Ad Widget

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ

. . . . . . . . .

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು. ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಸದಸ್ಯರಾದ ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲ್ತಡ್ಕ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಸತ್ಯಪ್ರಸಾದ್ ಗಬ್ಬಲ್ಕಜೆ, ಚಂಚಲಾಕ್ಷಿ ಕುಲ್ಚಾರು, ಮಾಲತಿ ಭೋಜಪ್ಪ ಹಾಸ್ಸಾರೆ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ಕೇಶವಮೂರ್ತಿ ಉಪಸ್ಥಿತರಿದ್ದರು.

ಕೇಶವ ಕೊಳಲುಮೂಲೆಯವರನ್ನು ವಸಂತ ಪೆಲ್ತಡ್ಕ ಸೂಚಿಸಿ ಸತ್ಯಪ್ರಕಾಶ್ ಗಬ್ಬಲ್ಕಜೆ ಅನುಮೋದಿಸಿದರು. ಕಾರ್ಯನಿರ್ವಾಹಕಧಿಕಾರಿ ಅವಿನ್ ರಂಗತ್ ಮಲೆ ಅಧ್ಯಕ್ಷರ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು. ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!