Ad Widget

ರಾಜ್ಯಾದ್ಯಾಂತ ಹೌಸ್ ಫುಲ್ ತೆರೆ ಕಂಡ ಸುಳ್ಯದ ಯುವಕ ನಿರ್ಮಿಸಿದ ಭಾವ ತೀರ ಯಾನ ಚಲನಚಿತ್ರ – ಫೆ.23 ರಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಎರಡು ಶೋ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21 ಮತ್ತು 22 ರಂದು...

ಫೆ.24 ರಂದು ಉದ್ಯೋಗ ಮೇಳ

ಮಡಿಕೇರಿ : ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್...
Ad Widget

ಐವರ್ನಾಡಿನಲ್ಲಿ ಅಂತರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದ್ದಾರೆ. ಈಸಂದರ್ಭದಲ್ಲಿ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು, ಸಂಚಾಲಕ ವಾಸುದೇವ ಬೊಳುಬೈಲು, ಸ್ವಾಗತ ಸಮಿತಿ ಸಂಚಾಲಕ ದಿನೇಶ್ ಮಡ್ತಿಲ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಮತ್ತಿತರರು...

ಗುತ್ತಿಗಾರು ಭಾಗದಲ್ಲಿ  ಸುರಿದ ಮಳೆ – ತಂಪಾದ ಇಳೆ

https://youtu.be/1xbZ8hpEu7k?si=0bW9D_7UTKh69p5y ಬಿಸಿಲ ಬೇಗೆಯ ಮಧ್ಯೆ ಇಂದು ಗುತ್ತಿಗಾರಿನಲ್ಲಿ ಇಂದು ಸಂಜೆ ಪ್ರಥಮ ಮಳೆ ಸುರಿದಿದೆ. 20 ನಿಮಿಷಗಳ ಕಾಲ ಸುರಿದ ಮಳೆ ಬಿಸಿಯೇರಿದ ಇಳೆಯನ್ನು ಸ್ವಲ್ಪ ಮಟ್ಟಿಗೆ ತಂಪು ಮಾಡಿದೆ. ಜತೆಗೆ ಅಕಾಲಿಕ ಮಳೆ ಕೃಷಿಕರನ್ನು ಕಂಗೆಡಿಸಿದೆ. ಗುತ್ತಿಗಾರಿನಲ್ಲಿ ಬಿಸಿಲು ಹಾಗೂ ಸೊಸೈಟಿ ಚುನಾವಣೆಯ ಕಾವು ಜೋರಾಗಿದ್ದು ಮಳೆ ಸ್ವಲ್ಪ ತಂಪಾಗಿಸಿದೆ.

ಮಾ.02 : ನಿನಾದ ಸಾಂಸ್ಕೃತಿಕ ಕೇಂದ್ರದಲ್ಲಿ ಕೃತಿ ಬಿಡುಗಡೆ ಹಾಗೂ ಸುಮಧುರ ಸಂಜೆ ಕಾರ್ಯಕ್ರಮ

ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಳಂಜದಲ್ಲಿ ಮಾ.02 ರಂದು ಸಂಜೆ ಗಂಟೆ 4.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಮಕೃಷ್ಣ ಭಟ್ ಚೂಂತಾರು ಅವರ ಶೈಕ್ಷಣಿಕ ಕೃತಿಯನ್ನು ಖ್ಯಾತ ಶಿಕ್ಷಣ ತಜ್ಞ ಪ್ರೊ. ರಾಧಾಕೃಷ್ಣ ಕೆ.ಇ.ಬಿಡುಗಡೆಗೊಳಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಭಾವಗೀತೆ,...

