೋರಿಯಂನಲ್ಲಿ ಮಧ್ಯಾಹ್ನ ಅತಿಥಿ ಸತ್ಕಾರ...

ಕರ್ನಾಟಕ ಘನ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಯವರು ಬಹು ಬೇಡಿಕೆಯ ಅರಂತೋಡು ಎಲಿಮಲೆ ರಸ್ತೆ ಯನ್ನು ವೀಕ್ಷಿಸಿ ಆರಂತೋಡಿನಿಂದ ಮರ್ಕಂಜದ ಸನಿಹವರೆಗೆ ಸುಮಾರು 8ಕಿ. ಮೀ ರಸ್ತೆ ಸ್ವತಃ ವೀಕ್ಷಿಸಿದರು. ಶೀಘ್ರದಲ್ಲಿ ರಸ್ತೆಯನ್ನು ಸಂಪೂರ್ಣ ಅಗಲೀಕರಣಗೊಳಿಸಲು ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಕೇಶವ ಅಡ್ತಲೆ, ಕಾಂಗ್ರೆಸ್ ಮುಖಂಡ ಟಿ....

ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ.15 ರಂದು ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆದ ಸಂಧ್ಯಾರಶ್ಮಿ ಸಾಹಿತ್ಯ ಸಂಘದ “ತಿಂಗಳ ಸಾಹಿತ್ಯ ಸಂವಾದ ಮಾಲಿಕೆ” ಕಾರ್ಯಕ್ರಮದಲ್ಲಿ “ಲೇಖಕಿ ಶ್ರೀಮತಿ ಲಲಿತಾಜ ಮಲ್ಲಾರ ರವರ ಸಾಹಿತ್ಯ ವಿಚಾರ ಮಂಡನೆ” ನಡೆಯಿತು.ಸಂಧ್ಯಾರಶ್ಮಿ ಸಾಹಿತ್ಯ...

ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಮತ್ತು ಅದರ ಬೆಳವಣಿಗೆಯಲ್ಲಿ ಗಣನೀಯ ಸಾಧನೆ ಮಾಡಿದ ಆರು ಮಂದಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು. ಅವರು ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂಶೋಧನಾ ಪ್ರಬಂಧಗಳ ಬಿಡುಗಡೆ ಕಾರ್ಯಕ್ರಮದ...