ನಗರಗಳಲ್ಲಿ ಬಿ ಖಾತಾ ಆಂದೋಲನ, ಜನರ ಕಣ್ಣೊರೆಸುವ ತಂತ್ರವಾಗಿದ್ದು ಖಜಾನೆ ತುಂಬಿಸುವ ಒಳತಂತ್ರ – ವಿನಯ ಕಂದಡ್ಕ ಹೇಳಿಕೆ

ನಗರಗಳಲ್ಲಿ ಎಲ್ಲಾ ನಿವೇಶನಗಳಿಗೆ ಎ ಖಾತಾ ಹಾಗೂ ಬಿ ಖಾತಾ ಎಂದು ವರ್ಗಿಕರಿಸಿ ಸರಕಾರವು ಅಧಿಸೂಚನೆ ಹೊರಡಿಸಿ ತುರಾತುರಿಯಲ್ಲಿ ಬಿ ಖಾತಾ ನೀಡಲು ಆಂದೋಲನ ಕ್ಕೆ ಆದೇಶ ನೀಡಿರುವುದು ಜನಗಳ ಕಣ್ಣೊರೆಸುವ ತಂತ್ರವಷ್ಟೇ ಆಗಿದೆ. ಇದರ ಒಳತಂತ್ರ ಖಾಲಿಯಾಗಿರುವ ಸರಕಾರದ ಖಜಾನೆ ತುಂಬಲು ಇನ್ನೊಂದು ಮಾರ್ಗವಷ್ಟೇ ಆಗಿದೆ ಎಂದು ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವ ಸಂಪನ್ನ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಿಂದ 22 ರವರೆಗೆ ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.ಜಾತ್ರೋತ್ಸವದ ಮೊದಲ ದಿನವಾದ ಫೆ.20 ಗುರುವಾರದಂದು ಬೆಳಿಗ್ಗೆ ಮೆರವಣಿಗೆಯ ಮೂಲಕ ಶ್ರೀ ದೇವರಿಗೆ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ,...

ಅರೆಭಾಷೆ ಕಾಮಿಡಿ ಸೀಸನ್ 1 ಆಡಿಶನ್ ಶೋ ದಲ್ಲಿ ಕೆ ಎಸ್ ಎಸ್ ಕಾಲೇಜು ತಂಡ ಆಯ್ಕೆ.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, v4 ನ್ಯೂಸ್ ಮತ್ತು ಎಂ.ಬಿ ಫೌಂಡೇಶನ್ ಸಹಯೋಗದಲ್ಲಿ ನಡೆಸಿದ ಅರೆ ಭಾಷೆ ಕಾಮಿಡಿ ಸೀಸನ್ 1 ಆಡಿಶನ್ ಶೋ ದಲ್ಲಿ ಕೆ. ಎಸ್ .ಎಸ್ ಕಾಲೇಜಿನ ತಂಡ ಆಯ್ಕೆಯಾಗಿದೆ. ಸಂಸ್ಥೆಯ ಪ್ರಾಂಶುಪಾಲ ಡಾ ದಿನೇಶ ಪಿ.ಟಿ ಅವರ ಸಹಕಾರದೊಂದಿಗೆ ಕನ್ನಡ ವಿಭಾಗದ ಉಪನ್ಯಾಸಕಿ ಸುಮಿತ್ರ ಅವರ ಮಾರ್ಗದರ್ಶನದಲ್ಲಿ...

ತಳೂರು: ಪೂಜಾರಿಮನೆ ಚಂದ್ರಶೇಖರ (ಪುಟ್ಟ) ನಿಧನ

ದೇವಚಳ್ಳ ಗ್ರಾಮದ ತಳೂರು ಪೂಜಾರಿಮನೆ ಟಿ. ಪಿ. ಚಂದ್ರಶೇಖರ (ಪುಟ್ಟ) ಎಂಬವರು ಫೆ.21 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 50 ವರ್ಷ ವಯಸ್ಸಾಗಿತ್ತು. ಚಂದ್ರಶೇಖರ ರವರು ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಮನೆಯವರು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರು. ಅಲ್ಲಿಯೂ ಅವರಿಗೆ...

ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಕುಕ್ಕೆಶ್ರೀ ಸುಬ್ರಹ್ಮಣ್ಯ ಭೇಟಿ

ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಯಸ್.ಜಾನಕಿ ಯವರು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು.ಇವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತ್ ಸದಸ್ಯ ಹರೀಶ ಇಂಜಾಡಿಯವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಜಯರಾಮ ರಾವ್,...
Loading posts...

All posts loaded

No more posts

error: Content is protected !!